<p><strong>ತಿರುಪತಿ(ಆಂಧ್ರಪ್ರದೇಶ):</strong> ಮುಂಬರುವ ‘ಶ್ರೀವಾರಿ ಸಾಲಕಟ್ಲ ಬ್ರಹ್ಮೋತ್ಸವ’ ಸಂದರ್ಭದಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆಯನ್ನು ಉಪಗ್ರಹ ಬಳಸಿ ಎಣಿಕೆ ಮಾಡುವುದಕ್ಕಾಗಿ ಇಸ್ರೊ ನೆರವು ಪಡೆಯಲಾಗುತ್ತದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ಮಂಗಳವಾರ ತಿಳಿಸಿದ್ದಾರೆ.</p>.<p>ಭಕ್ತರ ಸಂಖ್ಯೆ ಎಣಿಕೆಗೆ ಅನುಕೂಲವಾಗಲು ಹೆಚ್ಚುವರಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು, ಜನಜಂಗುಳಿಯಲ್ಲಿ ಚಿಕ್ಕಮಕ್ಕಳು ಕಳೆದುಹೋಗುವುದನ್ನು ತಪ್ಪಿಸಲು ‘ಜಿಯೊ–ಟ್ಯಾಗ್’ಗಳನ್ನು ಬಳಸಲಾಗುವುದು ಹಾಗೂ ನಿರಂತರ ವಿದ್ಯುತ್ ಪೂರೈಕೆಗೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಲ್ಲಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ನಾಯ್ಡು ತಿಳಿಸಿದ್ದಾರೆ.</p>.<p>ಈ ವರ್ಷದ ಬ್ರಹ್ಮೋತ್ಸವ ವಿಧಿಗಳು ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರ ವರೆಗೆ ನಡೆಯಲಿವೆ. ಈ ವೇಳೆ, ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ವೆಂಕಟೇಶ್ವರ ದೇವಸ್ಥಾನಕ್ಕೆ ರೇಷ್ಮೆ ವಸ್ತ್ರಗಳನ್ನು ಸಮರ್ಪಿಸಿ, ‘ಪೆದ್ದ ಶೇಷ ವಾಹನ’ ಉತ್ಸವದಲ್ಲಿ ಪಾಲ್ಗೊಳ್ಳುವರು.</p>.<p>25ರಂದು 5ನೇ ಯಾತ್ರಿಗಳ ಸೌಲಭ್ಯಗಳ ಸಂಕೀರ್ಣ (ಪಿಎಸಿ) ‘ವೆಂಕಟಾದ್ರಿ ನಿಲಯಂ’ ಅನ್ನು ಮುಖ್ಯಮಂತ್ರಿ ನಾಯ್ಡು ಅವರು ಉದ್ಘಾಟಿಸುವರು. 2026ರ ಕ್ಯಾಲೆಂಡರ್ ಹಾಗೂ ಡೈರಿಗಳನ್ನು ಕೂಡ ಬಿಡುಗಡೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ(ಆಂಧ್ರಪ್ರದೇಶ):</strong> ಮುಂಬರುವ ‘ಶ್ರೀವಾರಿ ಸಾಲಕಟ್ಲ ಬ್ರಹ್ಮೋತ್ಸವ’ ಸಂದರ್ಭದಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆಯನ್ನು ಉಪಗ್ರಹ ಬಳಸಿ ಎಣಿಕೆ ಮಾಡುವುದಕ್ಕಾಗಿ ಇಸ್ರೊ ನೆರವು ಪಡೆಯಲಾಗುತ್ತದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ಮಂಗಳವಾರ ತಿಳಿಸಿದ್ದಾರೆ.</p>.<p>ಭಕ್ತರ ಸಂಖ್ಯೆ ಎಣಿಕೆಗೆ ಅನುಕೂಲವಾಗಲು ಹೆಚ್ಚುವರಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು, ಜನಜಂಗುಳಿಯಲ್ಲಿ ಚಿಕ್ಕಮಕ್ಕಳು ಕಳೆದುಹೋಗುವುದನ್ನು ತಪ್ಪಿಸಲು ‘ಜಿಯೊ–ಟ್ಯಾಗ್’ಗಳನ್ನು ಬಳಸಲಾಗುವುದು ಹಾಗೂ ನಿರಂತರ ವಿದ್ಯುತ್ ಪೂರೈಕೆಗೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಲ್ಲಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ನಾಯ್ಡು ತಿಳಿಸಿದ್ದಾರೆ.</p>.<p>ಈ ವರ್ಷದ ಬ್ರಹ್ಮೋತ್ಸವ ವಿಧಿಗಳು ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರ ವರೆಗೆ ನಡೆಯಲಿವೆ. ಈ ವೇಳೆ, ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ವೆಂಕಟೇಶ್ವರ ದೇವಸ್ಥಾನಕ್ಕೆ ರೇಷ್ಮೆ ವಸ್ತ್ರಗಳನ್ನು ಸಮರ್ಪಿಸಿ, ‘ಪೆದ್ದ ಶೇಷ ವಾಹನ’ ಉತ್ಸವದಲ್ಲಿ ಪಾಲ್ಗೊಳ್ಳುವರು.</p>.<p>25ರಂದು 5ನೇ ಯಾತ್ರಿಗಳ ಸೌಲಭ್ಯಗಳ ಸಂಕೀರ್ಣ (ಪಿಎಸಿ) ‘ವೆಂಕಟಾದ್ರಿ ನಿಲಯಂ’ ಅನ್ನು ಮುಖ್ಯಮಂತ್ರಿ ನಾಯ್ಡು ಅವರು ಉದ್ಘಾಟಿಸುವರು. 2026ರ ಕ್ಯಾಲೆಂಡರ್ ಹಾಗೂ ಡೈರಿಗಳನ್ನು ಕೂಡ ಬಿಡುಗಡೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>