<p><strong>ನವದೆಹಲಿ:</strong> ತಮಿಳುನಾಡಿನಲ್ಲಿ ನೂತನ ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ನಿರ್ದೇಶನ ನೀಡುವಂತೆ ನಟ, ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಶುಕ್ರವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. </p><p>ಸುಪ್ರೀಂ ಕೋರ್ಟ್ನಲ್ಲಿ ಎಳಿಲರಸಿ ಕೆ. ಎಂಬವರು ಅರ್ಜಿ ಸಲ್ಲಿಸಿದ್ದು, ಸಂವಿಧಾನದ 12 ಹಾಗೂ 32ನೇ ವಿಧಿಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. </p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳಲ್ಲಿ ಗೆದ್ದಿದ್ದ ಟಿವಿಕೆ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 118 ಆಗಿದೆ. </p><p>ಆದರೆ ಸರ್ಕಾರ ರಚಿಸಲು ಎರಡೆರಡು ಸಲ ರಾಜ್ಯಪಾಲರನ್ನು ಭೇಟಿಯಾದರೂ ಬಹುಮತಕ್ಕೆ ಬೇಕಾದ ಸಂಖ್ಯಾಬಲ ಇಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು. </p><p>ಚುನಾವಣೋತ್ತರ ಮೈತ್ರಿಯಲ್ಲಿ ಐದು ಶಾಸಕರನ್ನು ಹೊಂದಿದ ಕಾಂಗ್ರೆಸ್ ಪಕ್ಷವು ಟಿವಿಕೆಗೆ ಬೆಂಬಲ ಘೋಷಿಸಿತ್ತು. </p><p>ಶುಕ್ರವಾರ ನಡೆದ ಬಿರುಸಿನ ರಾಜಕೀಯ ಚಟುವಟಿಕೆಗಳಲ್ಲಿ ಎಡಪಕ್ಷಗಳಾದ ಸಿಪಿಐ ಹಾಗೂ ಸಿಪಿಐ(ಎಂ), ಟಿವಿಕೆಗೆ ಬೇಷರತ್ ಬೆಂಬಲ ನೀಡುವುದಾಗಿ ಘೋಷಿಸಿತ್ತು. ಸಿಪಿಐ ಹಾಗೂ ಸಿಪಿಐ(ಎಂ) ತಲಾ ಎರಡು ಸ್ಥಾನಗಳನ್ನು ಹೊಂದಿವೆ. </p><p>ಮತ್ತೊಂದೆಡೆ ಇಬ್ಬರು ಶಾಸಕರನ್ನು ಹೊಂದಿರುವ ವಿಸಿಕೆ ಪಕ್ಷವು ಇಂದು (ಶುಕ್ರವಾರ) ನಿರ್ಣಾಯಕ ಸಭೆ ಸೇರಲಿದ್ದು, ಟಿವಿಕೆಗೆ ಬೆಂಬಲ ಘೋಷಿಸುವ ಸಾಧ್ಯತೆ ಇದೆ. ಇದು ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆಯಲ್ಲಿರುವ ವಿಜಯ್ಗೆ ಬಹುಮತ ಸಾಬೀತುಪಡಿಸಲು ನೆರವಾಗಲಿದೆ. </p>.ಟಿವಿಕೆಗೆ ಎಡಪಕ್ಷಗಳ ಬೆಂಬಲ: ಶೀಘ್ರದಲ್ಲೇ ಹಕ್ಕು ಮಂಡಿಸಲಿರುವ ವಿಜಯ್.ಬಿಜೆಪಿ ಅಧಿಕಾರದಲ್ಲಿರುವಾಗ ಬಂಗಾಳದಲ್ಲಿ ನುಸುಳುವಿಕೆ ಅಸಾಧ್ಯ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮಿಳುನಾಡಿನಲ್ಲಿ ನೂತನ ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ನಿರ್ದೇಶನ ನೀಡುವಂತೆ ನಟ, ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಶುಕ್ರವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. </p><p>ಸುಪ್ರೀಂ ಕೋರ್ಟ್ನಲ್ಲಿ ಎಳಿಲರಸಿ ಕೆ. ಎಂಬವರು ಅರ್ಜಿ ಸಲ್ಲಿಸಿದ್ದು, ಸಂವಿಧಾನದ 12 ಹಾಗೂ 32ನೇ ವಿಧಿಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. </p><p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳಲ್ಲಿ ಗೆದ್ದಿದ್ದ ಟಿವಿಕೆ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 118 ಆಗಿದೆ. </p><p>ಆದರೆ ಸರ್ಕಾರ ರಚಿಸಲು ಎರಡೆರಡು ಸಲ ರಾಜ್ಯಪಾಲರನ್ನು ಭೇಟಿಯಾದರೂ ಬಹುಮತಕ್ಕೆ ಬೇಕಾದ ಸಂಖ್ಯಾಬಲ ಇಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು. </p><p>ಚುನಾವಣೋತ್ತರ ಮೈತ್ರಿಯಲ್ಲಿ ಐದು ಶಾಸಕರನ್ನು ಹೊಂದಿದ ಕಾಂಗ್ರೆಸ್ ಪಕ್ಷವು ಟಿವಿಕೆಗೆ ಬೆಂಬಲ ಘೋಷಿಸಿತ್ತು. </p><p>ಶುಕ್ರವಾರ ನಡೆದ ಬಿರುಸಿನ ರಾಜಕೀಯ ಚಟುವಟಿಕೆಗಳಲ್ಲಿ ಎಡಪಕ್ಷಗಳಾದ ಸಿಪಿಐ ಹಾಗೂ ಸಿಪಿಐ(ಎಂ), ಟಿವಿಕೆಗೆ ಬೇಷರತ್ ಬೆಂಬಲ ನೀಡುವುದಾಗಿ ಘೋಷಿಸಿತ್ತು. ಸಿಪಿಐ ಹಾಗೂ ಸಿಪಿಐ(ಎಂ) ತಲಾ ಎರಡು ಸ್ಥಾನಗಳನ್ನು ಹೊಂದಿವೆ. </p><p>ಮತ್ತೊಂದೆಡೆ ಇಬ್ಬರು ಶಾಸಕರನ್ನು ಹೊಂದಿರುವ ವಿಸಿಕೆ ಪಕ್ಷವು ಇಂದು (ಶುಕ್ರವಾರ) ನಿರ್ಣಾಯಕ ಸಭೆ ಸೇರಲಿದ್ದು, ಟಿವಿಕೆಗೆ ಬೆಂಬಲ ಘೋಷಿಸುವ ಸಾಧ್ಯತೆ ಇದೆ. ಇದು ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆಯಲ್ಲಿರುವ ವಿಜಯ್ಗೆ ಬಹುಮತ ಸಾಬೀತುಪಡಿಸಲು ನೆರವಾಗಲಿದೆ. </p>.ಟಿವಿಕೆಗೆ ಎಡಪಕ್ಷಗಳ ಬೆಂಬಲ: ಶೀಘ್ರದಲ್ಲೇ ಹಕ್ಕು ಮಂಡಿಸಲಿರುವ ವಿಜಯ್.ಬಿಜೆಪಿ ಅಧಿಕಾರದಲ್ಲಿರುವಾಗ ಬಂಗಾಳದಲ್ಲಿ ನುಸುಳುವಿಕೆ ಅಸಾಧ್ಯ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>