<p><strong>ಹೈದರಾಬಾದ್</strong>: ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ‘ವೈಕುಂಠ ದ್ವಾರ ದರ್ಶನ’ದ ಟಿಕೆಟ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡಿದ್ದ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇಂದು (ಶುಕ್ರವಾರ) ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಿತ್ತು.</p><p>ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸೂಚನೆಯಂತೆ ಟಿಟಿಡಿ ಅಧಿಕಾರಿಗಳು, ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಿದ್ದಾರೆ ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ.</p>.ವಾರಕ್ಕೆ 90 ಗಂಟೆ ದುಡಿಮೆ: L&T ಅಧ್ಯಕ್ಷರ ಮಾತಿಗೆ ನಟಿ ದೀಪಿಕಾ ಸಹಿತ ಹಲವರು ಕಿಡಿ.ಒಂದು ಕಣ್ಣು ಕಳೆದುಕೊಂಡರೂ ಶೇ 100ರಷ್ಟು ಅಂಗವೈಕಲ್ಯ: ಸುಪ್ರೀಂ ಕೋರ್ಟ್. <p>ಘಟನೆಯಲ್ಲಿ ಗಾಯಗೊಂಡು ಚೇತರಿಕೆ ಕಂಡ ಭಕ್ತಾದಿಗಳು ಇಂದು ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಬಳಿಕ ಜಿಲ್ಲಾಡಳಿತ ಅವರನ್ನು ಮನೆಗಳಿಗೆ ಕಳುಹಿಸಲು ವಾಹನ ವ್ಯವಸ್ಥೆ ಸಹ ಮಾಡಿತ್ತು ಎಂದು ಟಿಟಿಡಿ ಹೇಳಿದೆ.</p><p>ಶ್ರೀವೆಂಕಟೇಶ್ವರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್ವಿಐಎಂಎಸ್) ಚಿಕಿತ್ಸೆ ಪಡೆದ 32 ಗಾಯಾಳುಗಳು ಬಿಡುಗಡೆಗೊಂಡರು. ಇನ್ನೂ ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಾಳೆ ಬಿಡುಗಡೆಗೊಳ್ಳಬಹುದು ಎಂದು ತಿಳಿದು ಬಂದಿದೆ.</p><p>ಇಂದು ವೈಕುಂಠ ಏಕಾದಶಿಯ ಪ್ರಯುಕ್ತ ವೆಂಕಟೇಶ್ವರನಿಗೆ ವಿಶೇಷ ಪೂಜಾ– ಪ್ರಾರ್ಥನೆ ಸಲ್ಲಿಸಲಾಗಿದೆ. ಇಡೀ ತಿರುಮಲ 'ಗೋವಿಂದಾ... ಗೋವಿಂದಾ' ಎಂಬ ದಿವ್ಯ ಘೋಷಗಳೊಂದಿಗೆ ಮೊಳಗಿತ್ತು ಎಂದು ಟಿಟಿಡಿ ಪ್ರಕಟಣೆಯಲ್ಲಿ ತಿಳಿಸಿದೆ.</p>.ಯುವಿ ವೃತ್ತಿಜೀವನ ಮೊಟಕುಗೊಳ್ಳಲು ಕೊಹ್ಲಿ ಪರೋಕ್ಷ ಹೊಣೆ: ರಾಬಿನ್ ಉತ್ತಪ್ಪ .ಗುಜರಾತ್ | 8 ವರ್ಷದ ಬಾಲಕಿಗೆ ಹೃದಯ ಸ್ತಂಭನ; ಸಿಸಿಟಿವಿಯಲ್ಲಿ ಸೆರೆ. <p>ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ಸಾವಿರಾರು ಭಕ್ತಾರು ಬರುತ್ತಾರೆ.</p><p>ತಿರುಪತಿಯ ಎಂಜಿಎಂ ಶಾಲೆ ಬಳಿಯ ಬೈರಾಗಿ ಪಟ್ಟೇಡ ಬಳಿ ಬುಧವಾರ ರಾತ್ರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ಗಾಗಿ ನೂರಾರು ಭಕ್ತರು ಮುಗಿಬಿದ್ದು ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಆರು ಭಕ್ತರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ! TTD ಅಧ್ಯಕ್ಷರು ಹೇಳಿದ್ದೇನು?.ಸಾವರ್ಕರ್ ಕುರಿತು ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ‘ವೈಕುಂಠ ದ್ವಾರ ದರ್ಶನ’ದ ಟಿಕೆಟ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡಿದ್ದ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇಂದು (ಶುಕ್ರವಾರ) ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಿತ್ತು.</p><p>ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸೂಚನೆಯಂತೆ ಟಿಟಿಡಿ ಅಧಿಕಾರಿಗಳು, ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಿದ್ದಾರೆ ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ.</p>.ವಾರಕ್ಕೆ 90 ಗಂಟೆ ದುಡಿಮೆ: L&T ಅಧ್ಯಕ್ಷರ ಮಾತಿಗೆ ನಟಿ ದೀಪಿಕಾ ಸಹಿತ ಹಲವರು ಕಿಡಿ.ಒಂದು ಕಣ್ಣು ಕಳೆದುಕೊಂಡರೂ ಶೇ 100ರಷ್ಟು ಅಂಗವೈಕಲ್ಯ: ಸುಪ್ರೀಂ ಕೋರ್ಟ್. <p>ಘಟನೆಯಲ್ಲಿ ಗಾಯಗೊಂಡು ಚೇತರಿಕೆ ಕಂಡ ಭಕ್ತಾದಿಗಳು ಇಂದು ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಬಳಿಕ ಜಿಲ್ಲಾಡಳಿತ ಅವರನ್ನು ಮನೆಗಳಿಗೆ ಕಳುಹಿಸಲು ವಾಹನ ವ್ಯವಸ್ಥೆ ಸಹ ಮಾಡಿತ್ತು ಎಂದು ಟಿಟಿಡಿ ಹೇಳಿದೆ.</p><p>ಶ್ರೀವೆಂಕಟೇಶ್ವರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್ವಿಐಎಂಎಸ್) ಚಿಕಿತ್ಸೆ ಪಡೆದ 32 ಗಾಯಾಳುಗಳು ಬಿಡುಗಡೆಗೊಂಡರು. ಇನ್ನೂ ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಾಳೆ ಬಿಡುಗಡೆಗೊಳ್ಳಬಹುದು ಎಂದು ತಿಳಿದು ಬಂದಿದೆ.</p><p>ಇಂದು ವೈಕುಂಠ ಏಕಾದಶಿಯ ಪ್ರಯುಕ್ತ ವೆಂಕಟೇಶ್ವರನಿಗೆ ವಿಶೇಷ ಪೂಜಾ– ಪ್ರಾರ್ಥನೆ ಸಲ್ಲಿಸಲಾಗಿದೆ. ಇಡೀ ತಿರುಮಲ 'ಗೋವಿಂದಾ... ಗೋವಿಂದಾ' ಎಂಬ ದಿವ್ಯ ಘೋಷಗಳೊಂದಿಗೆ ಮೊಳಗಿತ್ತು ಎಂದು ಟಿಟಿಡಿ ಪ್ರಕಟಣೆಯಲ್ಲಿ ತಿಳಿಸಿದೆ.</p>.ಯುವಿ ವೃತ್ತಿಜೀವನ ಮೊಟಕುಗೊಳ್ಳಲು ಕೊಹ್ಲಿ ಪರೋಕ್ಷ ಹೊಣೆ: ರಾಬಿನ್ ಉತ್ತಪ್ಪ .ಗುಜರಾತ್ | 8 ವರ್ಷದ ಬಾಲಕಿಗೆ ಹೃದಯ ಸ್ತಂಭನ; ಸಿಸಿಟಿವಿಯಲ್ಲಿ ಸೆರೆ. <p>ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ಸಾವಿರಾರು ಭಕ್ತಾರು ಬರುತ್ತಾರೆ.</p><p>ತಿರುಪತಿಯ ಎಂಜಿಎಂ ಶಾಲೆ ಬಳಿಯ ಬೈರಾಗಿ ಪಟ್ಟೇಡ ಬಳಿ ಬುಧವಾರ ರಾತ್ರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ಗಾಗಿ ನೂರಾರು ಭಕ್ತರು ಮುಗಿಬಿದ್ದು ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಆರು ಭಕ್ತರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ! TTD ಅಧ್ಯಕ್ಷರು ಹೇಳಿದ್ದೇನು?.ಸಾವರ್ಕರ್ ಕುರಿತು ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>