<p><strong>ತಿರುಪತಿ:</strong> ಹಿಂದೂಗಳಲ್ಲದ ನಾಲ್ವರು ನೌಕರರನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿ ಅಮಾನತುಗೊಳಿಸಿದೆ.</p><p>ಡೆಪ್ಯೂಟಿ ಎಕ್ಸಿಕ್ಯೂಟಿವ್ ಎಂಜಿನಿಯರ್ (ಗುಣಮಟ್ಟ ನಿಯಂತ್ರಕ) ಬಿ. ಎಲಿಜಾರ್, ಬಿಐಆರ್ಆರ್ಡಿ ಆಸ್ಪತ್ರೆಯ ಶುಶ್ರೂಷಕಿ ಎಸ್. ರೋಸಿ, ಗ್ರೇಡ್–1 ಫಾರ್ಮಾಸಿಸ್ಟ್ ಎಂ. ಪ್ರೇಮಾವತಿ ಹಾಗೂ ಎಸ್.ವಿ. ಆಯುರ್ವೇದ ಫಾರ್ಮಸಿಯ ಜಿ. ಅಸುಂತಾ ಅಮಾನತುಗೊಂಡವರು.</p><p>‘ಈ ನಾಲ್ವರು ಇತರೆ ಧರ್ಮ ಅನುಸರಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ’ ಎಂದು ಟಿಟಿಡಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>‘ಹಿಂದೂ ಧಾರ್ಮಿಕ ಸಂಸ್ಥೆಯೊಂದನ್ನು ಪ್ರತಿನಿಧಿಸುವಾಗ ಮತ್ತು ಕೆಲಸ ಮಾಡುವಾಗ ಈ ನೌಕರರು ತಮ್ಮ ಕರ್ತವ್ಯಗಳಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಹಾಗೂ ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ’ ಎನ್ನಲಾಗಿದೆ.</p><p>ಟಿಟಿಡಿಯ ಜಾಗೃತ ದಳ ಸಲ್ಲಿಸಿದ ವರದಿ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, ನಿಯಮಗಳ ಪ್ರಕಾರವೇ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.</p>.ತಿರುಪತಿ ರೈಲಿಗೆ ದತ್ತಾತ್ರೇಯರ ಹೆಸರು: ಶೀಘ್ರ ತೀರ್ಮಾನ.Tirupati Laddu | ‘ತಿರುಪತಿ ಲಡ್ಡು’ ಅನಧಿಕೃತ ಮಾರಾಟಕ್ಕೆ ಕಡಿವಾಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ:</strong> ಹಿಂದೂಗಳಲ್ಲದ ನಾಲ್ವರು ನೌಕರರನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿ ಅಮಾನತುಗೊಳಿಸಿದೆ.</p><p>ಡೆಪ್ಯೂಟಿ ಎಕ್ಸಿಕ್ಯೂಟಿವ್ ಎಂಜಿನಿಯರ್ (ಗುಣಮಟ್ಟ ನಿಯಂತ್ರಕ) ಬಿ. ಎಲಿಜಾರ್, ಬಿಐಆರ್ಆರ್ಡಿ ಆಸ್ಪತ್ರೆಯ ಶುಶ್ರೂಷಕಿ ಎಸ್. ರೋಸಿ, ಗ್ರೇಡ್–1 ಫಾರ್ಮಾಸಿಸ್ಟ್ ಎಂ. ಪ್ರೇಮಾವತಿ ಹಾಗೂ ಎಸ್.ವಿ. ಆಯುರ್ವೇದ ಫಾರ್ಮಸಿಯ ಜಿ. ಅಸುಂತಾ ಅಮಾನತುಗೊಂಡವರು.</p><p>‘ಈ ನಾಲ್ವರು ಇತರೆ ಧರ್ಮ ಅನುಸರಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ’ ಎಂದು ಟಿಟಿಡಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>‘ಹಿಂದೂ ಧಾರ್ಮಿಕ ಸಂಸ್ಥೆಯೊಂದನ್ನು ಪ್ರತಿನಿಧಿಸುವಾಗ ಮತ್ತು ಕೆಲಸ ಮಾಡುವಾಗ ಈ ನೌಕರರು ತಮ್ಮ ಕರ್ತವ್ಯಗಳಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಹಾಗೂ ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ’ ಎನ್ನಲಾಗಿದೆ.</p><p>ಟಿಟಿಡಿಯ ಜಾಗೃತ ದಳ ಸಲ್ಲಿಸಿದ ವರದಿ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, ನಿಯಮಗಳ ಪ್ರಕಾರವೇ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.</p>.ತಿರುಪತಿ ರೈಲಿಗೆ ದತ್ತಾತ್ರೇಯರ ಹೆಸರು: ಶೀಘ್ರ ತೀರ್ಮಾನ.Tirupati Laddu | ‘ತಿರುಪತಿ ಲಡ್ಡು’ ಅನಧಿಕೃತ ಮಾರಾಟಕ್ಕೆ ಕಡಿವಾಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>