<p><strong>ನವದೆಹಲಿ:</strong> ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಅಪರಾಧಿಗಳನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ದೆಹಲಿಯ ಶಹದಾರದ ವಿವೇಕ್ ವಿಹಾರ್ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.</p><p>ಬಾಬಿ ಅಲಿಯಾಸ್ ಅತುಲ್ (19), ಪರಸ್ ಶರ್ಮಾ ಅಲಿಯಾಸ್ ಪ್ರಿನ್ಸ್ (26) ಬಂಧಿತರು.</p>.ದೆಹಲಿ: ಅಮೆರಿಕದ ರೂಪದರ್ಶಿ ಎಂದು ಡೇಟಿಂಗ್ ಆ್ಯಪ್ನಲ್ಲಿ 700 ಮಹಿಳೆಯರಿಗೆ ವಂಚನೆ.<p>‘ಜನವರಿ 2 ರಂದು ನಡೆದ ಗುಂಡಿನ ದಾಳಿಯಲ್ಲಿ ಈ ಇಬ್ಬರು ವ್ಯಕ್ತಿಗಳು ಭಾಗಿಯಾಗಿದ್ದರು. ನಮ್ಮ ತಂಡಕ್ಕೆ ಆರೋಪಿಗಳ ಬಗ್ಗೆ ಮಾಹಿತಿ ಲಭಿಸಿತು. ಆರೋಪಿಗಳನ್ನು ಆನಂದ್ ವಿಹಾರ್ ಪ್ರದೇಶದಲ್ಲಿ ಪತ್ತೆ ಮಾಡಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಬಂಧಿಸಲು ಹೋದಾಗ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅವರ ಕಾಲಿಗೆ ಗುಂಡು ಹೊಡೆದು ಬಂಧಿಸಲಾಯಿತು. ಗುಂಡು ಹೊಡೆಯುವುದಕ್ಕೂ ಮುನ್ನ ಎಚ್ಚರಿಕೆಯಾಗಿ ಗಾಳಿಯಲ್ಲೂ ಗುಂಡು ಹಾರಿಸಲಾಯಿತು. ಇಬ್ಬರಿಗೂ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಆರೋಪಿಗಳು ಅಪರಾಧ ಹಿನ್ನೆಲೆಯಳ್ಳವರಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.ದೆಹಲಿ: ಶಾಲೆಯ ಹೊರಗೆ 14 ವರ್ಷದ ವಿದ್ಯಾರ್ಥಿ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಅಪರಾಧಿಗಳನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ದೆಹಲಿಯ ಶಹದಾರದ ವಿವೇಕ್ ವಿಹಾರ್ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.</p><p>ಬಾಬಿ ಅಲಿಯಾಸ್ ಅತುಲ್ (19), ಪರಸ್ ಶರ್ಮಾ ಅಲಿಯಾಸ್ ಪ್ರಿನ್ಸ್ (26) ಬಂಧಿತರು.</p>.ದೆಹಲಿ: ಅಮೆರಿಕದ ರೂಪದರ್ಶಿ ಎಂದು ಡೇಟಿಂಗ್ ಆ್ಯಪ್ನಲ್ಲಿ 700 ಮಹಿಳೆಯರಿಗೆ ವಂಚನೆ.<p>‘ಜನವರಿ 2 ರಂದು ನಡೆದ ಗುಂಡಿನ ದಾಳಿಯಲ್ಲಿ ಈ ಇಬ್ಬರು ವ್ಯಕ್ತಿಗಳು ಭಾಗಿಯಾಗಿದ್ದರು. ನಮ್ಮ ತಂಡಕ್ಕೆ ಆರೋಪಿಗಳ ಬಗ್ಗೆ ಮಾಹಿತಿ ಲಭಿಸಿತು. ಆರೋಪಿಗಳನ್ನು ಆನಂದ್ ವಿಹಾರ್ ಪ್ರದೇಶದಲ್ಲಿ ಪತ್ತೆ ಮಾಡಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಬಂಧಿಸಲು ಹೋದಾಗ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅವರ ಕಾಲಿಗೆ ಗುಂಡು ಹೊಡೆದು ಬಂಧಿಸಲಾಯಿತು. ಗುಂಡು ಹೊಡೆಯುವುದಕ್ಕೂ ಮುನ್ನ ಎಚ್ಚರಿಕೆಯಾಗಿ ಗಾಳಿಯಲ್ಲೂ ಗುಂಡು ಹಾರಿಸಲಾಯಿತು. ಇಬ್ಬರಿಗೂ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಆರೋಪಿಗಳು ಅಪರಾಧ ಹಿನ್ನೆಲೆಯಳ್ಳವರಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.ದೆಹಲಿ: ಶಾಲೆಯ ಹೊರಗೆ 14 ವರ್ಷದ ವಿದ್ಯಾರ್ಥಿ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>