ಅಖಿಲ ಭಾರತ ಅರಿಶಿಣ ಬೆಳೆಗಾರರ ಸಂಘದ ವತಿಯಿಂದ ಕನಿಷ್ಠ 50 ರೈತರು ಮೋದಿ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ವಿರುದ್ಧ ಇದೇ ಸಂಘಟನೆಯ 178 ರೈತರು ನಿಜಾಮಾಬಾದ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ ಈ 178ರಲ್ಲಿ ಒಬ್ಬರೂ ಮೋದಿ ವಿರುದ್ಧ ಸ್ಪರ್ಧಿಸುವುದಿಲ್ಲ. ಬೇರೆ ರೈತರು ಕಣಕ್ಕೆ ಇಳಿಯಲಿದ್ದಾರೆ ಎಂದು ಸಂಘವು ತಿಳಿಸಿದೆ.