‘ಯಾವುದೋ ಕಾರಣಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಡೆಪ್ಯೂಟಿ ಟಿಟಿಟಿ ಪ್ರಕಾಶ್ ಅವರನ್ನು ತಕ್ಷಣವೇ ಅಮಾನತು ಮಾಡಲಾಗಿದ್ದು, ಅವರ ವಿರುದ್ಧ ಮೇಲಾಧಿಕಾರಿಗಳು ತನಿಖೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ’ ಲಖನೌ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಹಲ್ಲೆಗೊಳಗಾದ ಪ್ರಯಾಣಿಕ ಇನ್ನೂ ದೂರು ದಾಖಲಿಸಿಲ್ಲ. ವಿಡಿಯೊ ಆಧಾರದ ಮೇಲೆ ತಕ್ಷಣ ಕ್ರಮ ಕೈಗೊಂಡಿದ್ದು, ಪ್ರಯಾಣಿಕನನ್ನು ಕರೆಯಿಸಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಟಿಟಿಇ ದುರ್ವರ್ತನೆ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಗಮನಕ್ಕೂ ಬಂದಿದ್ದು, ಅಧಿಕಾರಿ, ಸಿಬ್ಬಂದಿಗಳ ಇಂತಹ ವರ್ತನೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ನೆಟ್ಟಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕನೊಬ್ಬ ಪೈಲಟ್ ಮೇಲೆ ಹಲ್ಲೆ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿತ್ತು. ಈ ಘಟನೆಯಲ್ಲಿ ಬರೀ ಅಮಾನತು ಏಕೆ? ಎಂದು ಪ್ರಶ್ನಿಸಿದ್ದಾರೆ.