<p>ಚೆನ್ನೈ: ತಮಿಳಿನ ಖ್ಯಾತ ನಟ, ರಾಜಕಾರಣಿ ವಿಜಯ್ ಅವರ ಟಿವಿಕೆ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತದ ಚುನಾವಣಾ ಆಯೋಗವು ಶುಕ್ರವಾರ ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.</p><p>ಚುನಾವಣಾ ಆಯೋಗದ ಪರ ಹಾಜರಿದ್ದ ವಕೀಲ ನಿರಂಜನ್ ರಾಜಗೋಪಾಲ್ ಅವರು ಮುಖ್ಯ ನ್ಯಾಯಮೂರ್ತಿ ಎಂ.ಎಂ. ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ತಿಳಿಸಿದರು. </p><p>ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಆಯೋಜಿಸಲಾಗಿದ್ದ ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವಿಗೀಡಾದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮಾನ್ಯತೆ ರದ್ದುಗೊಳಿಸುವಂತೆ ಕೋರಿ ಸಿ. ಸೆಲ್ವಕುಮಾರ್ ಮತ್ತು ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p><p>ಟಿವಿಕೆಗೆ ಮಾನ್ಯತೆಯೇ ಇಲ್ಲದಿರುವುದರಿಂದ ಈ ಪಿಐಎಲ್ಗೆ ಯಾವುದೇ ಮಹತ್ವ ಇಲ್ಲ ಎಂದು ನಿರಂಜನ್ ರಾಜಗೋಪಾಲ್ ವಾದಿಸಿದರು.</p><p>ಸೆಪ್ಟೆಂಬರ್ 27ರ ಕರೂರ್ ಕಾಲ್ತುಳಿತಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಹೈಕೋರ್ಟ್ನ ಆಡಳಿತಾತ್ಮಕ ವಿಭಾಗದ ಮುಂದೆ ಇಡಲು ಸೂಚಿಸಿದ ನ್ಯಾಯಾಲಯ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹೊರತುಪಡಿಸಿ, ಉಳಿದ ಪ್ರಕರಣಗಳ ವಿಚಾರಣೆಗೆ ಪೀಠವನ್ನು ರಚಿಸಲು ರಿಜಿಸ್ಟ್ರಿಗೆ ನಿರ್ದೇಶನ ನೀಡಿತು.</p><p>ಮೂಲತಃ, ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠದಲ್ಲಿ ಸಲ್ಲಿಸಲಾಗಿತ್ತು, ಆದರೆ, ಅರ್ಜಿಯಲ್ಲಿ ಮೊದಲ ಪ್ರತಿವಾದಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದರಿಂದ ಅದನ್ನು ವರ್ಗಾಯಿಸಿ ಮೊದಲ ಪೀಠದ ಮುಂದೆ ಪಟ್ಟಿ ಮಾಡಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ತಮಿಳಿನ ಖ್ಯಾತ ನಟ, ರಾಜಕಾರಣಿ ವಿಜಯ್ ಅವರ ಟಿವಿಕೆ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತದ ಚುನಾವಣಾ ಆಯೋಗವು ಶುಕ್ರವಾರ ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.</p><p>ಚುನಾವಣಾ ಆಯೋಗದ ಪರ ಹಾಜರಿದ್ದ ವಕೀಲ ನಿರಂಜನ್ ರಾಜಗೋಪಾಲ್ ಅವರು ಮುಖ್ಯ ನ್ಯಾಯಮೂರ್ತಿ ಎಂ.ಎಂ. ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ತಿಳಿಸಿದರು. </p><p>ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಆಯೋಜಿಸಲಾಗಿದ್ದ ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವಿಗೀಡಾದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮಾನ್ಯತೆ ರದ್ದುಗೊಳಿಸುವಂತೆ ಕೋರಿ ಸಿ. ಸೆಲ್ವಕುಮಾರ್ ಮತ್ತು ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p><p>ಟಿವಿಕೆಗೆ ಮಾನ್ಯತೆಯೇ ಇಲ್ಲದಿರುವುದರಿಂದ ಈ ಪಿಐಎಲ್ಗೆ ಯಾವುದೇ ಮಹತ್ವ ಇಲ್ಲ ಎಂದು ನಿರಂಜನ್ ರಾಜಗೋಪಾಲ್ ವಾದಿಸಿದರು.</p><p>ಸೆಪ್ಟೆಂಬರ್ 27ರ ಕರೂರ್ ಕಾಲ್ತುಳಿತಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಹೈಕೋರ್ಟ್ನ ಆಡಳಿತಾತ್ಮಕ ವಿಭಾಗದ ಮುಂದೆ ಇಡಲು ಸೂಚಿಸಿದ ನ್ಯಾಯಾಲಯ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹೊರತುಪಡಿಸಿ, ಉಳಿದ ಪ್ರಕರಣಗಳ ವಿಚಾರಣೆಗೆ ಪೀಠವನ್ನು ರಚಿಸಲು ರಿಜಿಸ್ಟ್ರಿಗೆ ನಿರ್ದೇಶನ ನೀಡಿತು.</p><p>ಮೂಲತಃ, ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠದಲ್ಲಿ ಸಲ್ಲಿಸಲಾಗಿತ್ತು, ಆದರೆ, ಅರ್ಜಿಯಲ್ಲಿ ಮೊದಲ ಪ್ರತಿವಾದಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದರಿಂದ ಅದನ್ನು ವರ್ಗಾಯಿಸಿ ಮೊದಲ ಪೀಠದ ಮುಂದೆ ಪಟ್ಟಿ ಮಾಡಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>