<p><strong>ತಿರುವನಂತಪುರ:</strong> ಇಂದು ಬೆಳಗ್ಗೆ ಟರ್ಕಿ ವಿಮಾನ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ.</p><p>ವಿಮಾನ ಇಸ್ತಾಂಬುಲ್ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ತೆರಳುತ್ತಿತ್ತು. ಕೊಲಂಬೊದಲ್ಲಿ ಪ್ರತಿಕೂಲ ಹವಾಮಾನದ ಪರಿಣಾಮ ವಿಮಾನವನ್ನು ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.</p><p>ಈ ವಿಮಾನದಲ್ಲಿ 299 ಪ್ರಯಾಣಿಕರು, 10 ಸಿಬ್ಬಂದಿ ಇದ್ದರು. ವಿಮಾನವು ಬೆಳಿಗ್ಗೆ 6.51ಕ್ಕೆ ಇಲ್ಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು ಎಂದು ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಟಿಐಎಲ್) ಅಧಿಕಾರಿಯೊಬ್ಬರು ಹೇಳಿದರು.</p><p>ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಹವಾಮಾನ ಸುಧಾರಿಸಿದ ನಂತರ ವಿಮಾನ ಕೊಲಂಬೊಗೆ ತೆರಳಲಿದೆ ಎಂದು ಅವರು ಹೇಳಿದರು.</p>.ತಾಂತ್ರಿಕ ದೋಷ: ಬೆಂಗಳೂರು–ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ.ಕರಾಚಿ: ಪ್ರಯಾಣಿಕ ಅಸ್ವಸ್ಥ; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಇಂದು ಬೆಳಗ್ಗೆ ಟರ್ಕಿ ವಿಮಾನ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ.</p><p>ವಿಮಾನ ಇಸ್ತಾಂಬುಲ್ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ತೆರಳುತ್ತಿತ್ತು. ಕೊಲಂಬೊದಲ್ಲಿ ಪ್ರತಿಕೂಲ ಹವಾಮಾನದ ಪರಿಣಾಮ ವಿಮಾನವನ್ನು ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.</p><p>ಈ ವಿಮಾನದಲ್ಲಿ 299 ಪ್ರಯಾಣಿಕರು, 10 ಸಿಬ್ಬಂದಿ ಇದ್ದರು. ವಿಮಾನವು ಬೆಳಿಗ್ಗೆ 6.51ಕ್ಕೆ ಇಲ್ಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು ಎಂದು ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಟಿಐಎಲ್) ಅಧಿಕಾರಿಯೊಬ್ಬರು ಹೇಳಿದರು.</p><p>ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಹವಾಮಾನ ಸುಧಾರಿಸಿದ ನಂತರ ವಿಮಾನ ಕೊಲಂಬೊಗೆ ತೆರಳಲಿದೆ ಎಂದು ಅವರು ಹೇಳಿದರು.</p>.ತಾಂತ್ರಿಕ ದೋಷ: ಬೆಂಗಳೂರು–ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ.ಕರಾಚಿ: ಪ್ರಯಾಣಿಕ ಅಸ್ವಸ್ಥ; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>