<p><strong>ತಿರುಮಲ</strong>: ಕೋವಿಡ್ -19 ಸೋಂಕು ಹರಡುತ್ತಿರುವ ಈ ಹೊತ್ತಲ್ಲಿ ತಿರುಮಲ ಪರಿಸರವನ್ನು ಸ್ವಚ್ಛಗೊಳಿಸಲು ಸೋಂಕು ನಿವಾರಕ ಸಿಂಪಡಿಸುವ ಸ್ಪ್ರೇಯರ್ನ್ನು ಮುಸ್ಲಿಂ ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ಗೆ ಕೊಡುಗೆಯಾಗಿ ನೀಡಿದ್ದಾರೆ.</p>.<p>ತಿರುಪತಿ ವೆಂಕಟೇಶ್ವರನ ಭಕ್ತರಾಗಿರುವ ಚೆನ್ನೈ ಮೂಲದ ಉದ್ಯಮಿ ಅಬ್ದುಲ್ ಘನಿ ಎಂಬವರು ₹2.6 ಲಕ್ಷ ಮೌಲ್ಯದ ಸ್ಪ್ರೇಯರ್ನ್ನು ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಟ್ರ್ಯಾಕ್ಟರ್ನಲ್ಲಿರಿಸಿ ಸಿಂಪಡಣೆ ಮಾಡುವ ಈ ಸ್ಪ್ರೇಯರ್ನಿಂದಮಡಾ ರಸ್ತೆಯ ಸುತ್ತಮುತ್ತಲ ಪ್ರದೇಶವನ್ನು ವೈರಾಣು ಮುಕ್ತ ಮಾಡಲಾಗುತ್ತಿದೆ.</p>.<p>ಘನಿ ಅವರು ಈ ಹಿಂದೆಯೂ ಇದೇ ರೀತಿಯ ಕೊಡುಗೆ ನೀಡಿದ್ದರು. ನಾಲ್ಕು ವರ್ಷಗಳ ಹಿಂದೆ ಇವರು ಟಿಟಿಡಿಯ ನಿತ್ಯ ಅನ್ನದಾನ (ಉಚಿತ ಊಟ) ಸೇವೆಗೆ ತರಕಾರಿಗಳನ್ನು ಕೊಂಡೊಯ್ಯಲು ಹವಾನಿಯಂತ್ರಿತ ಟ್ರಕ್ಗಳನ್ನು ನೀಡಿದ್ದರು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.</p>.<p>ದೇವಾಲಯಕ್ಕೆ ಏನಾದರೂ ಅಗತ್ಯ ಇದೆ ಎಂಬುದು ನನ್ನ ಗಮನಕ್ಕೆ ಬಂದರೆ ನಾನು ಈ ರೀತಿ ಕೊಡುಗೆ ನೀಡುತ್ತೇನೆ. ದೇವರ ಸೇವೆಗಾಗಿ ನನಗೆ ಪ್ರಚಾರ ಬೇಡ ಎಂದು 'ಪ್ರಜಾವಾಣಿ' ಜತೆ ಮಾತನಾಡಿದ ಘನಿ ಹೇಳಿದ್ದಾರೆ.</p>.<p>25 ವರ್ಷಗಳಿಂದ ಘನಿ ಅವರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ನೀವು ಹೇಗೆ ವೆಂಕಟೇಶ್ವರನ ಭಕ್ತರಾದಿರಿ ಎಂದು ಕೇಳಿದಾಗ, ಅದು ರಹಸ್ಯ. ನನ್ನ ಮತ್ತು ಅವನ ನಡುವೆ ಇರುವ ಪರಸ್ಪರ ಅರ್ಥೈಸಿಕೊಳ್ಳುವಿಕೆ ಎಂದಿದ್ದಾರೆ.</p>.<p>ವೆಂಕಟೇಶ್ವರ, ಅಲ್ಲಾಹು ಅಥವಾ ಯೇಸು...ನಾನು ದೇವರೊಬ್ಬನೇ ಎಂದು ನಂಬುವವನು. ಈ ಸಾಮಾನ್ಯ ವಿಷಯವನ್ನು ಜನರು ಅರ್ಥ ಮಾಡುವುದಿಲ್ಲ ಅದೇ ನಮ್ಮ ಮುಂದಿರುವ ಸವಾಲು ಅಂತಾರೆ ಘನಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಮಲ</strong>: ಕೋವಿಡ್ -19 ಸೋಂಕು ಹರಡುತ್ತಿರುವ ಈ ಹೊತ್ತಲ್ಲಿ ತಿರುಮಲ ಪರಿಸರವನ್ನು ಸ್ವಚ್ಛಗೊಳಿಸಲು ಸೋಂಕು ನಿವಾರಕ ಸಿಂಪಡಿಸುವ ಸ್ಪ್ರೇಯರ್ನ್ನು ಮುಸ್ಲಿಂ ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ಗೆ ಕೊಡುಗೆಯಾಗಿ ನೀಡಿದ್ದಾರೆ.</p>.<p>ತಿರುಪತಿ ವೆಂಕಟೇಶ್ವರನ ಭಕ್ತರಾಗಿರುವ ಚೆನ್ನೈ ಮೂಲದ ಉದ್ಯಮಿ ಅಬ್ದುಲ್ ಘನಿ ಎಂಬವರು ₹2.6 ಲಕ್ಷ ಮೌಲ್ಯದ ಸ್ಪ್ರೇಯರ್ನ್ನು ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಟ್ರ್ಯಾಕ್ಟರ್ನಲ್ಲಿರಿಸಿ ಸಿಂಪಡಣೆ ಮಾಡುವ ಈ ಸ್ಪ್ರೇಯರ್ನಿಂದಮಡಾ ರಸ್ತೆಯ ಸುತ್ತಮುತ್ತಲ ಪ್ರದೇಶವನ್ನು ವೈರಾಣು ಮುಕ್ತ ಮಾಡಲಾಗುತ್ತಿದೆ.</p>.<p>ಘನಿ ಅವರು ಈ ಹಿಂದೆಯೂ ಇದೇ ರೀತಿಯ ಕೊಡುಗೆ ನೀಡಿದ್ದರು. ನಾಲ್ಕು ವರ್ಷಗಳ ಹಿಂದೆ ಇವರು ಟಿಟಿಡಿಯ ನಿತ್ಯ ಅನ್ನದಾನ (ಉಚಿತ ಊಟ) ಸೇವೆಗೆ ತರಕಾರಿಗಳನ್ನು ಕೊಂಡೊಯ್ಯಲು ಹವಾನಿಯಂತ್ರಿತ ಟ್ರಕ್ಗಳನ್ನು ನೀಡಿದ್ದರು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.</p>.<p>ದೇವಾಲಯಕ್ಕೆ ಏನಾದರೂ ಅಗತ್ಯ ಇದೆ ಎಂಬುದು ನನ್ನ ಗಮನಕ್ಕೆ ಬಂದರೆ ನಾನು ಈ ರೀತಿ ಕೊಡುಗೆ ನೀಡುತ್ತೇನೆ. ದೇವರ ಸೇವೆಗಾಗಿ ನನಗೆ ಪ್ರಚಾರ ಬೇಡ ಎಂದು 'ಪ್ರಜಾವಾಣಿ' ಜತೆ ಮಾತನಾಡಿದ ಘನಿ ಹೇಳಿದ್ದಾರೆ.</p>.<p>25 ವರ್ಷಗಳಿಂದ ಘನಿ ಅವರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ನೀವು ಹೇಗೆ ವೆಂಕಟೇಶ್ವರನ ಭಕ್ತರಾದಿರಿ ಎಂದು ಕೇಳಿದಾಗ, ಅದು ರಹಸ್ಯ. ನನ್ನ ಮತ್ತು ಅವನ ನಡುವೆ ಇರುವ ಪರಸ್ಪರ ಅರ್ಥೈಸಿಕೊಳ್ಳುವಿಕೆ ಎಂದಿದ್ದಾರೆ.</p>.<p>ವೆಂಕಟೇಶ್ವರ, ಅಲ್ಲಾಹು ಅಥವಾ ಯೇಸು...ನಾನು ದೇವರೊಬ್ಬನೇ ಎಂದು ನಂಬುವವನು. ಈ ಸಾಮಾನ್ಯ ವಿಷಯವನ್ನು ಜನರು ಅರ್ಥ ಮಾಡುವುದಿಲ್ಲ ಅದೇ ನಮ್ಮ ಮುಂದಿರುವ ಸವಾಲು ಅಂತಾರೆ ಘನಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>