<p><strong>ತಿರುಪತಿ:</strong> ರಾಜ್ಯ ರಾಜಧಾನಿಯಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸುವ ಉದ್ದೇಶಕ್ಕಾಗಿ ಸೂಕ್ತ ಜಾಗ ನೀಡುವಂತೆ ತಿರುಮಲ ತಿರುಪತಿ ದೇವಸ್ಥಾನಗಳ (TTD) ಅಧ್ಯಕ್ಷ ಬಿ.ಆರ್. ನಾಯ್ಡು ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p><p>ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸೂಚನೆ ಮೇರೆಗೆ ಪತ್ರ ಬರೆದಿರುವ ಬಿ.ಆರ್. ನಾಯ್ಡು, ‘ಶ್ರೀವಾರಿ ದೇವಾಲಯ ನಿರ್ಮಾಣಕ್ಕಾಗಿ ರಾಜಧಾನಿಯ ಪ್ರಮುಖ ಪ್ರದೇಶದಲ್ಲಿ ಉಚಿತವಾಗಿ ಜಾಗ ನೀಡಬೇಕು’ ಎಂದು ಕೋರಿದ್ದಾರೆ.</p><p>‘ದೇವಾಲಯ ಎಂಬುದು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ಸಮಾಜದ ಅಭಿವೃದ್ಧಿ ಮತ್ತು ಧಾರ್ಮಿಕ ಪ್ರವಾಸೋದ್ಯಮದಲ್ಲೂ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಟಿಟಿಡಿ ಅಧ್ಯಕ್ಷರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.</p><p>‘ಪ್ರತಿಯೊಬ್ಬರೂ ಇಂದು ಧಾರ್ಮಿಕತೆ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ಪ್ರತಿ ರಾಜ್ಯದಲ್ಲೂ ವೆಂಕಟೇಶ್ವರ ದೇವಾಲಯ ಇರಬೇಕು. ದೇಶದ ಪ್ರಮುಖ ಸ್ಥಳಗಳಲ್ಲಿ ಶ್ರೀವಾರಿ ದೇವಾಲಯಗಳನ್ನು ಸ್ಥಾಪಿಸಬೇಕು. ಆ ಮೂಲಕ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಬೇಕು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ:</strong> ರಾಜ್ಯ ರಾಜಧಾನಿಯಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸುವ ಉದ್ದೇಶಕ್ಕಾಗಿ ಸೂಕ್ತ ಜಾಗ ನೀಡುವಂತೆ ತಿರುಮಲ ತಿರುಪತಿ ದೇವಸ್ಥಾನಗಳ (TTD) ಅಧ್ಯಕ್ಷ ಬಿ.ಆರ್. ನಾಯ್ಡು ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p><p>ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸೂಚನೆ ಮೇರೆಗೆ ಪತ್ರ ಬರೆದಿರುವ ಬಿ.ಆರ್. ನಾಯ್ಡು, ‘ಶ್ರೀವಾರಿ ದೇವಾಲಯ ನಿರ್ಮಾಣಕ್ಕಾಗಿ ರಾಜಧಾನಿಯ ಪ್ರಮುಖ ಪ್ರದೇಶದಲ್ಲಿ ಉಚಿತವಾಗಿ ಜಾಗ ನೀಡಬೇಕು’ ಎಂದು ಕೋರಿದ್ದಾರೆ.</p><p>‘ದೇವಾಲಯ ಎಂಬುದು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ಸಮಾಜದ ಅಭಿವೃದ್ಧಿ ಮತ್ತು ಧಾರ್ಮಿಕ ಪ್ರವಾಸೋದ್ಯಮದಲ್ಲೂ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಟಿಟಿಡಿ ಅಧ್ಯಕ್ಷರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.</p><p>‘ಪ್ರತಿಯೊಬ್ಬರೂ ಇಂದು ಧಾರ್ಮಿಕತೆ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ಪ್ರತಿ ರಾಜ್ಯದಲ್ಲೂ ವೆಂಕಟೇಶ್ವರ ದೇವಾಲಯ ಇರಬೇಕು. ದೇಶದ ಪ್ರಮುಖ ಸ್ಥಳಗಳಲ್ಲಿ ಶ್ರೀವಾರಿ ದೇವಾಲಯಗಳನ್ನು ಸ್ಥಾಪಿಸಬೇಕು. ಆ ಮೂಲಕ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಬೇಕು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>