<p><strong>ಮಧುರೈ:</strong> ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.</p><p>‘ಮೃತ ವಿದ್ಯಾರ್ಥಿನಿಯರನ್ನು ಪರಿಮಳಾ ಹಾಗೂ ಶರಣ್ಯಾ ಎಂದು ಗುರುತಿಸಲಾಗಿದೆ. ಘಟನೆಯು ಗುರುವಾರ ಮುಂಜಾನೆ ನಡೆದಿದೆ. ಸ್ಫೋಟದ ಬೀಕರತೆಗೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು, ಹೊಗೆ ಆವರಿಸಿತ್ತು. ಒಳಗಿದ್ದವರನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮಧುರೈ ಜಿಲ್ಲಾಧಿಕಾರಿ ಎಂ.ಎಸ್. ಸಂಗೀತಾ ತಿಳಿಸಿದ್ದಾರೆ.</p><p>ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಪಿ. ತೈಗರಾಜನ್, ‘ವಿದ್ಯಾರ್ಥಿನಿಯರಿಗೆ ಪರ್ಯಾಯ ವಸತಿ ಕಲ್ಪಿಸಲಾಗುವುದು. ಘಟನೆ ಕುರಿತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದಿದ್ದಾರೆ.</p><p>ತಾತ್ಕಾಲಿಕ ಆಶ್ರಯ ತಾಣಕ್ಕೆ ಭೇಟಿ ನೀಡಿದ ತೈಗರಾಜನ್, ವಿದ್ಯಾರ್ಥಿನಿಯರೊಂದಿಗೆ ಸಮಾಲೋಚನೆ ನಡೆಸಿದರು. ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.</p><p>‘ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿತ್ತು. ಕಟ್ಟಡ ನೆಲಸಮಗೊಳಿಸಲು ಸ್ಥಳೀಯ ಸಂಸ್ಥೆ ನೋಟಿಸ್ ನೀಡಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿದೆ. ದಾಖಲೆಗಳನ್ನು ಪರಿಶೀಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುರೈ:</strong> ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.</p><p>‘ಮೃತ ವಿದ್ಯಾರ್ಥಿನಿಯರನ್ನು ಪರಿಮಳಾ ಹಾಗೂ ಶರಣ್ಯಾ ಎಂದು ಗುರುತಿಸಲಾಗಿದೆ. ಘಟನೆಯು ಗುರುವಾರ ಮುಂಜಾನೆ ನಡೆದಿದೆ. ಸ್ಫೋಟದ ಬೀಕರತೆಗೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು, ಹೊಗೆ ಆವರಿಸಿತ್ತು. ಒಳಗಿದ್ದವರನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮಧುರೈ ಜಿಲ್ಲಾಧಿಕಾರಿ ಎಂ.ಎಸ್. ಸಂಗೀತಾ ತಿಳಿಸಿದ್ದಾರೆ.</p><p>ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಪಿ. ತೈಗರಾಜನ್, ‘ವಿದ್ಯಾರ್ಥಿನಿಯರಿಗೆ ಪರ್ಯಾಯ ವಸತಿ ಕಲ್ಪಿಸಲಾಗುವುದು. ಘಟನೆ ಕುರಿತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದಿದ್ದಾರೆ.</p><p>ತಾತ್ಕಾಲಿಕ ಆಶ್ರಯ ತಾಣಕ್ಕೆ ಭೇಟಿ ನೀಡಿದ ತೈಗರಾಜನ್, ವಿದ್ಯಾರ್ಥಿನಿಯರೊಂದಿಗೆ ಸಮಾಲೋಚನೆ ನಡೆಸಿದರು. ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.</p><p>‘ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿತ್ತು. ಕಟ್ಟಡ ನೆಲಸಮಗೊಳಿಸಲು ಸ್ಥಳೀಯ ಸಂಸ್ಥೆ ನೋಟಿಸ್ ನೀಡಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿದೆ. ದಾಖಲೆಗಳನ್ನು ಪರಿಶೀಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>