<p><strong>ಬೆತುಲ್, ಮಧ್ಯಪ್ರದೇಶ</strong>: ಇಲ್ಲಿನ ಬೆತುಲ್ ಜಿಲ್ಲೆಯ ಅಮ್ಲಾ ಬ್ಲಾಕ್ನಲ್ಲಿ ಇಬ್ಬರು ಮಕ್ಕಳು ಕೆಮ್ಮಿನ ಸಿರಪ್ ‘ಕೋಲ್ಡ್ರಿಫ್’ನಿಂದ ಸೇವಿಸಿದ ಬಳಿಕ ಮೃತಪಟ್ಟಿದ್ದಾರೆ. </p>.<p>ಪರೀಕ್ಷೆ ವೇಳೆ ಡೈಇಥಿಲೀನ್ ಗ್ಲೈಕೋಲ್ (ಡಿಇಜಿ) ಮಕ್ಕಳ ದೇಹದಲ್ಲಿರುವುದು ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತರನ್ನು ಜಿಲ್ಲೆಯ ಕಲ್ಮೇಶ್ವರ ಗ್ರಾಮದ ಕಮಲೇಶ್ ಅವರ ಮಗ ಕಬೀರ್ (4) ಜಮುನ್ ಬಿಛುನಾ ಗ್ರಾಮದ ಎರಡೂವರೆ ವರ್ಷದ ಗರ್ಮಿತ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಆಮ್ಲಾ ಬ್ಲಾಕ್ನ ವೈದ್ಯಕೀಯ ಅಧಿಕಾರಿ ಡಾ. ಅಶೋಕ್ ನರ್ವಾರೆ ತಿಳಿಸಿದ್ದಾರೆ.</p>.<p class="title">‘ಮಕ್ಕಳ ಸ್ಥಿತಿ ಗಂಭೀರವಾದ ಬಳಿಕ ಛಿಂದ್ವಾರಾ ಜಿಲ್ಲೆ ಸಮೀಪದಲ್ಲಿರುವ ಪರಾಸಿಯಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಕ್ಕಳು ಸಿರಪ್ ಸೇವನೆಯಿಂದಲೇ ಮೃತಪಟ್ಟಿದ್ದಾರೆ ಎಂಬುದು ಖಚಿತಪಟ್ಟಿಲ್ಲ. ಈ ಕುರಿತು ವಿಸ್ತೃತ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಡಾ. ನರ್ವಾರೆ ಹೇಳಿದ್ದಾರೆ.</p>.<p class="title">ಇಬ್ಬರು ಮಕ್ಕಳ ಮಕ್ಕಳ ಮೂತ್ರಪಿಂಡದಲ್ಲಿ ಸಮಸ್ಯೆ, ಕಿಬ್ಬೊಟ್ಟೆಯಲ್ಲಿ ಊತ ಕಾಣಿಸಿಕೊಂಡಿತು. ತಕ್ಷಣವೇ ಆ ಮಕ್ಕಳನ್ನು ಬೆತುಲ್ನಿಂದ ಭೋಪಾಲ್ಗೆ ಕರೆದೊಯ್ಯಲಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಆದರೆ, ಮೂತ್ರಪಿಂಡದಲ್ಲಿ ಸಮಸ್ಯೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮುಖ್ಯ ಆರೋಗ್ಯಾಧಿಕಾರಿಗೆ ವರದಿ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆತುಲ್, ಮಧ್ಯಪ್ರದೇಶ</strong>: ಇಲ್ಲಿನ ಬೆತುಲ್ ಜಿಲ್ಲೆಯ ಅಮ್ಲಾ ಬ್ಲಾಕ್ನಲ್ಲಿ ಇಬ್ಬರು ಮಕ್ಕಳು ಕೆಮ್ಮಿನ ಸಿರಪ್ ‘ಕೋಲ್ಡ್ರಿಫ್’ನಿಂದ ಸೇವಿಸಿದ ಬಳಿಕ ಮೃತಪಟ್ಟಿದ್ದಾರೆ. </p>.<p>ಪರೀಕ್ಷೆ ವೇಳೆ ಡೈಇಥಿಲೀನ್ ಗ್ಲೈಕೋಲ್ (ಡಿಇಜಿ) ಮಕ್ಕಳ ದೇಹದಲ್ಲಿರುವುದು ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತರನ್ನು ಜಿಲ್ಲೆಯ ಕಲ್ಮೇಶ್ವರ ಗ್ರಾಮದ ಕಮಲೇಶ್ ಅವರ ಮಗ ಕಬೀರ್ (4) ಜಮುನ್ ಬಿಛುನಾ ಗ್ರಾಮದ ಎರಡೂವರೆ ವರ್ಷದ ಗರ್ಮಿತ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಆಮ್ಲಾ ಬ್ಲಾಕ್ನ ವೈದ್ಯಕೀಯ ಅಧಿಕಾರಿ ಡಾ. ಅಶೋಕ್ ನರ್ವಾರೆ ತಿಳಿಸಿದ್ದಾರೆ.</p>.<p class="title">‘ಮಕ್ಕಳ ಸ್ಥಿತಿ ಗಂಭೀರವಾದ ಬಳಿಕ ಛಿಂದ್ವಾರಾ ಜಿಲ್ಲೆ ಸಮೀಪದಲ್ಲಿರುವ ಪರಾಸಿಯಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಕ್ಕಳು ಸಿರಪ್ ಸೇವನೆಯಿಂದಲೇ ಮೃತಪಟ್ಟಿದ್ದಾರೆ ಎಂಬುದು ಖಚಿತಪಟ್ಟಿಲ್ಲ. ಈ ಕುರಿತು ವಿಸ್ತೃತ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಡಾ. ನರ್ವಾರೆ ಹೇಳಿದ್ದಾರೆ.</p>.<p class="title">ಇಬ್ಬರು ಮಕ್ಕಳ ಮಕ್ಕಳ ಮೂತ್ರಪಿಂಡದಲ್ಲಿ ಸಮಸ್ಯೆ, ಕಿಬ್ಬೊಟ್ಟೆಯಲ್ಲಿ ಊತ ಕಾಣಿಸಿಕೊಂಡಿತು. ತಕ್ಷಣವೇ ಆ ಮಕ್ಕಳನ್ನು ಬೆತುಲ್ನಿಂದ ಭೋಪಾಲ್ಗೆ ಕರೆದೊಯ್ಯಲಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಆದರೆ, ಮೂತ್ರಪಿಂಡದಲ್ಲಿ ಸಮಸ್ಯೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮುಖ್ಯ ಆರೋಗ್ಯಾಧಿಕಾರಿಗೆ ವರದಿ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>