ತಮಿಳುನಾಡು : ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಕುಟುಂಬದ ಸದಸ್ಯರ ಆಸ್ತಿಗಳ ಕುರಿತು ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್(ಪಿಟಿಆರ್) ಅವರು ಕೆಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಎಂದು ಅಣ್ಣಾಮಲೈ ಟ್ವೀಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಿಟಿಆರ್, ‘ಇದೊಂದು ದುರುದ್ದೇಶಪೂರಿತ ಕೆಲಸವಾಗಿದ್ದು, ಆಡಿಯೊವನ್ನು ಯಾರೋ ಸೃಷ್ಟಿಸಿದ್ದಾರೆ‘ ಎಂದಿದ್ದಾರೆ.
ಇತ್ತೀಚೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಒಂದು ಆಡಿಯೊ ಕ್ಲಿಪ್ಅನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು,‘ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಮತ್ತು ಅಳಿಯ ಶಬರೇಶನ್ ಅವರ ಆಸ್ತಿಗಳ ಬಗ್ಗೆ ಪಿಟಿಆರ್ ಕೆಲವು ರಹಸ್ಯ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ‘ ಎಂದು ಹೇಳಿದ್ದರು. ಈ ಆಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.