<p><strong>ತಿರುವನಂತಪುರ</strong>: ಕೇರಳದ ತ್ರಿಶ್ಶೂರ್ ಜಿಲ್ಲೆಯ ಅತಿರಾಪಿಳ್ಳಿ ಅರಣ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಕಾಡಾನೆಗಳ ದಾಳಿಯಿಂದ ಮೂವರು ಮೃತಪಟ್ಟಿದ್ದಾರೆ.</p>.<p>ಕಿರುಉತ್ಪನ್ನಗಳನ್ನು ಸಂಗ್ರಹಿಸಲಿಕ್ಕಾಗಿ ಕಾಡಿಗೆ ಹೋಗಿದ್ದ ವಾಳಚ್ಚಾಲ್ನ ಸಸ್ತಂಪೂವಂ ವಸತಿಯ ಬುಡಕಟ್ಟು ಜನರಾದ ಸತೀಶ್ ಹಾಗೂ ಅಂಬಿಕಾ ಕಾಡಾನೆ ದಾಳಿಯಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ.</p>.<p>ಅತಿರಾಪಿಳ್ಳಿ ಸಮೀಪದ ಮಲಕ್ಕಪರ ಗ್ರಾಮದ ಬುಡಕಟ್ಟು ಯುವಕ ಸೆಬಾಸ್ಟಿಯನ್ (20) ಜೇನುತುಪ್ಪ ಸಂಗ್ರಹಕ್ಕಾಗಿ ಕಾಡಿಗೆ ಹೋಗಿದ್ದಾಗ ಭಾನುವಾರ ರಾತ್ರಿ ಕಾಡಾನೆ ತುಳಿದು ಮೃತರಾಗಿದ್ದಾರೆ.</p>.<p>ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೂ ಕಾಡುಪ್ರಾಣಿಗಳ ದಾಳಿಯಿಂದ 18 ಜನರು ಮೃತಪಟ್ಟಿದ್ದಾರೆ.</p>.<p>ಮಾನವ– ಪ್ರಾಣಿ ಸಂಘರ್ಷ ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ತ್ರಿಶ್ಶೂರ್ ಜಿಲ್ಲೆಯ ಅತಿರಾಪಿಳ್ಳಿ ಅರಣ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಕಾಡಾನೆಗಳ ದಾಳಿಯಿಂದ ಮೂವರು ಮೃತಪಟ್ಟಿದ್ದಾರೆ.</p>.<p>ಕಿರುಉತ್ಪನ್ನಗಳನ್ನು ಸಂಗ್ರಹಿಸಲಿಕ್ಕಾಗಿ ಕಾಡಿಗೆ ಹೋಗಿದ್ದ ವಾಳಚ್ಚಾಲ್ನ ಸಸ್ತಂಪೂವಂ ವಸತಿಯ ಬುಡಕಟ್ಟು ಜನರಾದ ಸತೀಶ್ ಹಾಗೂ ಅಂಬಿಕಾ ಕಾಡಾನೆ ದಾಳಿಯಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ.</p>.<p>ಅತಿರಾಪಿಳ್ಳಿ ಸಮೀಪದ ಮಲಕ್ಕಪರ ಗ್ರಾಮದ ಬುಡಕಟ್ಟು ಯುವಕ ಸೆಬಾಸ್ಟಿಯನ್ (20) ಜೇನುತುಪ್ಪ ಸಂಗ್ರಹಕ್ಕಾಗಿ ಕಾಡಿಗೆ ಹೋಗಿದ್ದಾಗ ಭಾನುವಾರ ರಾತ್ರಿ ಕಾಡಾನೆ ತುಳಿದು ಮೃತರಾಗಿದ್ದಾರೆ.</p>.<p>ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೂ ಕಾಡುಪ್ರಾಣಿಗಳ ದಾಳಿಯಿಂದ 18 ಜನರು ಮೃತಪಟ್ಟಿದ್ದಾರೆ.</p>.<p>ಮಾನವ– ಪ್ರಾಣಿ ಸಂಘರ್ಷ ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>