<p><strong>ನವದೆಹಲಿ:</strong> ‘ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾಗಿ ಯಾವುದೇ ಮುನ್ನೆಚ್ಚರಿಕೆ ನೀಡದೆ ಸೆಲೆಬಿಯ ಭದ್ರತಾ ಅನುಮತಿಯನ್ನು ರದ್ದುಗೊಳಿಸುವ ಹಕ್ಕು ಸರ್ಕಾರಕ್ಕಿದೆ’ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ಗುರುವಾರ ಹೇಳಿದೆ.</p><p>ಟರ್ಕಿಯ ಕಂಪನಿ ಸೆಲೆಬಿ ಏರ್ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಗೆ ನೀಡಲಾದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್) ಮೇ 15ರಂದು ಆದೇಶಿಸಿತ್ತು. </p><p>ಮುಂಬೈ, ದೆಹಲಿ, ಕೊಚ್ಚಿ, ಕಣ್ಣೂರು, ಬೆಂಗಳೂರು, ಹೈದರಾಬಾದ್, ಗೋವಾ, ಅಹಮದಾಬಾದ್ ಮತ್ತು ಚೆನ್ನೈನ ವಿಮಾನ ನಿಲ್ದಾಣಗಳಲ್ಲಿ ಸೆಲೆಬಿ ಏರ್ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಯ ನಿರ್ವಹಿಸುತ್ತಿದೆ.</p><p>ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಾರತವು ಇತ್ತೀಚೆಗೆ ನಡೆಸಿದ ದಾಳಿಯನ್ನು ಟರ್ಕಿ ಖಂಡಿಸಿತ್ತು. ಪಾಕಿಸ್ತಾನವು ಭಾರಿ ಪ್ರಮಾಣದಲ್ಲಿ ಟರ್ಕಿಯ ಡ್ರೋನ್ಗಳನ್ನು ಭಾರತದ ವಿರುದ್ಧ ಬಳಸಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p><p>ಟರ್ಕಿಯ ಕಾಫಿ, ಜಾಮ್ ಮತ್ತು ಚಾಕೊಲೇಟ್ಗಳನ್ನು ಖರೀದಿಸಲು ವರ್ತಕರು ಬಹಿಷ್ಕರಿಸಿದ್ದಾರೆ. ಜತೆಗೆ ಟರ್ಕಿಯ ಪ್ರವಾಸೋದ್ಯಮಕ್ಕೂ ಭಾರತದ ಬಹಿಷ್ಕಾರದ ಬಿಸಿ ತಟ್ಟಿದೆ.</p><p>ಯಾವುದೇ ಮುನ್ನೆಚ್ಚರಿಕೆ ನೀಡದೆ ತನಗೆ ನೀಡಿದ ಅನುಮತಿಯನ್ನು ರದ್ದುಪಡಿಸಲಾಗಿದೆ. ಜತೆಗೆ ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ಯಾವುದೇ ವಿವರಣೆ ನೀಡಿಲ್ಲ. ಹೀಗಾಗಿ ತನಗೆ ನೀಡಿದ ಅನುಮತಿಯನ್ನು ಮುಂದುವರಿಸಲು ಆದೇಶಿಸುವಂತೆ ಕೋರಿ ಸೆಲೆಬಿ ಕಂಪನಿಯು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.</p><p>ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಕಂಪನಿಯೊಂದಿಗೆ ಯಾವುದೇ ಕಾರಣ ಹಂಚಿಕೊಳ್ಳುವ ಅಗತ್ಯವಿಲ್ಲ. ರಾಷ್ಟ್ರೀಯ ಭದ್ರತೆಯ ವಿಷಯ ಕುರಿತ ಕೆಲ ಪ್ರಕರಣಗಳಲ್ಲಿ ನ್ಯಾಯಸಮ್ಮತೆಯ ಅಗತ್ಯವನ್ನು ಮೀರಲು ಅವಕಾಶವಿದೆ. ಜತೆಗೆ, ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸುವ ಅಗತ್ಯವಿಲ್ಲ’ ಎಂದು ಪೀಠಕ್ಕೆ ತಿಳಿಸಿದರು.</p><p>ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ತುಷಾರ್ ಮೆಹ್ತಾ, ‘ವಿಮಾನ ನಿಲ್ದಾಣದಲ್ಲಿ ನಿರ್ವಹಣೆ ಮಾಡುವ ಸೆಲೆಬಿ ಕಂಪನಿಯು ಅಲ್ಲಿನ ಸಂಪೂರ್ಣ ಮಾಹಿತಿ, ಪ್ರಯಾಣಿಕರ ದಾಖಲೆ ಮತ್ತು ಕೆಲ ಅತಿ ಗಣ್ಯ ವ್ಯಕ್ತಿಗಳ ಚಲನವಲನದ ಮಾಹಿತಿ ಹೊಂದಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ’ ಎಂದು ವಿವರಿಸಿದರು.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಕೆಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠದಲ್ಲಿದ್ದ ನ್ಯಾ. ಸಚಿನ್ ದತ್ತ ಅವರಿಗೆ ನೀಡಲಾಯಿತು. ಪ್ರಕರಣದ ಮುಂದಿನ ವಿಚಾರಣೆ ನಾಳೆಗೆ (ಮೇ 23) ಮುಂದೂಡಿ ನ್ಯಾಯಾಲಯ ಆದೇಶಿಸಿತು.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್, ‘ಸೆಲೆಬಿ ವಿಷಯಕ್ಕೆ ಸಂಬಂಧಿಸಿದಂತೆ ಟರ್ಕಿ ರಾಯಭಾರ ಕಚೇರಿಯೊಂದಿಗೆ ನವದೆಹಲಿ ಚರ್ಚಿಸುತ್ತಿದೆ’ ಎಂದಿದ್ದಾರೆ.</p><p>‘ತನಗೆ ನೀಡಿದ ಅನುಮತಿ ರದ್ದತಿಯಿಂದ 3,791 ನೌಕರರ ಜೀವನದ ಮೇಲೆ ಪರಿಣಾಮ ಬೀರಲಿದೆ. ಮತ್ತು ಹೂಡಿಕೆದಾರರ ಹಿತಾಸಕ್ತಿಯೂ ಇದರಲ್ಲಿ ಅಡಗಿದೆ’ ಎಂದು ಸೆಲೆಬಿ ವಾದಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾಗಿ ಯಾವುದೇ ಮುನ್ನೆಚ್ಚರಿಕೆ ನೀಡದೆ ಸೆಲೆಬಿಯ ಭದ್ರತಾ ಅನುಮತಿಯನ್ನು ರದ್ದುಗೊಳಿಸುವ ಹಕ್ಕು ಸರ್ಕಾರಕ್ಕಿದೆ’ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ಗುರುವಾರ ಹೇಳಿದೆ.</p><p>ಟರ್ಕಿಯ ಕಂಪನಿ ಸೆಲೆಬಿ ಏರ್ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ಗೆ ನೀಡಲಾದ ಭದ್ರತಾ ಅನುಮತಿಯನ್ನು ರದ್ದುಗೊಳಿಸಿ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್) ಮೇ 15ರಂದು ಆದೇಶಿಸಿತ್ತು. </p><p>ಮುಂಬೈ, ದೆಹಲಿ, ಕೊಚ್ಚಿ, ಕಣ್ಣೂರು, ಬೆಂಗಳೂರು, ಹೈದರಾಬಾದ್, ಗೋವಾ, ಅಹಮದಾಬಾದ್ ಮತ್ತು ಚೆನ್ನೈನ ವಿಮಾನ ನಿಲ್ದಾಣಗಳಲ್ಲಿ ಸೆಲೆಬಿ ಏರ್ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಯ ನಿರ್ವಹಿಸುತ್ತಿದೆ.</p><p>ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಾರತವು ಇತ್ತೀಚೆಗೆ ನಡೆಸಿದ ದಾಳಿಯನ್ನು ಟರ್ಕಿ ಖಂಡಿಸಿತ್ತು. ಪಾಕಿಸ್ತಾನವು ಭಾರಿ ಪ್ರಮಾಣದಲ್ಲಿ ಟರ್ಕಿಯ ಡ್ರೋನ್ಗಳನ್ನು ಭಾರತದ ವಿರುದ್ಧ ಬಳಸಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p><p>ಟರ್ಕಿಯ ಕಾಫಿ, ಜಾಮ್ ಮತ್ತು ಚಾಕೊಲೇಟ್ಗಳನ್ನು ಖರೀದಿಸಲು ವರ್ತಕರು ಬಹಿಷ್ಕರಿಸಿದ್ದಾರೆ. ಜತೆಗೆ ಟರ್ಕಿಯ ಪ್ರವಾಸೋದ್ಯಮಕ್ಕೂ ಭಾರತದ ಬಹಿಷ್ಕಾರದ ಬಿಸಿ ತಟ್ಟಿದೆ.</p><p>ಯಾವುದೇ ಮುನ್ನೆಚ್ಚರಿಕೆ ನೀಡದೆ ತನಗೆ ನೀಡಿದ ಅನುಮತಿಯನ್ನು ರದ್ದುಪಡಿಸಲಾಗಿದೆ. ಜತೆಗೆ ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ಯಾವುದೇ ವಿವರಣೆ ನೀಡಿಲ್ಲ. ಹೀಗಾಗಿ ತನಗೆ ನೀಡಿದ ಅನುಮತಿಯನ್ನು ಮುಂದುವರಿಸಲು ಆದೇಶಿಸುವಂತೆ ಕೋರಿ ಸೆಲೆಬಿ ಕಂಪನಿಯು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.</p><p>ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಕಂಪನಿಯೊಂದಿಗೆ ಯಾವುದೇ ಕಾರಣ ಹಂಚಿಕೊಳ್ಳುವ ಅಗತ್ಯವಿಲ್ಲ. ರಾಷ್ಟ್ರೀಯ ಭದ್ರತೆಯ ವಿಷಯ ಕುರಿತ ಕೆಲ ಪ್ರಕರಣಗಳಲ್ಲಿ ನ್ಯಾಯಸಮ್ಮತೆಯ ಅಗತ್ಯವನ್ನು ಮೀರಲು ಅವಕಾಶವಿದೆ. ಜತೆಗೆ, ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸುವ ಅಗತ್ಯವಿಲ್ಲ’ ಎಂದು ಪೀಠಕ್ಕೆ ತಿಳಿಸಿದರು.</p><p>ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ತುಷಾರ್ ಮೆಹ್ತಾ, ‘ವಿಮಾನ ನಿಲ್ದಾಣದಲ್ಲಿ ನಿರ್ವಹಣೆ ಮಾಡುವ ಸೆಲೆಬಿ ಕಂಪನಿಯು ಅಲ್ಲಿನ ಸಂಪೂರ್ಣ ಮಾಹಿತಿ, ಪ್ರಯಾಣಿಕರ ದಾಖಲೆ ಮತ್ತು ಕೆಲ ಅತಿ ಗಣ್ಯ ವ್ಯಕ್ತಿಗಳ ಚಲನವಲನದ ಮಾಹಿತಿ ಹೊಂದಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ’ ಎಂದು ವಿವರಿಸಿದರು.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಕೆಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠದಲ್ಲಿದ್ದ ನ್ಯಾ. ಸಚಿನ್ ದತ್ತ ಅವರಿಗೆ ನೀಡಲಾಯಿತು. ಪ್ರಕರಣದ ಮುಂದಿನ ವಿಚಾರಣೆ ನಾಳೆಗೆ (ಮೇ 23) ಮುಂದೂಡಿ ನ್ಯಾಯಾಲಯ ಆದೇಶಿಸಿತು.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್, ‘ಸೆಲೆಬಿ ವಿಷಯಕ್ಕೆ ಸಂಬಂಧಿಸಿದಂತೆ ಟರ್ಕಿ ರಾಯಭಾರ ಕಚೇರಿಯೊಂದಿಗೆ ನವದೆಹಲಿ ಚರ್ಚಿಸುತ್ತಿದೆ’ ಎಂದಿದ್ದಾರೆ.</p><p>‘ತನಗೆ ನೀಡಿದ ಅನುಮತಿ ರದ್ದತಿಯಿಂದ 3,791 ನೌಕರರ ಜೀವನದ ಮೇಲೆ ಪರಿಣಾಮ ಬೀರಲಿದೆ. ಮತ್ತು ಹೂಡಿಕೆದಾರರ ಹಿತಾಸಕ್ತಿಯೂ ಇದರಲ್ಲಿ ಅಡಗಿದೆ’ ಎಂದು ಸೆಲೆಬಿ ವಾದಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>