<p><strong>ತಿರುವನಂತಪುರ:</strong> ಕೇರಳದಲ್ಲಿ ಬಿಸಿಲಿನ ತಾಪದಿಂದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.</p>.<p>90 ವರ್ಷದ ವೃದ್ಧೆ ಮತ್ತು 53 ವರ್ಷದ ಪುರುಷರೊಬ್ಬರು ಬಿಸಿಲಿನ ತಾಪದಿಂದ ಭಾನುವಾರ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗರಿಷ್ಠ ತಾಪಮಾನವು 41.9 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 5.5 ಡಿಗ್ರಿ ಸೆಲ್ಸಿಯಸ್ನಷ್ಟು ಅಧಿಕವಾಗಿದೆ ಎಂದು ‘ದಿ ಹಿಂದೂ ಪತ್ರಿಕೆ’ ವರದಿ ಮಾಡಿದೆ.</p><p>ಬಿಸಿಲಿನ ತಾಪದಿಂದ ಈ ಸಾವು ಸಂಭವಿಸಿದೆಯೇ ಎಂದು ನಾವು ಇನ್ನೂ ಧೃಢೀಕರಿಸಿಲ್ಲ. ಮೃತದೇಹಗಳ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿ ಶೇಖರ್ ಕುರಿಯಾಕೋಸೆ ತಿಳಿಸಿದ್ದಾರೆ.</p><p>ಕೇರಳದಾದ್ಯಂತ ಬಿಸಿಲಿನ ತಾಪಮಾನವು ಸಾಮಾನ್ಯಕ್ಕಿಂತ ಏರಿಕೆಗೊಂಡಿದೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.</p><p>ಈ ವರ್ಷದ ಏಪ್ರಿಲ್ನಿಂದ ಜೂನ್ ನಡುವೆ ಸಾಮಾನ್ಯಕ್ಕಿಂತ ಅಧಿಕ ಬಿಸಿಗಾಳಿಯ ದಿನಗಳು ಇರಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ಬಿಸಿಲಿನ ತಾಪದಿಂದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.</p>.<p>90 ವರ್ಷದ ವೃದ್ಧೆ ಮತ್ತು 53 ವರ್ಷದ ಪುರುಷರೊಬ್ಬರು ಬಿಸಿಲಿನ ತಾಪದಿಂದ ಭಾನುವಾರ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗರಿಷ್ಠ ತಾಪಮಾನವು 41.9 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 5.5 ಡಿಗ್ರಿ ಸೆಲ್ಸಿಯಸ್ನಷ್ಟು ಅಧಿಕವಾಗಿದೆ ಎಂದು ‘ದಿ ಹಿಂದೂ ಪತ್ರಿಕೆ’ ವರದಿ ಮಾಡಿದೆ.</p><p>ಬಿಸಿಲಿನ ತಾಪದಿಂದ ಈ ಸಾವು ಸಂಭವಿಸಿದೆಯೇ ಎಂದು ನಾವು ಇನ್ನೂ ಧೃಢೀಕರಿಸಿಲ್ಲ. ಮೃತದೇಹಗಳ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿ ಶೇಖರ್ ಕುರಿಯಾಕೋಸೆ ತಿಳಿಸಿದ್ದಾರೆ.</p><p>ಕೇರಳದಾದ್ಯಂತ ಬಿಸಿಲಿನ ತಾಪಮಾನವು ಸಾಮಾನ್ಯಕ್ಕಿಂತ ಏರಿಕೆಗೊಂಡಿದೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.</p><p>ಈ ವರ್ಷದ ಏಪ್ರಿಲ್ನಿಂದ ಜೂನ್ ನಡುವೆ ಸಾಮಾನ್ಯಕ್ಕಿಂತ ಅಧಿಕ ಬಿಸಿಗಾಳಿಯ ದಿನಗಳು ಇರಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>