ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಲ್ಲಿ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಗುವನ್ನು ರಕ್ಷಿಸಿದ ವೈದ್ಯರು

Published 2 ಅಕ್ಟೋಬರ್ 2023, 2:38 IST
Last Updated 2 ಅಕ್ಟೋಬರ್ 2023, 2:38 IST
ಅಕ್ಷರ ಗಾತ್ರ

ನವದೆಹಲಿ: ವಿಮಾನದಲ್ಲಿ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದ ಮಗುವಿಗೆ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೈದ್ಯರು ಚಿಕಿತ್ಸೆ ನೀಡಿ ಜೀವ ಉಳಿಸಿದ ಘಟನೆ ರಾಂಚಿ– ದೆಹಲಿ ನಡುವೆ ಸಂಚರಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಶನಿವಾರ ನಡೆದಿದೆ.

ಐಎಎಸ್‌ ಅಧಿಕಾರಿ ಮತ್ತು ವೈದ್ಯ ತರಬೇತಿಯನ್ನೂ ಪಡೆದಿರುವ ಡಾ. ನಿತಿನ್‌ ಕುಲಕರ್ಣಿ ಮತ್ತು ರಾಂಚಿಯ ಸರ್ದಾರ್‌ ಆಸ್ಪತ್ರೆಯ ವೈದ್ಯ ಡಾ ಮುಜಾಮಿಲ್‌ ಸೇರಿ ಮಗುವಿಗೆ ತುರ್ತು ವೈದ್ಯಕೀಯ ಸಹಾಯವಾಗಿ ವಯಸ್ಕರಿಗೆ ಮೀಸಲಾದ ಮುಖವಾಡವನ್ನು ಬಳಸಿಕೊಂಡು ಆಮ್ಲಜನಕದ ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ತಮ್ಮ ಕಿಟ್‌ನಲ್ಲಿದ್ದ ಚುಚ್ಚುಮದ್ದು ನೀಡಿ ಮಗುವಿನ ಪ್ರಾಣವನ್ನು ಉಳಿಸಿದ್ದಾರೆ.

1 ಗಂಟೆಯ ಬಳಿಕ ವಿಮಾನ ಲ್ಯಾಂಡ್‌ ಆದ ಕೂಡಲೇ ವೈದ್ಯಕೀಯ ಸಿಬ್ಬಂದಿ ಮಗುವಿಗೆ ಆಮ್ಲಜನಕ ನೀಡಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೋಷಕರು ರಾಂಚಿಯಿಂದ ಮಗುವನ್ನು ದೆಹಲಿಯ ಏಮ್ಸ್‌ಗೆ ಹೃದಯ ಸಂಬಂಧಿ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಮಗುವಿನ ಜೀವ ಉಳಿಸಿದ ವೈದ್ಯರ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT