<p><strong>ಕೊಚ್ಚಿ (ಕೇರಳ):</strong> ಎನ್ಸಿಸಿ ಕ್ಯಾಂಪ್ ವೇಳೆ ಇಬ್ಬರು ಸೇನಾ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ ಇಬ್ಬರನ್ನು ಕೊಚ್ಚಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p><p>ಬಂಧಿತರನ್ನು ಕೊಚ್ಚಿಯ ನಿಶಾದ್ ಮತ್ತು ನವಾಜ್ ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನೂ ಜೈಲಿಗೆ ಕಳುಹಿಸಿದ್ದಾರೆ.</p><p>ಡಿಸೆಂಬರ್ 23 ರಂದು ಕೊಚ್ಚಿಯ ಕೆಎಂಎಂ ಕಾಲೇಜು ಕ್ಯಾಂಪಸ್ನಲ್ಲಿ ಎನ್ಸಿಸಿ 21 ಕೇರಳ ಬೆಟಾಲಿಯನ್ನ ವಾರ್ಷಿಕ ತರಬೇತಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಅದೇ ದಿನ ಊಟ ಮಾಡಿದ್ದ 60 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.</p><p>ಈ ವಿಷಯ ತಿಳಿದು ಕ್ಯಾಂಪ್ಗೆ ಸಂಬಂಧ ಇಲ್ಲದ ನಿಶಾದ್ ಮತ್ತು ನವಾಜ್ ಎನ್ನುವರು ಲೆಫ್ಟಿನಂಟ್ ಕರ್ನಲ್ ಕರ್ನೇಯಿಲ್ ಸಿಂಗ್ ಹಾಗೂ ಬೆಟಾಲಿಯನ್ನ ಆಡಳಿತಾಧಿಕಾರಿ ಮೇಲೆ ಹಲ್ಲೆ ಮಾಡಿದ್ದರು. ಚಾಕು ತೋರಿಸಿ ಬೆದರಿಕೆ ಹಾಕಿದ್ದರು ಎಂದು ದೂರಲಾಗಿತ್ತು.</p><p>ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಾಪತ್ತೆಯಾಗಿದ್ದ ಇಬ್ಬರನ್ನೂ ಬಂಧಿಸಿ ಕ್ರಮ ಜರುಗಿಸಿದ್ದಾರೆ. ಬಂಧಿತರ ವಿರುದ್ಧ ಬಿಎನ್ಎಸ್ ವಿವಿಧ ಪ್ರಕರಣಗಳ ಅಡಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ (ಕೇರಳ):</strong> ಎನ್ಸಿಸಿ ಕ್ಯಾಂಪ್ ವೇಳೆ ಇಬ್ಬರು ಸೇನಾ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ ಇಬ್ಬರನ್ನು ಕೊಚ್ಚಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p><p>ಬಂಧಿತರನ್ನು ಕೊಚ್ಚಿಯ ನಿಶಾದ್ ಮತ್ತು ನವಾಜ್ ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನೂ ಜೈಲಿಗೆ ಕಳುಹಿಸಿದ್ದಾರೆ.</p><p>ಡಿಸೆಂಬರ್ 23 ರಂದು ಕೊಚ್ಚಿಯ ಕೆಎಂಎಂ ಕಾಲೇಜು ಕ್ಯಾಂಪಸ್ನಲ್ಲಿ ಎನ್ಸಿಸಿ 21 ಕೇರಳ ಬೆಟಾಲಿಯನ್ನ ವಾರ್ಷಿಕ ತರಬೇತಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಅದೇ ದಿನ ಊಟ ಮಾಡಿದ್ದ 60 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.</p><p>ಈ ವಿಷಯ ತಿಳಿದು ಕ್ಯಾಂಪ್ಗೆ ಸಂಬಂಧ ಇಲ್ಲದ ನಿಶಾದ್ ಮತ್ತು ನವಾಜ್ ಎನ್ನುವರು ಲೆಫ್ಟಿನಂಟ್ ಕರ್ನಲ್ ಕರ್ನೇಯಿಲ್ ಸಿಂಗ್ ಹಾಗೂ ಬೆಟಾಲಿಯನ್ನ ಆಡಳಿತಾಧಿಕಾರಿ ಮೇಲೆ ಹಲ್ಲೆ ಮಾಡಿದ್ದರು. ಚಾಕು ತೋರಿಸಿ ಬೆದರಿಕೆ ಹಾಕಿದ್ದರು ಎಂದು ದೂರಲಾಗಿತ್ತು.</p><p>ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಾಪತ್ತೆಯಾಗಿದ್ದ ಇಬ್ಬರನ್ನೂ ಬಂಧಿಸಿ ಕ್ರಮ ಜರುಗಿಸಿದ್ದಾರೆ. ಬಂಧಿತರ ವಿರುದ್ಧ ಬಿಎನ್ಎಸ್ ವಿವಿಧ ಪ್ರಕರಣಗಳ ಅಡಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>