<p><strong>ಚೆನ್ನೈ</strong>: ಕೆಲ ಷರತ್ತುಗಳೊಂದಿಗೆ ಸೇಲಂನಲ್ಲಿ ಸಭೆ ನಡೆಸಲು ಟಿವಿಕೆ ಪಕ್ಷದ ಮುಖಂಡ ವಿಜಯ್ ಅವರಿಗೆ ಪೊಲೀಸರು ಅನುಮತಿಸಿದ್ದಾರೆ. </p><p>ನಾಳೆ ಸೇಲಂನ ಸೀಲನಾಯಕನಪಟ್ಟಿಯ ಕೆವಿಪಿ ಗಾರ್ಡನ್ನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಕ್ಯೂಆರ್ ಕೋಡ್ ಪಾಸ್ ಹೊಂದಿರುವ 4,998 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜತೆಗೆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ.</p><p>ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರಿಗೆ ಸಭೆಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ.</p><p>ಸಭೆಗೆ ಅನುಮತಿಸಿರುವುದನ್ನು ಖಚಿತಪಡಿಸಿರುವ ಟಿವಿಕೆ ಪಕ್ಷ, ಪೊಲೀಸ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ತನ್ನ ಸದಸ್ಯರಿಗೆ ಮನವಿ ಮಾಡಿದೆ.</p><p>2025ರ ಡಿಸೆಂಬರ್ನಲ್ಲಿ ಪುದುಚೇರಿಯಲ್ಲಿ ನಡೆದ ಸಭೆಯಲ್ಲಿಯೂ ಇಂತಹದ್ದೆ ಷರತ್ತುಗಳನ್ನು ಪೊಲೀಸರು ಹಾಕಿದ್ದರು. ಆ ಸಭೆಗೆ ಕ್ಯೂಆರ್ ಕೋಡ್ ಪಾಸ್ ಹೊಂದಿದ್ದ 5 ಸಾವಿರ ಜನರಿಗೆ ಅವಕಾಶ ನೀಡಲಾಗಿತ್ತು.</p><p>ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಕರೂರಿನಲ್ಲಿ ನಡೆದ ಟಿವಿಕೆ ಸಾರ್ವಜನಿಕ ಸಭೆಯಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಕೆಲ ಷರತ್ತುಗಳೊಂದಿಗೆ ಸೇಲಂನಲ್ಲಿ ಸಭೆ ನಡೆಸಲು ಟಿವಿಕೆ ಪಕ್ಷದ ಮುಖಂಡ ವಿಜಯ್ ಅವರಿಗೆ ಪೊಲೀಸರು ಅನುಮತಿಸಿದ್ದಾರೆ. </p><p>ನಾಳೆ ಸೇಲಂನ ಸೀಲನಾಯಕನಪಟ್ಟಿಯ ಕೆವಿಪಿ ಗಾರ್ಡನ್ನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಕ್ಯೂಆರ್ ಕೋಡ್ ಪಾಸ್ ಹೊಂದಿರುವ 4,998 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜತೆಗೆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ.</p><p>ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರಿಗೆ ಸಭೆಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ.</p><p>ಸಭೆಗೆ ಅನುಮತಿಸಿರುವುದನ್ನು ಖಚಿತಪಡಿಸಿರುವ ಟಿವಿಕೆ ಪಕ್ಷ, ಪೊಲೀಸ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ತನ್ನ ಸದಸ್ಯರಿಗೆ ಮನವಿ ಮಾಡಿದೆ.</p><p>2025ರ ಡಿಸೆಂಬರ್ನಲ್ಲಿ ಪುದುಚೇರಿಯಲ್ಲಿ ನಡೆದ ಸಭೆಯಲ್ಲಿಯೂ ಇಂತಹದ್ದೆ ಷರತ್ತುಗಳನ್ನು ಪೊಲೀಸರು ಹಾಕಿದ್ದರು. ಆ ಸಭೆಗೆ ಕ್ಯೂಆರ್ ಕೋಡ್ ಪಾಸ್ ಹೊಂದಿದ್ದ 5 ಸಾವಿರ ಜನರಿಗೆ ಅವಕಾಶ ನೀಡಲಾಗಿತ್ತು.</p><p>ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಕರೂರಿನಲ್ಲಿ ನಡೆದ ಟಿವಿಕೆ ಸಾರ್ವಜನಿಕ ಸಭೆಯಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>