<p><strong>ಲಖನೌ</strong>: ಟಿಕೆಟ್ ವಿಚಾರವಾಗಿ ನಡೆದ ವಾಗ್ವಾದದ ವೇಳೆ 'ಪ್ರಯಾಣ ಟಿಕೆಟ್ ಪರೀಕ್ಷಕ' (ಟಿಟಿಇ) ಸಿಟ್ಟಿನ ಭರದಲ್ಲಿ ನೂಕಿದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿಯು ರೈಲಿನಿಂದ ಬಿದ್ದು ಮೃತಪಟ್ಟಿರುವ ಪ್ರಕರಣ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ವರದಿಯಾಗಿದೆ.</p><p>ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಈ ಸಂಬಂಧ ಟಿಟಿಇ ಸಂತೋಷ್ ಕುಮಾರ್ ಎಂಬವರ ವಿರುದ್ಧ ಇಟಾವಾ ರೈಲ್ವೆ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. </p><p>ಮೃತರನ್ನು ಆರತಿ ಯಾದವ್ ಎಂದು ಗುರುತಿಸಲಾಗಿದೆ. ಅವರು, ಚಿಕಿತ್ಸೆ ಸಲುವಾಗಿ ಪಟ್ನಾ–ಆನಂದ ವಿಹಾರ ವಿಶೇಷ ರೈಲಿನಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.</p><p>ಆರತಿಯವರು ಬೇರೊಂದು ರೈಲಿನಲ್ಲಿ ಟಿಕೆಟ್ ಕಾಯ್ದಿರಿಸಿದ್ದರು. ಆದರೆ, ಗಡಿಬಿಡಿಯಲ್ಲಿ ಪಟ್ನಾ–ಆನಂದ ವಿಹಾರ ವಿಶೇಷ ರೈಲನ್ನು ಏರಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಮಹಿಳೆಯ ಶವ ಭರ್ಥಾನ ಪಟ್ಟಣದಲ್ಲಿ ರೈಲು ಹಳಿಯ ಹತ್ತಿರ ಬುಧವಾರ ಪತ್ತೆಯಾಗಿದೆ. ಆರಂಭದಲ್ಲಿ, ಇದು ಅಪಘಾತವೆಂದು ಪರಿಗಣಿಸಲಾಗಿತ್ತು. ಆದರೆ, ತನಿಖೆಯ ವೇಳೆ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದ ಆರತಿಯವರ ಪತಿ ಮುಂಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಟಿಟಿಇ ಮೊದಲು ಆರತಿಯವರ ಪರ್ಸ್ ಅನ್ನು ರೈಲಿನಿಂದ ಹೊರಗೆ ಎಸೆದಿದ್ದರು. ನಂತರ ಅವರನ್ನೂ ಕೆಳಗೆ ನೂಕಿದರು. ಆರತಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.</p><p>ಶವ ಪತ್ತೆಯಾಗಿರುವ ಸ್ಥಳದಿಂದ ಕೆಲವು ಕಿ.ಮೀ. ದೂರದಲ್ಲಿ ಪರ್ಸ್ ಪತ್ತೆಯಾಗಿದೆ. ಆರತಿಯವರ ಮೊಬೈಲ್ ಇನ್ನೂ ಸಿಕ್ಕಿಲ್ಲ ಎಂದೂ ಮೂಲಗಳು ಮಾಹಿತಿ ನೀಡಿವೆ.</p><p>ಟಿಟಿಇ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಟಿಕೆಟ್ ವಿಚಾರವಾಗಿ ನಡೆದ ವಾಗ್ವಾದದ ವೇಳೆ 'ಪ್ರಯಾಣ ಟಿಕೆಟ್ ಪರೀಕ್ಷಕ' (ಟಿಟಿಇ) ಸಿಟ್ಟಿನ ಭರದಲ್ಲಿ ನೂಕಿದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿಯು ರೈಲಿನಿಂದ ಬಿದ್ದು ಮೃತಪಟ್ಟಿರುವ ಪ್ರಕರಣ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ವರದಿಯಾಗಿದೆ.</p><p>ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಈ ಸಂಬಂಧ ಟಿಟಿಇ ಸಂತೋಷ್ ಕುಮಾರ್ ಎಂಬವರ ವಿರುದ್ಧ ಇಟಾವಾ ರೈಲ್ವೆ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. </p><p>ಮೃತರನ್ನು ಆರತಿ ಯಾದವ್ ಎಂದು ಗುರುತಿಸಲಾಗಿದೆ. ಅವರು, ಚಿಕಿತ್ಸೆ ಸಲುವಾಗಿ ಪಟ್ನಾ–ಆನಂದ ವಿಹಾರ ವಿಶೇಷ ರೈಲಿನಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.</p><p>ಆರತಿಯವರು ಬೇರೊಂದು ರೈಲಿನಲ್ಲಿ ಟಿಕೆಟ್ ಕಾಯ್ದಿರಿಸಿದ್ದರು. ಆದರೆ, ಗಡಿಬಿಡಿಯಲ್ಲಿ ಪಟ್ನಾ–ಆನಂದ ವಿಹಾರ ವಿಶೇಷ ರೈಲನ್ನು ಏರಿದ್ದರು ಎಂದು ಮೂಲಗಳು ತಿಳಿಸಿವೆ.</p><p>ಮಹಿಳೆಯ ಶವ ಭರ್ಥಾನ ಪಟ್ಟಣದಲ್ಲಿ ರೈಲು ಹಳಿಯ ಹತ್ತಿರ ಬುಧವಾರ ಪತ್ತೆಯಾಗಿದೆ. ಆರಂಭದಲ್ಲಿ, ಇದು ಅಪಘಾತವೆಂದು ಪರಿಗಣಿಸಲಾಗಿತ್ತು. ಆದರೆ, ತನಿಖೆಯ ವೇಳೆ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದ ಆರತಿಯವರ ಪತಿ ಮುಂಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಟಿಟಿಇ ಮೊದಲು ಆರತಿಯವರ ಪರ್ಸ್ ಅನ್ನು ರೈಲಿನಿಂದ ಹೊರಗೆ ಎಸೆದಿದ್ದರು. ನಂತರ ಅವರನ್ನೂ ಕೆಳಗೆ ನೂಕಿದರು. ಆರತಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.</p><p>ಶವ ಪತ್ತೆಯಾಗಿರುವ ಸ್ಥಳದಿಂದ ಕೆಲವು ಕಿ.ಮೀ. ದೂರದಲ್ಲಿ ಪರ್ಸ್ ಪತ್ತೆಯಾಗಿದೆ. ಆರತಿಯವರ ಮೊಬೈಲ್ ಇನ್ನೂ ಸಿಕ್ಕಿಲ್ಲ ಎಂದೂ ಮೂಲಗಳು ಮಾಹಿತಿ ನೀಡಿವೆ.</p><p>ಟಿಟಿಇ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>