ಕೇರಳದ ಮಲಂಕಾರ ಸಿರಿಯಾ ಚರ್ಚ್ನ ನಾಲ್ವರು ಪಾದ್ರಿಗಳು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ, ಬ್ಲ್ಯಾಕ್ಮೇಲ್ ನಡೆಸಿದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಪ್ರಕರಣದ ಸಂಬಂಧ ಜಾಮೀನು ಕೋರಿ ಪಾದ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್, ಆಗಸ್ಟ್ 13ರೊಳಗೆ ಪೊಲೀಸರಿಗೆ ಶರಣಾಗುವಂತೆ ಸೂಚಿಸಿತ್ತು. ಈ ಹಿಂದೆಯೇ ಇಬ್ಬರು ಪಾದ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.