<p><strong>ಚಂಡೀಗಢ, ಪಂಜಾಬ್:</strong> ‘ವಿದೇಶದಿಂದಲೇ ಉಗ್ರ ಚಟುವಟಿಕೆಗಳನ್ನು ನಡೆಸುತ್ತಿದ್ದ ಇಬ್ಬರು ಪಾತಕಿಗಳನ್ನು ಮುಂಬೈನಲ್ಲಿ ಬಂಧಿಸಲಾಗಿದೆ’ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರು ಸೋಮವಾರ ತಿಳಿಸಿದ್ದಾರೆ. </p>.<p>‘ದುಬೈ ಮತ್ತು ಅರ್ಮೇನಿಯಾದಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪಾತಕಿಗಳು, ಪಂಜಾಬ್ನಲ್ಲಿ ಉಗ್ರ ಚಟುವಟಿಕೆಗಳನ್ನು ಸಂಘಟಿಸಲು ಯತ್ನಿಸುತ್ತಿದ್ದರು’ ಎಂದು ಅವರು ‘ಎಕ್ಸ್’ ಪೋಸ್ಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p>.<p>‘ಗುರುದಾಸಪುರ ಜಿಲ್ಲೆಯ ಸಾಜನ್ ಮಸೀಹ್ ಮತ್ತು ಅಮೃತಸರದ ಮನೀಶ್ ಬೇಡಿ ಬಂಧಿತರು. ಈ ಇಬ್ಬರೂ ಪಾಕಿಸ್ತಾನದ ಐಎಸ್ಐ ಬೆಂಬಲಿತ ಉಗ್ರ ಸಂಘಟನೆಯ ಹರ್ವಿಂದರ್ ಸಿಂಗ್ ರಿಂಡಾ ಮತ್ತು ಅಮೆರಿಕದಲ್ಲಿ ಬಂಧಿತನಾಗಿರುವ ಗ್ಯಾಂಗ್ಸ್ಟರ್ ಹ್ಯಾಪಿ ಪ್ಯಾಸಿಯನ್ ಜೊತೆ ನಂಟು ಹೊಂದಿದ್ದರು’ ಎಂದು ತಿಳಿಸಿದ್ದಾರೆ. </p>.<p>‘ಪಾತಕಿಗಳಿಬ್ಬರೂ ಬಟಾಲಾದ ಡೇರಾ ಬಾಬಾ ನಾನಕ್ನಲ್ಲಿ ಕೊಲೆ, ಸುಲಿಗೆಗಳು ಮತ್ತು ಅಮೃತಸರದಲ್ಲಿ ಗ್ರೆನೇಡ್ ದಾಳಿಗಳು ಸೇರಿದಂತೆ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಗುಪ್ತಚರ ಮಾಹಿತಿ ಹಾಗೂ ಕೇಂದ್ರ ಸಂಸ್ಥೆಗಳ ನೆರವಿನಿಂದ ಅಂತರ ರಾಜ್ಯ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಲಾಯಿತು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ, ಪಂಜಾಬ್:</strong> ‘ವಿದೇಶದಿಂದಲೇ ಉಗ್ರ ಚಟುವಟಿಕೆಗಳನ್ನು ನಡೆಸುತ್ತಿದ್ದ ಇಬ್ಬರು ಪಾತಕಿಗಳನ್ನು ಮುಂಬೈನಲ್ಲಿ ಬಂಧಿಸಲಾಗಿದೆ’ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರು ಸೋಮವಾರ ತಿಳಿಸಿದ್ದಾರೆ. </p>.<p>‘ದುಬೈ ಮತ್ತು ಅರ್ಮೇನಿಯಾದಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪಾತಕಿಗಳು, ಪಂಜಾಬ್ನಲ್ಲಿ ಉಗ್ರ ಚಟುವಟಿಕೆಗಳನ್ನು ಸಂಘಟಿಸಲು ಯತ್ನಿಸುತ್ತಿದ್ದರು’ ಎಂದು ಅವರು ‘ಎಕ್ಸ್’ ಪೋಸ್ಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p>.<p>‘ಗುರುದಾಸಪುರ ಜಿಲ್ಲೆಯ ಸಾಜನ್ ಮಸೀಹ್ ಮತ್ತು ಅಮೃತಸರದ ಮನೀಶ್ ಬೇಡಿ ಬಂಧಿತರು. ಈ ಇಬ್ಬರೂ ಪಾಕಿಸ್ತಾನದ ಐಎಸ್ಐ ಬೆಂಬಲಿತ ಉಗ್ರ ಸಂಘಟನೆಯ ಹರ್ವಿಂದರ್ ಸಿಂಗ್ ರಿಂಡಾ ಮತ್ತು ಅಮೆರಿಕದಲ್ಲಿ ಬಂಧಿತನಾಗಿರುವ ಗ್ಯಾಂಗ್ಸ್ಟರ್ ಹ್ಯಾಪಿ ಪ್ಯಾಸಿಯನ್ ಜೊತೆ ನಂಟು ಹೊಂದಿದ್ದರು’ ಎಂದು ತಿಳಿಸಿದ್ದಾರೆ. </p>.<p>‘ಪಾತಕಿಗಳಿಬ್ಬರೂ ಬಟಾಲಾದ ಡೇರಾ ಬಾಬಾ ನಾನಕ್ನಲ್ಲಿ ಕೊಲೆ, ಸುಲಿಗೆಗಳು ಮತ್ತು ಅಮೃತಸರದಲ್ಲಿ ಗ್ರೆನೇಡ್ ದಾಳಿಗಳು ಸೇರಿದಂತೆ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಗುಪ್ತಚರ ಮಾಹಿತಿ ಹಾಗೂ ಕೇಂದ್ರ ಸಂಸ್ಥೆಗಳ ನೆರವಿನಿಂದ ಅಂತರ ರಾಜ್ಯ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಲಾಯಿತು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>