<p><strong>ತಿರುವನಂತಪುರ:</strong> ಕೇರಳದಲ್ಲಿ ಮತ್ತೆ ಎರಡು ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಇದುವರೆಗೆ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ತಿಳಿಸಿದ್ದಾರೆ.</p>.<p>ತಿರುವನಂತಪುರ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವೈರಾಲಜಿ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/students-who-failed-in-kerala-sslc-exam-get-free-biryani-hostel-stay-848690.html" itemprop="url">ಕೇರಳದಲ್ಲಿ ಎಸ್ಸೆಸ್ಸೆಲ್ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಬಿರಿಯಾನಿ! </a></p>.<p>ಝಿಕಾ ವೈರಸ್ ಹರಡುವುದನ್ನು ಸಮರ್ಪಕವಾಗಿ ನಿಭಾಯಿಸಲು ಆರೋಗ್ಯ ಸಚಿವೆ ಹಾಗೂ ಕಂದಾಯ ಸಚಿವ ಕೆ. ಬಾಲನ್ ನೇತೃತ್ವದಲ್ಲಿ ಸಭೆ ನಡೆಯಿತು. ಶುಚಿತ್ವಕ್ಕಾಗಿ ವಾರ್ಡ್ ಮಟ್ಟದಲ್ಲಿ ಸಮಿತಿ ಬಲಪಡಿಸಲು ತೀರ್ಮಾನಿಸಲಾಯಿತು.</p>.<p>ಕೇರಳದಲ್ಲಿ ಮಳೆಯಾಗುತ್ತಿದ್ದು, ಝಿಕಾ ಜೊತೆಗೆ ಡೆಂಗಿ ಪ್ರಕರಣಗಳು ವರದಿಯಾಗುತ್ತಿವೆ. ಹಾಗಾಗಿ ಎಲ್ಲ ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸಲು ಇಲಾಖೆಗಳು ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಮೂಡಿಬಂದಿದೆ.</p>.<p>ವೈದ್ಯಕೀಯ ಮೂಲಸೌಕರ್ಯಗಳ ವರ್ಧನೆ, ಸೊಳ್ಳೆಗಳ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಸ್ವಯಂಸೇವಾ ಸಂಸ್ಥೆಗಳ ಮೂಲಕ ಜನಜಾಗೃತಿ ಮೂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಕೋವಿಡ್-19 ನಿಯಂತ್ರಿಸಲು ಆದಷ್ಟು ಬೇಗನೇ ಲಸಿಕೆ ವಿತರಿಸಲು ಆದ್ಯತೆ ನೀಡಲು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ಮತ್ತೆ ಎರಡು ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಇದುವರೆಗೆ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ತಿಳಿಸಿದ್ದಾರೆ.</p>.<p>ತಿರುವನಂತಪುರ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವೈರಾಲಜಿ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/students-who-failed-in-kerala-sslc-exam-get-free-biryani-hostel-stay-848690.html" itemprop="url">ಕೇರಳದಲ್ಲಿ ಎಸ್ಸೆಸ್ಸೆಲ್ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಬಿರಿಯಾನಿ! </a></p>.<p>ಝಿಕಾ ವೈರಸ್ ಹರಡುವುದನ್ನು ಸಮರ್ಪಕವಾಗಿ ನಿಭಾಯಿಸಲು ಆರೋಗ್ಯ ಸಚಿವೆ ಹಾಗೂ ಕಂದಾಯ ಸಚಿವ ಕೆ. ಬಾಲನ್ ನೇತೃತ್ವದಲ್ಲಿ ಸಭೆ ನಡೆಯಿತು. ಶುಚಿತ್ವಕ್ಕಾಗಿ ವಾರ್ಡ್ ಮಟ್ಟದಲ್ಲಿ ಸಮಿತಿ ಬಲಪಡಿಸಲು ತೀರ್ಮಾನಿಸಲಾಯಿತು.</p>.<p>ಕೇರಳದಲ್ಲಿ ಮಳೆಯಾಗುತ್ತಿದ್ದು, ಝಿಕಾ ಜೊತೆಗೆ ಡೆಂಗಿ ಪ್ರಕರಣಗಳು ವರದಿಯಾಗುತ್ತಿವೆ. ಹಾಗಾಗಿ ಎಲ್ಲ ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸಲು ಇಲಾಖೆಗಳು ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಮೂಡಿಬಂದಿದೆ.</p>.<p>ವೈದ್ಯಕೀಯ ಮೂಲಸೌಕರ್ಯಗಳ ವರ್ಧನೆ, ಸೊಳ್ಳೆಗಳ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಸ್ವಯಂಸೇವಾ ಸಂಸ್ಥೆಗಳ ಮೂಲಕ ಜನಜಾಗೃತಿ ಮೂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಕೋವಿಡ್-19 ನಿಯಂತ್ರಿಸಲು ಆದಷ್ಟು ಬೇಗನೇ ಲಸಿಕೆ ವಿತರಿಸಲು ಆದ್ಯತೆ ನೀಡಲು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>