<p><strong>ನವದೆಹಲಿ</strong>: ಕಾಲ್ತುಳಿತ ಪ್ರಕರಣದ ತನಿಖೆ ನಡೆಸಲು ಇಬ್ಬರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.</p><p>ಉತ್ತರ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ನರಸಿಂಗ್ ದೇವು ಮತ್ತು ಉತ್ತರ ರೈಲ್ವೆಯ ಪ್ರಧಾನ ಮುಖ್ಯ ಭದ್ರತಾ ಆಯುಕ್ತ ಪಂಕಜ್ ಗಂಗ್ವಾರ್ ಸಮಿತಿಯ ಸದಸ್ಯರಾಗಿದ್ದಾರೆ.</p><p>ಇಂದಿನಿಂದಲೇ ತನಿಖೆ ಆರಂಭಿಸಿರುವ ಸಮಿತಿಯು ರೈಲು ನಿಲ್ದಾಣದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿರಿಸುವಂತೆ ಆದೇಶ ನೀಡಿದೆ.</p><p>‘ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಯಾಣಿಕರನ್ನು ವಿಶೇಷ ರೈಲುಗಳ ಮೂಲಕ ಕಳುಹಿಸಿಕೊಡಲಾಗಿದೆ. ಯಥಾಸ್ಥಿತಿಯಂತೆ ರೈಲು ಸಂಚಾರ ಪ್ರಾರಂಭವಾಗಿದೆ’ ಎಂದು ದಿಲೀಪ್ ಅವರು ತಿಳಿಸಿದ್ದಾರೆ.</p><p>‘ರೈಲು ನಿಲ್ದಾಣದಲ್ಲಿ ದಟ್ಟಣೆ ಹೆಚ್ಚಿದ್ದರಿಂದ ನಾಲ್ಕು ಹೆಚ್ಚುವರಿ ರೈಲು ಸಂಚಾರಕ್ಕೆ ನಿರ್ಧರಿಸಲಾಗಿದೆ’ ಎಂದು ತಿಳಿಸಿದ್ದಾರೆ.</p><p>ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ ಕೆಲವು ರೈಲುಗಳು ವಿಳಂಬವಾದ ಕಾರಣ ಪ್ಲಾಟ್ಫಾರ್ಮ್ ಸಂಖ್ಯೆ 14ರ ಬಳಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಪ್ಲಾರ್ಟ್ಫಾರ್ಮ್ನಲ್ಲಿ ತಪ್ಪಾಗಿ ಪ್ರಕಟಣೆ ಹೊರಡಿಸಿದ್ದರಿಂದ ಗೊಂದಲವಾಗಿ ಕಾಲ್ತುಳಿತ ಸಂಭವಿಸಿರಬಹುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಲ್ತುಳಿತ ಪ್ರಕರಣದ ತನಿಖೆ ನಡೆಸಲು ಇಬ್ಬರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.</p><p>ಉತ್ತರ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ನರಸಿಂಗ್ ದೇವು ಮತ್ತು ಉತ್ತರ ರೈಲ್ವೆಯ ಪ್ರಧಾನ ಮುಖ್ಯ ಭದ್ರತಾ ಆಯುಕ್ತ ಪಂಕಜ್ ಗಂಗ್ವಾರ್ ಸಮಿತಿಯ ಸದಸ್ಯರಾಗಿದ್ದಾರೆ.</p><p>ಇಂದಿನಿಂದಲೇ ತನಿಖೆ ಆರಂಭಿಸಿರುವ ಸಮಿತಿಯು ರೈಲು ನಿಲ್ದಾಣದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿರಿಸುವಂತೆ ಆದೇಶ ನೀಡಿದೆ.</p><p>‘ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಯಾಣಿಕರನ್ನು ವಿಶೇಷ ರೈಲುಗಳ ಮೂಲಕ ಕಳುಹಿಸಿಕೊಡಲಾಗಿದೆ. ಯಥಾಸ್ಥಿತಿಯಂತೆ ರೈಲು ಸಂಚಾರ ಪ್ರಾರಂಭವಾಗಿದೆ’ ಎಂದು ದಿಲೀಪ್ ಅವರು ತಿಳಿಸಿದ್ದಾರೆ.</p><p>‘ರೈಲು ನಿಲ್ದಾಣದಲ್ಲಿ ದಟ್ಟಣೆ ಹೆಚ್ಚಿದ್ದರಿಂದ ನಾಲ್ಕು ಹೆಚ್ಚುವರಿ ರೈಲು ಸಂಚಾರಕ್ಕೆ ನಿರ್ಧರಿಸಲಾಗಿದೆ’ ಎಂದು ತಿಳಿಸಿದ್ದಾರೆ.</p><p>ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ ಕೆಲವು ರೈಲುಗಳು ವಿಳಂಬವಾದ ಕಾರಣ ಪ್ಲಾಟ್ಫಾರ್ಮ್ ಸಂಖ್ಯೆ 14ರ ಬಳಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಪ್ಲಾರ್ಟ್ಫಾರ್ಮ್ನಲ್ಲಿ ತಪ್ಪಾಗಿ ಪ್ರಕಟಣೆ ಹೊರಡಿಸಿದ್ದರಿಂದ ಗೊಂದಲವಾಗಿ ಕಾಲ್ತುಳಿತ ಸಂಭವಿಸಿರಬಹುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>