<p><strong>ತಿರುಪತಿ</strong>: ‘ವಿಶೇಷ ದರ್ಶನ, ವಸತಿ ಸೇರಿದಂತೆ ಶ್ರೀಕ್ಷೇತ್ರದಲ್ಲಿನ ಸೇವೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯವರ್ತಿಗಳ ಜಾಲಕ್ಕೆ ಸಿಲುಕಿ ಮೋಸ ಹೋಗದಿರಿ’ ಎಂದು ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿಯು ಭಕ್ತರನ್ನು ಎಚ್ಚರಿಸಿದೆ.</p>.<p>‘ಕೆಲವು ಮಧ್ಯವರ್ತಿಗಳು, ಏಜೆಂಟರು ಹಲವು ತಂತ್ರಗಳ ಮೂಲಕ ಶ್ರೀವಾರಿ ದರ್ಶನದ ಸುಳ್ಳು ಭರವಸೆ ನೀಡಿ, ಭಕ್ತರಿಗೆ ಮೋಸ ಮಾಡುತ್ತಿದ್ದಾರೆ’ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಶನಿವಾರ ಹೇಳಿದ್ದಾರೆ.</p>.<p>‘ಶ್ರೀವಾರಿ ದರ್ಶನ, ಅರ್ಜಿತ ಸೇವಾ ಅಥವಾ ವಸತಿಗೆ ಸಂಬಂಧಿಸಿದ ವಿಷಯಗಳಲ್ಲಿ ದಲ್ಲಾಳಿಗಳನ್ನು ನಂಬಬೇಡಿ’ ಎಂದು ನಾಯ್ಡು ಮನವಿ ಮಾಡಿದ್ದಾರೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಟಿಟಿಡಿಯಲ್ಲಿ ಪ್ರಭಾವಿ ಹುದ್ದೆಗಳನ್ನು ಹೊಂದಿದ್ದೇವೆ ಎಂದು ಕೆಲವು ಮಧ್ಯವರ್ತಿಗಳು ಭಕ್ತರನ್ನು ನಂಬಿಸಿ, ಹಣ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಗೊತ್ತಾಗಿವೆ. ದೇಗುಲದ ಆಡಳಿತ ಮಂಡಳಿಯು ಇಂತಹ ದಲ್ಲಾಳಿಗಳನ್ನು ಗುರುತಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡಿದೆ’ ಎಂದು ನಾಯ್ಡು ಮಾಹಿತಿ ನೀಡಿದ್ದಾರೆ.</p>.<p>‘ಎಲ್ಲ ಭಕ್ತರು ತಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಟಿಟಿಡಿಯ ಅಧಿಕೃತ ವೆಬ್ಸೈಟ್ ಅಥವಾ ಮೊಬೈಲ್ ಆ್ಯಪ್ ಮೂಲಕವೇ ತಿರುಪತಿಯಲ್ಲಿನ ಸೇವೆಗಳನ್ನು ಕಾಯ್ದಿರಿಸಿಕೊಳ್ಳಬೇಕು. ದಲ್ಲಾಳಿಗಳ ಕುರಿತು ದೇಗುಲದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಗತ್ಯ ಬಿದ್ದರೆ ಬೇಹುಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಿ’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ</strong>: ‘ವಿಶೇಷ ದರ್ಶನ, ವಸತಿ ಸೇರಿದಂತೆ ಶ್ರೀಕ್ಷೇತ್ರದಲ್ಲಿನ ಸೇವೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯವರ್ತಿಗಳ ಜಾಲಕ್ಕೆ ಸಿಲುಕಿ ಮೋಸ ಹೋಗದಿರಿ’ ಎಂದು ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿಯು ಭಕ್ತರನ್ನು ಎಚ್ಚರಿಸಿದೆ.</p>.<p>‘ಕೆಲವು ಮಧ್ಯವರ್ತಿಗಳು, ಏಜೆಂಟರು ಹಲವು ತಂತ್ರಗಳ ಮೂಲಕ ಶ್ರೀವಾರಿ ದರ್ಶನದ ಸುಳ್ಳು ಭರವಸೆ ನೀಡಿ, ಭಕ್ತರಿಗೆ ಮೋಸ ಮಾಡುತ್ತಿದ್ದಾರೆ’ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಶನಿವಾರ ಹೇಳಿದ್ದಾರೆ.</p>.<p>‘ಶ್ರೀವಾರಿ ದರ್ಶನ, ಅರ್ಜಿತ ಸೇವಾ ಅಥವಾ ವಸತಿಗೆ ಸಂಬಂಧಿಸಿದ ವಿಷಯಗಳಲ್ಲಿ ದಲ್ಲಾಳಿಗಳನ್ನು ನಂಬಬೇಡಿ’ ಎಂದು ನಾಯ್ಡು ಮನವಿ ಮಾಡಿದ್ದಾರೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಟಿಟಿಡಿಯಲ್ಲಿ ಪ್ರಭಾವಿ ಹುದ್ದೆಗಳನ್ನು ಹೊಂದಿದ್ದೇವೆ ಎಂದು ಕೆಲವು ಮಧ್ಯವರ್ತಿಗಳು ಭಕ್ತರನ್ನು ನಂಬಿಸಿ, ಹಣ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಗೊತ್ತಾಗಿವೆ. ದೇಗುಲದ ಆಡಳಿತ ಮಂಡಳಿಯು ಇಂತಹ ದಲ್ಲಾಳಿಗಳನ್ನು ಗುರುತಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡಿದೆ’ ಎಂದು ನಾಯ್ಡು ಮಾಹಿತಿ ನೀಡಿದ್ದಾರೆ.</p>.<p>‘ಎಲ್ಲ ಭಕ್ತರು ತಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಟಿಟಿಡಿಯ ಅಧಿಕೃತ ವೆಬ್ಸೈಟ್ ಅಥವಾ ಮೊಬೈಲ್ ಆ್ಯಪ್ ಮೂಲಕವೇ ತಿರುಪತಿಯಲ್ಲಿನ ಸೇವೆಗಳನ್ನು ಕಾಯ್ದಿರಿಸಿಕೊಳ್ಳಬೇಕು. ದಲ್ಲಾಳಿಗಳ ಕುರಿತು ದೇಗುಲದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಗತ್ಯ ಬಿದ್ದರೆ ಬೇಹುಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಿ’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>