ಪಣಜಿ: ಗೋವಾದ ಇಬ್ಬರು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಗಳಿವೆ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ದಯಾನಂದ ಸೊಪ್ಟೆ ಮತ್ತು ಶುಭಾಸ್ ಶಿರೋಡ್ಕರ್ ಬಿಜೆಪಿ ಸೇರಲಿರುವ ಕಾಂಗ್ರೆಸ್ ಶಾಸಕರು. ಸೋಮವಾರ ಮಧ್ಯರಾತ್ರಿ ದೆಹಲಿಗೆ ತೆರಳಿದ್ದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಗೋವಾ ಬಿಜೆಪಿ ಘಟಕದ ಉನ್ನತ ಮೂಲಗಳು ತಿಳಿಸಿವೆ.
ಈಗಾಗಲೇ ಇಬ್ಬರ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಶಾಸಕರ ಜತೆಗೆ ವಿಶ್ವಜಿತ್ ರಾಣೆ ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿದಯಾನಂದ ಸೊಪ್ಟೆ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರನ್ನು ಸೋಲಿಸಿದ್ದರು.