<p><strong>ಹೈದರಾಬಾದ್:</strong> ತಿರುಪತಿ ದೇವಸ್ಥಾನಕ್ಕೆ ಸೇರಿದ ಸ್ಥಿರಾಸ್ತಿಗಳ ಮಾರಾಟ ನಿರ್ಧಾರವು ತೀವ್ರ ವಿವಾದ ಹಾಗೂವಿರೋಧಕ್ಕೆ ಕಾರಣವಾದ ಬೆನ್ನಲ್ಲೇ, ಭಕ್ತರು ದೇಣೆಗೆಯಾಗಿ ನೀಡಿದ ಸ್ಥಿರಾಸ್ತಿಗಳನ್ನು ಮಾರಾಟ ಮಾಡದೇ ಇರಲು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿ ನಿರ್ಧರಿಸಿದೆ.</p>.<p>ಗುರುವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ‘ಒತ್ತುವರಿಯಾಗಿರುವ ಆಸ್ತಿಗಳನ್ನು ಹೇಗೆ ವಾಪಸ್ ಪಡೆದು ಬಳಸಿಕೊಳ್ಳಬಹುದು ಎನ್ನುವುದರ ಕುರಿತು ಸಲಹೆಗಳನ್ನು ಸ್ವೀಕರಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಇದರಲ್ಲಿ ಅಧಿಕಾರಿಗಳು, ಭಕ್ತರು, ಧಾರ್ಮಿಕ ಸಂಘಸಂಸ್ಥೆಗಳ ಮುಖ್ಯಸ್ಥರು ಇರಲಿದ್ದಾರೆ’ ಎಂದು ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ತಿಳಿಸಿದರು.</p>.<p>ಲಾಕ್ಡೌನ್ ಕಾರಣದಿಂದಾಗಿದೇವಸ್ಥಾನಕ್ಕೆ ಆದಾಯ ಕುಸಿತವಾದ ಸಂದರ್ಭದಲ್ಲಿ ಆಸ್ತಿ ಹರಾಜು ಹಾಕುವ ನಿರ್ಧಾರಕ್ಕೆ ಮಂಡಳಿ ಬಂದಿತ್ತು. ಇದಕ್ಕೆ ರಾಷ್ಟ್ರದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಟಿಟಿಡಿಯ ಈ ಚಿಂತನೆಗೆ ಜಗನ್ಮೋಹನ್ ರೆಡ್ಡಿ ಸರ್ಕಾರ ಸೋಮವಾರ ತಡೆ ನೀಡಿತ್ತು. ಆಸ್ತಿ ಹರಾಜು ವಿಚಾರವನ್ನು ಸಮರ್ಥಿಸಿಕೊಂಡಿರುವ ಮಂಡಳಿ, ಈ ಯೋಜನೆಯನ್ನು ಹಿಂದಿನ ಮಂಡಳಿಯೇ ಪ್ರಾರಂಭಿಸಿತ್ತು ಎಂದಿದೆ.</p>.<p>ಈ ಘಟನೆಗಳ ಕುರಿತು ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಮಂಡಳಿಯು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿದೆ ಎಂದು ಸುಬ್ಬಾರೆಡ್ಡಿ ತಿಳಿಸಿದರು.</p>.<p><strong>ದೇವಸ್ಥಾನ ತೆರೆಯಲು ಸಿದ್ಧತೆ:</strong> ‘ದೇವಸ್ಥಾನ ತೆರೆಯಲು ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ಸರ್ಕಾರದ ಹಸಿರು ನಿಶಾನೆಗೆ ಕಾಯುತ್ತಿದ್ದೇವೆ. ಭಕ್ತರು ಅಂತರ ಕಾಪಾಡಿಕೊಂಡು ದೇವರ ದರ್ಶನ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಲಾಡು ತಯಾರಿ ಸ್ಥಳದ ಪರಿಶೀಲನೆಯೂ ನಡೆದಿದೆ’ ಎಂದು ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತಿರುಪತಿ ದೇವಸ್ಥಾನಕ್ಕೆ ಸೇರಿದ ಸ್ಥಿರಾಸ್ತಿಗಳ ಮಾರಾಟ ನಿರ್ಧಾರವು ತೀವ್ರ ವಿವಾದ ಹಾಗೂವಿರೋಧಕ್ಕೆ ಕಾರಣವಾದ ಬೆನ್ನಲ್ಲೇ, ಭಕ್ತರು ದೇಣೆಗೆಯಾಗಿ ನೀಡಿದ ಸ್ಥಿರಾಸ್ತಿಗಳನ್ನು ಮಾರಾಟ ಮಾಡದೇ ಇರಲು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿ ನಿರ್ಧರಿಸಿದೆ.</p>.<p>ಗುರುವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ‘ಒತ್ತುವರಿಯಾಗಿರುವ ಆಸ್ತಿಗಳನ್ನು ಹೇಗೆ ವಾಪಸ್ ಪಡೆದು ಬಳಸಿಕೊಳ್ಳಬಹುದು ಎನ್ನುವುದರ ಕುರಿತು ಸಲಹೆಗಳನ್ನು ಸ್ವೀಕರಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಇದರಲ್ಲಿ ಅಧಿಕಾರಿಗಳು, ಭಕ್ತರು, ಧಾರ್ಮಿಕ ಸಂಘಸಂಸ್ಥೆಗಳ ಮುಖ್ಯಸ್ಥರು ಇರಲಿದ್ದಾರೆ’ ಎಂದು ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ತಿಳಿಸಿದರು.</p>.<p>ಲಾಕ್ಡೌನ್ ಕಾರಣದಿಂದಾಗಿದೇವಸ್ಥಾನಕ್ಕೆ ಆದಾಯ ಕುಸಿತವಾದ ಸಂದರ್ಭದಲ್ಲಿ ಆಸ್ತಿ ಹರಾಜು ಹಾಕುವ ನಿರ್ಧಾರಕ್ಕೆ ಮಂಡಳಿ ಬಂದಿತ್ತು. ಇದಕ್ಕೆ ರಾಷ್ಟ್ರದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಟಿಟಿಡಿಯ ಈ ಚಿಂತನೆಗೆ ಜಗನ್ಮೋಹನ್ ರೆಡ್ಡಿ ಸರ್ಕಾರ ಸೋಮವಾರ ತಡೆ ನೀಡಿತ್ತು. ಆಸ್ತಿ ಹರಾಜು ವಿಚಾರವನ್ನು ಸಮರ್ಥಿಸಿಕೊಂಡಿರುವ ಮಂಡಳಿ, ಈ ಯೋಜನೆಯನ್ನು ಹಿಂದಿನ ಮಂಡಳಿಯೇ ಪ್ರಾರಂಭಿಸಿತ್ತು ಎಂದಿದೆ.</p>.<p>ಈ ಘಟನೆಗಳ ಕುರಿತು ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಮಂಡಳಿಯು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿದೆ ಎಂದು ಸುಬ್ಬಾರೆಡ್ಡಿ ತಿಳಿಸಿದರು.</p>.<p><strong>ದೇವಸ್ಥಾನ ತೆರೆಯಲು ಸಿದ್ಧತೆ:</strong> ‘ದೇವಸ್ಥಾನ ತೆರೆಯಲು ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ಸರ್ಕಾರದ ಹಸಿರು ನಿಶಾನೆಗೆ ಕಾಯುತ್ತಿದ್ದೇವೆ. ಭಕ್ತರು ಅಂತರ ಕಾಪಾಡಿಕೊಂಡು ದೇವರ ದರ್ಶನ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಲಾಡು ತಯಾರಿ ಸ್ಥಳದ ಪರಿಶೀಲನೆಯೂ ನಡೆದಿದೆ’ ಎಂದು ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>