<p><strong>ಜಬಲಪುರ:</strong> ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಅವರ ಪತಿ ಸಮರ್ಥ್ ಸಿಂಗ್, ಮಧ್ಯಪ್ರದೇಶ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. </p><p>ಕಳೆದ ವಾರ ಭೋಪಾಲದ ನ್ಯಾಯಾಲಯವೊಂದು ಅರ್ಜಿಯನ್ನು ತಿರಸ್ಕರಿಸಿದ ನಂತರ ಗುರುವಾರ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. </p><p>ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿರುವುದನ್ನು ಸಮರ್ಥ್ ಅವರ ವಕೀಲ ಜಯದೀಪ್ ಕೌರವ್ ಖಚಿತಪಡಿಸಿದ್ದಾರೆ. </p><p>ಇದೀಗ ಸಮರ್ಥ್ ಅವರಿಗೆ ಶರಣಾಗುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ. </p><p>ಭೋಪಾಲ್ನ ಕತಾರ ಹಿಲ್ಸ್ ಪ್ರದೇಶದಲ್ಲಿರುವ ಮನೆಯಲ್ಲಿ ಟ್ವಿಶಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮೇ 12ರಂದು ಪತ್ತೆಯಾಗಿತ್ತು. ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಟ್ವಿಶಾ ಅವರ ಪೋಷಕರು ಆರೋಪಿಸಿದ್ದರು. ಮತ್ತೊಂದೆಡೆ ಟ್ವಿಶಾ ಮಾದಕ ವ್ಯಸನಿಯಾಗಿದ್ದಳು ಎಂದು ಸಮರ್ಥ್ ಕುಟಂಬವು ಆರೋಪಿಸಿದೆ. </p><p>ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 80(2), 85, ಮತ್ತು 3(5)ರ ಅಡಿ ವರದಕ್ಷಿಣೆ ನಿಷೇಧ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳಡಿ ಸಮರ್ಥ್ ಸಿಂಗ್ ಮತ್ತು ಗಿರಿಬಾಲಾ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p><p>ಸಮರ್ಥ್ ಅವರ ತಾಯಿ, ಭೋಪಾಲ್ ಗ್ರಾಹಕ ನ್ಯಾಯಾಲಯದ ಅಧ್ಯಕ್ಷೆ ಗಿರಿಬಾಲಾ ಸಿಂಗ್ ಅವರಿಗೆ ಕಳೆದ ವಾರ ಭೋಪಾಲ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿತ್ತು. </p><p>ಸಮರ್ಥ್ ಬಗ್ಗೆ ಮಾಹಿತಿ ನೀಡಿದವರಿಗೆ ₹30 ಸಾವಿರ ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆಹೋಗಿದ್ದಾರೆ. </p>.ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣ: ಸಿಬಿಐ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಶಿಫಾರಸು.ಟ್ವಿಶಾ ಶರ್ಮಾ ಸಾವು ಪ್ರಕರಣ: ಹೈಕೋರ್ಟ್ ಮೊರೆಹೋದ ಕುಟುಂಬಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಬಲಪುರ:</strong> ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಅವರ ಪತಿ ಸಮರ್ಥ್ ಸಿಂಗ್, ಮಧ್ಯಪ್ರದೇಶ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. </p><p>ಕಳೆದ ವಾರ ಭೋಪಾಲದ ನ್ಯಾಯಾಲಯವೊಂದು ಅರ್ಜಿಯನ್ನು ತಿರಸ್ಕರಿಸಿದ ನಂತರ ಗುರುವಾರ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. </p><p>ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿರುವುದನ್ನು ಸಮರ್ಥ್ ಅವರ ವಕೀಲ ಜಯದೀಪ್ ಕೌರವ್ ಖಚಿತಪಡಿಸಿದ್ದಾರೆ. </p><p>ಇದೀಗ ಸಮರ್ಥ್ ಅವರಿಗೆ ಶರಣಾಗುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ. </p><p>ಭೋಪಾಲ್ನ ಕತಾರ ಹಿಲ್ಸ್ ಪ್ರದೇಶದಲ್ಲಿರುವ ಮನೆಯಲ್ಲಿ ಟ್ವಿಶಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮೇ 12ರಂದು ಪತ್ತೆಯಾಗಿತ್ತು. ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಟ್ವಿಶಾ ಅವರ ಪೋಷಕರು ಆರೋಪಿಸಿದ್ದರು. ಮತ್ತೊಂದೆಡೆ ಟ್ವಿಶಾ ಮಾದಕ ವ್ಯಸನಿಯಾಗಿದ್ದಳು ಎಂದು ಸಮರ್ಥ್ ಕುಟಂಬವು ಆರೋಪಿಸಿದೆ. </p><p>ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 80(2), 85, ಮತ್ತು 3(5)ರ ಅಡಿ ವರದಕ್ಷಿಣೆ ನಿಷೇಧ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳಡಿ ಸಮರ್ಥ್ ಸಿಂಗ್ ಮತ್ತು ಗಿರಿಬಾಲಾ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p><p>ಸಮರ್ಥ್ ಅವರ ತಾಯಿ, ಭೋಪಾಲ್ ಗ್ರಾಹಕ ನ್ಯಾಯಾಲಯದ ಅಧ್ಯಕ್ಷೆ ಗಿರಿಬಾಲಾ ಸಿಂಗ್ ಅವರಿಗೆ ಕಳೆದ ವಾರ ಭೋಪಾಲ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿತ್ತು. </p><p>ಸಮರ್ಥ್ ಬಗ್ಗೆ ಮಾಹಿತಿ ನೀಡಿದವರಿಗೆ ₹30 ಸಾವಿರ ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆಹೋಗಿದ್ದಾರೆ. </p>.ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣ: ಸಿಬಿಐ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಶಿಫಾರಸು.ಟ್ವಿಶಾ ಶರ್ಮಾ ಸಾವು ಪ್ರಕರಣ: ಹೈಕೋರ್ಟ್ ಮೊರೆಹೋದ ಕುಟುಂಬಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>