<p><strong>ನವದೆಹಲಿ</strong>: ಪೂರ್ವ ದೆಹಲಿಯ ಅಕ್ಷರಧಾಮ ದೇವಸ್ಥಾನದ ಬಳಿ ಗಾಜಿಯಾಬಾದ್ ಮೂಲದ ಇಬ್ಬರು ಚಾರ್ಟರ್ಡ್ ಅಕೌಂಟೆಂಟ್ಗಳಿಂದ ₹50 ಲಕ್ಷ ಸುಲಿಗೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ದೇವಸ್ಥಾನದಿಂದ ಕೆಲವು ಮೀಟರ್ ದೂರದಲ್ಲಿರುವ ಪಾಂಡವ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ವ್ಯಕ್ತಿಯೊಬ್ಬರಿಂದ ಹಣ ಪಡೆದುಕೊಂಡು ಚಾರ್ಟರ್ಡ್ ಅಕೌಂಟೆಂಟ್ಗಳಾದ ಮೋಹಿತ್ ಶರ್ಮಾ ಮತ್ತು ಅರುಣ್ ತ್ಯಾಗಿ ಅವರು ಬೈಕ್ನಲ್ಲಿ ಗಾಜಿಯಾಬಾದ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ನಾಲ್ವರು ಬಂದೂಕು ತೋರಿಸಿ ಹಣ ನೀಡುವಂತೆ ಬೆದರಿಕೆ ಒಡ್ಡಿದ್ದರು.</p><p>ಶರ್ಮಾ ಮತ್ತು ತ್ಯಾಗಿ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಸಾಧ್ಯವಾಗಲಿಲ್ಲ. ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಓರ್ವ ಆರೋಪಿ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.</p><p>ಉಳಿದ ಮೂವರು ಹಣವಿದ್ದ ಬ್ಯಾಗನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದು, ಒಬ್ಬ ಆರೋಪಿಯನ್ನು ಕೆಲವು ದಾರಿಹೋಕರು ಮತ್ತು ಪ್ರಯಾಣಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೂರ್ವ ದೆಹಲಿಯ ಅಕ್ಷರಧಾಮ ದೇವಸ್ಥಾನದ ಬಳಿ ಗಾಜಿಯಾಬಾದ್ ಮೂಲದ ಇಬ್ಬರು ಚಾರ್ಟರ್ಡ್ ಅಕೌಂಟೆಂಟ್ಗಳಿಂದ ₹50 ಲಕ್ಷ ಸುಲಿಗೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ದೇವಸ್ಥಾನದಿಂದ ಕೆಲವು ಮೀಟರ್ ದೂರದಲ್ಲಿರುವ ಪಾಂಡವ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ವ್ಯಕ್ತಿಯೊಬ್ಬರಿಂದ ಹಣ ಪಡೆದುಕೊಂಡು ಚಾರ್ಟರ್ಡ್ ಅಕೌಂಟೆಂಟ್ಗಳಾದ ಮೋಹಿತ್ ಶರ್ಮಾ ಮತ್ತು ಅರುಣ್ ತ್ಯಾಗಿ ಅವರು ಬೈಕ್ನಲ್ಲಿ ಗಾಜಿಯಾಬಾದ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ನಾಲ್ವರು ಬಂದೂಕು ತೋರಿಸಿ ಹಣ ನೀಡುವಂತೆ ಬೆದರಿಕೆ ಒಡ್ಡಿದ್ದರು.</p><p>ಶರ್ಮಾ ಮತ್ತು ತ್ಯಾಗಿ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು ಸಾಧ್ಯವಾಗಲಿಲ್ಲ. ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಓರ್ವ ಆರೋಪಿ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.</p><p>ಉಳಿದ ಮೂವರು ಹಣವಿದ್ದ ಬ್ಯಾಗನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದು, ಒಬ್ಬ ಆರೋಪಿಯನ್ನು ಕೆಲವು ದಾರಿಹೋಕರು ಮತ್ತು ಪ್ರಯಾಣಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>