<p><strong>ಸುಕ್ಮಾ</strong>: ಭದ್ರತಾ ಸಿಬ್ಬಂದಿ ಮೇಲೆ ನಡೆದ ದಾಳಿಗಳಲ್ಲಿ ಭಾಗಿಯಾಗಿದ್ದ ಇಬ್ಬರು ನಕ್ಸಲರು ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಶುಕ್ರವಾರ ಪೊಲೀಸರಿಗೆ ಶರಣಾಗಿದ್ದಾರೆ. </p>.<p>ಈ ಇಬ್ಬರೂ ನಕ್ಸಲರ ಪತ್ತೆಗೆ ಶೋಧ ನಡೆಸುತ್ತಿದ್ದ ಪೊಲೀಸರು ಅವರ ಬಗ್ಗೆ ಸುಳಿವು ನೀಡಿದವರಿಗೆ ತಲಾ ₹8 ಲಕ್ಷದಂತೆ ಒಟ್ಟು ₹16 ಲಕ್ಷ ಬಹುಮಾನ ಘೋಷಿಸಿದ್ದರು. </p>.<p>ಟೊಳ್ಳು ವಿಚಾರಗಳಿಂದ ಪ್ರೇರಿತರಾಗಿ ತಾವು ಎಸಗಿದ ಕೃತ್ಯಗಳ ಬಗ್ಗೆ ಬೇಸರಗೊಂಡ ನಕ್ಸಲರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಹಿರಿಯ ಅಧಿಕಾರಿಗಳ ಬಳಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.</p>.<p>ಅಲ್ಲದೇ ರಾಜ್ಯ ಸರ್ಕಾರದ ನಕ್ಸಲ್ ನಿವಾರಣೆ ನೀತಿ ಮತ್ತು ಪೊಲೀಸರ ಪುನರ್ವಸತಿ ಯೋಜನೆಗಳಿಂದ ಪ್ರಭಾವಿತಗೊಂಡು ತಾವು ಶರಣಾಗಿರುವುದಾಗಿ ತಿಳಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ದಕ್ಷಿಣ ಬಸ್ತಾರ್ನಲ್ಲಿ ಸಕ್ರಿಯವಾಗಿದ್ದ ‘ಪಿಎಲ್ಜಿಎ’ ನಕ್ಸಲ್ ಗುಂಪಿನ ಸದಸ್ಯರಾಗಿದ್ದ ಮದ್ಕಮ್ ಸನ್ನಾ (35) ಮತ್ತು ಮದ್ಕಮ್ ಮುಯಾ (22) ಶರಣಾದ ನಕ್ಸಲರು. </p>.<p>ಈ ಇಬ್ಬರಿಗೂ ತಲಾ ₹25,000 ನೆರವು ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಕ್ಮಾ</strong>: ಭದ್ರತಾ ಸಿಬ್ಬಂದಿ ಮೇಲೆ ನಡೆದ ದಾಳಿಗಳಲ್ಲಿ ಭಾಗಿಯಾಗಿದ್ದ ಇಬ್ಬರು ನಕ್ಸಲರು ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಶುಕ್ರವಾರ ಪೊಲೀಸರಿಗೆ ಶರಣಾಗಿದ್ದಾರೆ. </p>.<p>ಈ ಇಬ್ಬರೂ ನಕ್ಸಲರ ಪತ್ತೆಗೆ ಶೋಧ ನಡೆಸುತ್ತಿದ್ದ ಪೊಲೀಸರು ಅವರ ಬಗ್ಗೆ ಸುಳಿವು ನೀಡಿದವರಿಗೆ ತಲಾ ₹8 ಲಕ್ಷದಂತೆ ಒಟ್ಟು ₹16 ಲಕ್ಷ ಬಹುಮಾನ ಘೋಷಿಸಿದ್ದರು. </p>.<p>ಟೊಳ್ಳು ವಿಚಾರಗಳಿಂದ ಪ್ರೇರಿತರಾಗಿ ತಾವು ಎಸಗಿದ ಕೃತ್ಯಗಳ ಬಗ್ಗೆ ಬೇಸರಗೊಂಡ ನಕ್ಸಲರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಹಿರಿಯ ಅಧಿಕಾರಿಗಳ ಬಳಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.</p>.<p>ಅಲ್ಲದೇ ರಾಜ್ಯ ಸರ್ಕಾರದ ನಕ್ಸಲ್ ನಿವಾರಣೆ ನೀತಿ ಮತ್ತು ಪೊಲೀಸರ ಪುನರ್ವಸತಿ ಯೋಜನೆಗಳಿಂದ ಪ್ರಭಾವಿತಗೊಂಡು ತಾವು ಶರಣಾಗಿರುವುದಾಗಿ ತಿಳಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ದಕ್ಷಿಣ ಬಸ್ತಾರ್ನಲ್ಲಿ ಸಕ್ರಿಯವಾಗಿದ್ದ ‘ಪಿಎಲ್ಜಿಎ’ ನಕ್ಸಲ್ ಗುಂಪಿನ ಸದಸ್ಯರಾಗಿದ್ದ ಮದ್ಕಮ್ ಸನ್ನಾ (35) ಮತ್ತು ಮದ್ಕಮ್ ಮುಯಾ (22) ಶರಣಾದ ನಕ್ಸಲರು. </p>.<p>ಈ ಇಬ್ಬರಿಗೂ ತಲಾ ₹25,000 ನೆರವು ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>