<p><strong>ನವದೆಹಲಿ</strong>: ದೆಹಲಿಯ ರೋಹಿಣಿ ಪ್ರದೇಶದ ಸೆಕ್ಟರ್ 17ರಲ್ಲಿನ ಕೊಳೆಗೇರಿಯೊಂದರಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, 800ಕ್ಕೂ ಅಧಿಕ ಗುಡಿಸಲುಗಳು ಭಸ್ಮವಾಗಿವೆ.</p>.<p>ಮೂರು ಗಂಟೆಗೂ ಹೆಚ್ಚು ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.</p>.<p>‘ಭಸ್ಮವಾಗಿದ್ದ ಗುಡಿಸಲುಗಳ ಅವಶೇಷಗಳಿಂದ, ಎರಡೂವರೆ ವರ್ಷ ಹಾಗೂ ಮೂರು ವರ್ಷದ ಬಾಲಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ’ ಎಂದು ಡಿಸಿಪಿ (ರೋಹಿಣಿ) ಅಮಿತ್ ಗೋಯೆಲ್ ತಿಳಿಸಿದ್ದಾರೆ.</p>.<p>‘ಬೆಳಿಗ್ಗೆ 11.55ರ ವೇಳೆಗೆ ಅಗ್ನಿ ಅವಘಡ ಕುರಿತು ಕರೆ ಸ್ವೀಕರಿಸಿದ ಕೂಡಲೇ, ಘಟನಾ ಸ್ಥಳಕ್ಕೆ 17 ಅಗ್ನಿಶಾಮಕ ವಾಹನಗಳನ್ನು ಕಳಿಸಿಕೊಡಲಾಯಿತು. ನಂತರ, ಒಟ್ಟು 26 ವಾಹನಗಳನ್ನು ಅಗ್ನಿ ನಂದಿಸುವ ಕಾರ್ಯಕ್ಕೆ ನಿಯೋಜನೆ ಮಾಡಲಾಯಿತು’ ಎಂದು ದೆಹಲಿ ಅಗ್ನಿ ಸೇವೆಗಳ ಅಧಿಕಾರಿ ಹೇಳಿದ್ದಾರೆ.</p>.<p>‘ಒಂದು ಗುಡಿಸಲಿನಲ್ಲಿ ಕಾಣಿಸಿಕೊಂಡ ಬೆಂಕಿ, ನಂತರ ಇತರೆಡೆ ವ್ಯಾಪಿಸಿತು. ಇಕ್ಕಟ್ಟಾದ ರಸ್ತೆಗಳ ಕಾರಣ, ಬೆಂಕಿ ನಂದಿಸುವುದು ಸವಾಲಿನದಾಗಿತ್ತು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ರೋಹಿಣಿ ಪ್ರದೇಶದ ಸೆಕ್ಟರ್ 17ರಲ್ಲಿನ ಕೊಳೆಗೇರಿಯೊಂದರಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, 800ಕ್ಕೂ ಅಧಿಕ ಗುಡಿಸಲುಗಳು ಭಸ್ಮವಾಗಿವೆ.</p>.<p>ಮೂರು ಗಂಟೆಗೂ ಹೆಚ್ಚು ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.</p>.<p>‘ಭಸ್ಮವಾಗಿದ್ದ ಗುಡಿಸಲುಗಳ ಅವಶೇಷಗಳಿಂದ, ಎರಡೂವರೆ ವರ್ಷ ಹಾಗೂ ಮೂರು ವರ್ಷದ ಬಾಲಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ’ ಎಂದು ಡಿಸಿಪಿ (ರೋಹಿಣಿ) ಅಮಿತ್ ಗೋಯೆಲ್ ತಿಳಿಸಿದ್ದಾರೆ.</p>.<p>‘ಬೆಳಿಗ್ಗೆ 11.55ರ ವೇಳೆಗೆ ಅಗ್ನಿ ಅವಘಡ ಕುರಿತು ಕರೆ ಸ್ವೀಕರಿಸಿದ ಕೂಡಲೇ, ಘಟನಾ ಸ್ಥಳಕ್ಕೆ 17 ಅಗ್ನಿಶಾಮಕ ವಾಹನಗಳನ್ನು ಕಳಿಸಿಕೊಡಲಾಯಿತು. ನಂತರ, ಒಟ್ಟು 26 ವಾಹನಗಳನ್ನು ಅಗ್ನಿ ನಂದಿಸುವ ಕಾರ್ಯಕ್ಕೆ ನಿಯೋಜನೆ ಮಾಡಲಾಯಿತು’ ಎಂದು ದೆಹಲಿ ಅಗ್ನಿ ಸೇವೆಗಳ ಅಧಿಕಾರಿ ಹೇಳಿದ್ದಾರೆ.</p>.<p>‘ಒಂದು ಗುಡಿಸಲಿನಲ್ಲಿ ಕಾಣಿಸಿಕೊಂಡ ಬೆಂಕಿ, ನಂತರ ಇತರೆಡೆ ವ್ಯಾಪಿಸಿತು. ಇಕ್ಕಟ್ಟಾದ ರಸ್ತೆಗಳ ಕಾರಣ, ಬೆಂಕಿ ನಂದಿಸುವುದು ಸವಾಲಿನದಾಗಿತ್ತು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>