<p><strong>ಮಾಲಕಾನ್ಗಿರಿ, ಒಡಿಶಾ:</strong> ‘ಇಲ್ಲಿನ ಮಾಲಕಾನ್ಗಿರಿ ಜಿಲ್ಲೆಯ ಮೈಥಿಲಿ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಟುಲಿಗುಡಾ, ಸದೆಹೈಗುಡಾ ಅರಣ್ಯದಲ್ಲಿ ಇಬ್ಬರು ನಕ್ಸಲರನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಛತ್ತೀಸಗಢದ ಸಿಪಿಐ(ಮಾವೋವಾದಿ) ಸಮಿತಿ ಸದಸ್ಯರಾದ ಕೆಶಕಾವಾಸಿ ಹಾಗೂ ರಾಜೇಶ್ ಅಲಿಯಾಸ್ ಶನುಕುಂಜಾಮ್ ಬಂಧಿತರಾಗಿದ್ದು, ಇಬ್ಬರು ತಲೆಗೂ ತಲಾ ₹5 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>‘ಗುರುವಾರ ರಾತ್ರಿಯಿಂದಲೇ ಕಾಡಿನಲ್ಲಿ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದರು. ಮಾವೋವಾದಿಗಳು ಮುಖಾಮುಖಿಯಾಗುತ್ತಿದ್ದಂತೆಯೇ ಶರಣಾಗುವಂತೆ ಸೂಚಿಸಲಾಯಿತು. ಈ ವೇಳೆ ಪೊಲೀಸರ ಮೇಲೆ ಪ್ರತಿದಾಳಿ ನಡೆಸಿದರು. ಪೊಲೀಸರು ಪ್ರತಿದಾಳಿ ನಡೆಸಿ, ಇಬ್ಬರು ನಕ್ಸಲರನ್ನು ಬಂಧಿಸಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">‘ತಂಡದಲ್ಲಿದ್ದ ಉಳಿದವರು ಪರಾರಿಯಾಗಿದ್ದಾರೆ. ಬಂಧಿತರಿಂದ ರಿವಾಲ್ವರ್, ಆರು ಜೀವಂತ ಗುಂಡುಗಳು, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಪಾಟೀಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲಕಾನ್ಗಿರಿ, ಒಡಿಶಾ:</strong> ‘ಇಲ್ಲಿನ ಮಾಲಕಾನ್ಗಿರಿ ಜಿಲ್ಲೆಯ ಮೈಥಿಲಿ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಟುಲಿಗುಡಾ, ಸದೆಹೈಗುಡಾ ಅರಣ್ಯದಲ್ಲಿ ಇಬ್ಬರು ನಕ್ಸಲರನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಛತ್ತೀಸಗಢದ ಸಿಪಿಐ(ಮಾವೋವಾದಿ) ಸಮಿತಿ ಸದಸ್ಯರಾದ ಕೆಶಕಾವಾಸಿ ಹಾಗೂ ರಾಜೇಶ್ ಅಲಿಯಾಸ್ ಶನುಕುಂಜಾಮ್ ಬಂಧಿತರಾಗಿದ್ದು, ಇಬ್ಬರು ತಲೆಗೂ ತಲಾ ₹5 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>‘ಗುರುವಾರ ರಾತ್ರಿಯಿಂದಲೇ ಕಾಡಿನಲ್ಲಿ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದರು. ಮಾವೋವಾದಿಗಳು ಮುಖಾಮುಖಿಯಾಗುತ್ತಿದ್ದಂತೆಯೇ ಶರಣಾಗುವಂತೆ ಸೂಚಿಸಲಾಯಿತು. ಈ ವೇಳೆ ಪೊಲೀಸರ ಮೇಲೆ ಪ್ರತಿದಾಳಿ ನಡೆಸಿದರು. ಪೊಲೀಸರು ಪ್ರತಿದಾಳಿ ನಡೆಸಿ, ಇಬ್ಬರು ನಕ್ಸಲರನ್ನು ಬಂಧಿಸಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">‘ತಂಡದಲ್ಲಿದ್ದ ಉಳಿದವರು ಪರಾರಿಯಾಗಿದ್ದಾರೆ. ಬಂಧಿತರಿಂದ ರಿವಾಲ್ವರ್, ಆರು ಜೀವಂತ ಗುಂಡುಗಳು, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಪಾಟೀಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>