<p><strong>ಕೊಯಮತ್ತೂರು</strong>: ತಮಿಳುನಾಡಿನ ಕೊಯಮತ್ತೂರಿನ ಮಿದುಳು ನಿಷ್ಕ್ರಿಯಗೊಂಡಿದ್ದ 22 ವರ್ಷದ ವಿದ್ಯಾರ್ಥಿ ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 8 ಮಂದಿಗೆ ನೆರವಾಗಿದ್ದಾನೆ.</p>.<p>ಸೇಲಂ ಮೂಲದ ವಿದ್ಯಾರ್ಥಿ ಎಸ್.ವಿ. ದಿನೇಶ್ಗೆ ಕೊಯಮತ್ತೂರಿನಿಂದ 35 ಕಿ.ಮೀ ದೂರದ ಅಣ್ಣೂರ್ ಬಳಿ ಜೂನ್ 18ರಂದು ಅಪಘಾತವಾಗಿತ್ತು.</p>.<p>ಪ್ರಾಥಮಿಕ ಚಿಕಿತ್ಸೆ ಬಳಿಕ ಕೆಎಂಎಸಿಎಚ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದ ಕಾರಣ ಜೂನ್ 20ರಂದು ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಿಸಿದ್ದರು.</p>.<p>ಬಳಿಕ, ಮಗ ಮೃತಪಟ್ಟ ಬಳಿಕವೂ ಇತರರಿಗೆ ನೆರವಾಗಬೇಕೆಂದು ಬಯಸಿದ ತಂದೆ ವೆಂಕಟೇಶ್ವರನ್ ಮತ್ತು ತಾಯಿ ಶಾಂತಿ ಮಗನ ಕಿಡ್ನಿ, ಲಿವರ್, ಕಣ್ಣುಗಳು, ಚರ್ಮ ಮತ್ತು ಮೂಳೆಗಳನ್ನು ದಾನ ಮಾಡಿದ್ದಾರೆ ಎಂದು ತಮಿಳುನಾಡಿನ ಅಂಗಾಂಗ ಕಸಿ ಪ್ರಾಧಿಕಾರ ಹೇಳಿದೆ.</p>.<p>ವಿದ್ಯಾರ್ಥಿ ದಿನೇಶ್ ಅಂಗಾಂಗಳನ್ನು 8 ಮಂದಿ ರೋಗಿಗಳಿಗೆ ಕಸಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು</strong>: ತಮಿಳುನಾಡಿನ ಕೊಯಮತ್ತೂರಿನ ಮಿದುಳು ನಿಷ್ಕ್ರಿಯಗೊಂಡಿದ್ದ 22 ವರ್ಷದ ವಿದ್ಯಾರ್ಥಿ ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 8 ಮಂದಿಗೆ ನೆರವಾಗಿದ್ದಾನೆ.</p>.<p>ಸೇಲಂ ಮೂಲದ ವಿದ್ಯಾರ್ಥಿ ಎಸ್.ವಿ. ದಿನೇಶ್ಗೆ ಕೊಯಮತ್ತೂರಿನಿಂದ 35 ಕಿ.ಮೀ ದೂರದ ಅಣ್ಣೂರ್ ಬಳಿ ಜೂನ್ 18ರಂದು ಅಪಘಾತವಾಗಿತ್ತು.</p>.<p>ಪ್ರಾಥಮಿಕ ಚಿಕಿತ್ಸೆ ಬಳಿಕ ಕೆಎಂಎಸಿಎಚ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದ ಕಾರಣ ಜೂನ್ 20ರಂದು ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಿಸಿದ್ದರು.</p>.<p>ಬಳಿಕ, ಮಗ ಮೃತಪಟ್ಟ ಬಳಿಕವೂ ಇತರರಿಗೆ ನೆರವಾಗಬೇಕೆಂದು ಬಯಸಿದ ತಂದೆ ವೆಂಕಟೇಶ್ವರನ್ ಮತ್ತು ತಾಯಿ ಶಾಂತಿ ಮಗನ ಕಿಡ್ನಿ, ಲಿವರ್, ಕಣ್ಣುಗಳು, ಚರ್ಮ ಮತ್ತು ಮೂಳೆಗಳನ್ನು ದಾನ ಮಾಡಿದ್ದಾರೆ ಎಂದು ತಮಿಳುನಾಡಿನ ಅಂಗಾಂಗ ಕಸಿ ಪ್ರಾಧಿಕಾರ ಹೇಳಿದೆ.</p>.<p>ವಿದ್ಯಾರ್ಥಿ ದಿನೇಶ್ ಅಂಗಾಂಗಳನ್ನು 8 ಮಂದಿ ರೋಗಿಗಳಿಗೆ ಕಸಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>