<p><strong>ಹೈದರಾಬಾದ್:</strong> ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಮಂಡಳಿಯು ಪರಿಹಾಧನ ಚೆಕ್ಗಳ ವಿತರಣೆಯನ್ನು ಭಾನುವಾರ (ಜ.12) ಆರಂಭಿಸಲಿದೆ.</p>.<p>ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹5 ಲಕ್ಷ ಹಾಗೂ ಸಣ್ಣ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ₹ 2 ಲಕ್ಷ ಪರಿಹಾರ ನೀಡಲು ಮಂಡಳಿ ನಿರ್ಧರಿಸಿದೆ.</p>.<p>ಶನಿವಾರ ಟಿಟಿಡಿ ಮಂಡಳಿ ಅಧ್ಯಕ್ಷ ಬಿ.ಆರ್.ನಾಯ್ಡು ಅಧ್ಯಕ್ಷೆಯಲ್ಲಿ ನಡೆದ ಸಭೆಯಲ್ಲಿ, ಪರಿಹಾರ ಚೆಕ್ ವಿತರಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು.</p>.<p>ಮೃತಪಟ್ಟಿರುವ 6 ಮಂದಿಯ ಕುಟುಂಬಗಳನ್ನು ಹಾಗೂ ಗಾಯಗೊಂಡವರನ್ನು ಖುದ್ದಾಗಿ ಭೇಟಿ ಮಾಡುವುದು, ಪರಿಹಾರದ ಚೆಕ್ ವಿತರಣೆ ಉಸ್ತುವಾರಿಗಾಗಿ ಸ್ಥಳೀಯ ಶಾಸಕರು ಹಾಗೂ ಟಿಟಿಡಿ ಸದಸ್ಯರನ್ನು ಒಳಗೊಂಡ ಎರಡು ಸಮಿತಿಗಳನ್ನು ನಾಯ್ಡು ರಚಿಸಿದರು.</p>.<p>ಕಾಲ್ತುಳಿತದಲ್ಲಿ ಮೃತಪಟ್ಟವರ ಮಕ್ಕಳಿಗೆ ಟಿಟಿಡಿ ಅಧೀನದ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡಲು ಕೂಡ ಮಂಡಳಿ ನಿರ್ಧರಿಸಿದೆ.</p>.<p><strong>ವಿಶೇಷ ದರ್ಶನಕ್ಕೆ ವ್ಯವಸ್ಥೆ:</strong> ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರಿಗೆ ವೈಕುಂಠ ದ್ವಾರ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲು ಕೂಡ ಟಿಟಿಡಿ ನಿರ್ಧರಿಸಿದೆ. ಮುಂದಿನ ಕೆಲ ದಿನಗಳ ಕಾಲ ಈ ವ್ಯವಸ್ಥೆ ಇರಲಿದೆ.</p>.ತಿರುಪತಿ ಕಾಲ್ತುಳಿತ; ಗಾಯಗೊಂಡವರಿಗೆ ತಿಮ್ಮಪ್ಪನ ವಿಶೇಷ ದರ್ಶನ: ಟಿಟಿಡಿ.ತಿರುಪತಿ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ನಾಯ್ಡು ಆದೇಶ.Video | Tirupati Stampede: ತಿರುಪತಿ ದೇಗುಲದಲ್ಲಿ ಕಾಲ್ತುಳಿತ; ಆರು ಮಂದಿ ಸಾವು.ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ! TTD ಅಧ್ಯಕ್ಷರು ಹೇಳಿದ್ದೇನು?.ತಿರುಪತಿ ಕಾಲ್ತುಳಿತ ದುರಂತ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?.ತಿರುಪತಿ ಕಾಲ್ತುಳಿತ ದುರಂತ:ನೆರವು ನೀಡುವಂತೆ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಮಂಡಳಿಯು ಪರಿಹಾಧನ ಚೆಕ್ಗಳ ವಿತರಣೆಯನ್ನು ಭಾನುವಾರ (ಜ.12) ಆರಂಭಿಸಲಿದೆ.</p>.<p>ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹5 ಲಕ್ಷ ಹಾಗೂ ಸಣ್ಣ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ₹ 2 ಲಕ್ಷ ಪರಿಹಾರ ನೀಡಲು ಮಂಡಳಿ ನಿರ್ಧರಿಸಿದೆ.</p>.<p>ಶನಿವಾರ ಟಿಟಿಡಿ ಮಂಡಳಿ ಅಧ್ಯಕ್ಷ ಬಿ.ಆರ್.ನಾಯ್ಡು ಅಧ್ಯಕ್ಷೆಯಲ್ಲಿ ನಡೆದ ಸಭೆಯಲ್ಲಿ, ಪರಿಹಾರ ಚೆಕ್ ವಿತರಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು.</p>.<p>ಮೃತಪಟ್ಟಿರುವ 6 ಮಂದಿಯ ಕುಟುಂಬಗಳನ್ನು ಹಾಗೂ ಗಾಯಗೊಂಡವರನ್ನು ಖುದ್ದಾಗಿ ಭೇಟಿ ಮಾಡುವುದು, ಪರಿಹಾರದ ಚೆಕ್ ವಿತರಣೆ ಉಸ್ತುವಾರಿಗಾಗಿ ಸ್ಥಳೀಯ ಶಾಸಕರು ಹಾಗೂ ಟಿಟಿಡಿ ಸದಸ್ಯರನ್ನು ಒಳಗೊಂಡ ಎರಡು ಸಮಿತಿಗಳನ್ನು ನಾಯ್ಡು ರಚಿಸಿದರು.</p>.<p>ಕಾಲ್ತುಳಿತದಲ್ಲಿ ಮೃತಪಟ್ಟವರ ಮಕ್ಕಳಿಗೆ ಟಿಟಿಡಿ ಅಧೀನದ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡಲು ಕೂಡ ಮಂಡಳಿ ನಿರ್ಧರಿಸಿದೆ.</p>.<p><strong>ವಿಶೇಷ ದರ್ಶನಕ್ಕೆ ವ್ಯವಸ್ಥೆ:</strong> ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರಿಗೆ ವೈಕುಂಠ ದ್ವಾರ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲು ಕೂಡ ಟಿಟಿಡಿ ನಿರ್ಧರಿಸಿದೆ. ಮುಂದಿನ ಕೆಲ ದಿನಗಳ ಕಾಲ ಈ ವ್ಯವಸ್ಥೆ ಇರಲಿದೆ.</p>.ತಿರುಪತಿ ಕಾಲ್ತುಳಿತ; ಗಾಯಗೊಂಡವರಿಗೆ ತಿಮ್ಮಪ್ಪನ ವಿಶೇಷ ದರ್ಶನ: ಟಿಟಿಡಿ.ತಿರುಪತಿ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ನಾಯ್ಡು ಆದೇಶ.Video | Tirupati Stampede: ತಿರುಪತಿ ದೇಗುಲದಲ್ಲಿ ಕಾಲ್ತುಳಿತ; ಆರು ಮಂದಿ ಸಾವು.ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ! TTD ಅಧ್ಯಕ್ಷರು ಹೇಳಿದ್ದೇನು?.ತಿರುಪತಿ ಕಾಲ್ತುಳಿತ ದುರಂತ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?.ತಿರುಪತಿ ಕಾಲ್ತುಳಿತ ದುರಂತ:ನೆರವು ನೀಡುವಂತೆ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>