<p><strong>ಮೈನ್ಪುರಿ</strong>: ಉತ್ತರ ಪ್ರದೇಶ ಪೊಲೀಸರು ಮತ್ತು ಅರಣ್ಯ ಇಲಾಖೆಯ ಜಂಟಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 405 ಅಪರೂಪದ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಖಚಿತ ಮಾಹಿತಿ ಮೇರೆಗೆ ಕಾನ್ಪುರ ಪೊಲೀಸ್ ವಿಶೇಷ ಕಾರ್ಯಪಡೆ, ಮೈನ್ಪುರಿ ಅರಣ್ಯ ಶ್ರೇಣಿ ಮತ್ತು ಗೋರಖ್ಪುರದ ವನ್ಯಜೀವಿ ನಿಯಂತ್ರಣ ವಿಭಾಗದ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಉಸ್ರಾಹಾರ್ – ಕಿಶ್ನಿ ರಸ್ತೆಯಲ್ಲಿ ಅನುಮಾನಸ್ಪದ ಕಾರೊಂದನ್ನು ತಡೆದು ತಪಾಸಣೆ ನಡೆಸಲಾಯಿತು. ಈ ವೇಳೆ ಕಳ್ಳಸಾಗಣೆ ಮಾಡುತ್ತಿದ್ದ ಅಪರೂಪದ ಆಮೆಗಳನ್ನು ಪತ್ತೆ ಹಚ್ಚಲಾಯಿತು’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಪ್ರಕರಣ ಸಂಬಂಧ ಬರೇಲಿ ಮೂಲದ ಅಮಿತ್ ಯಾದವ್ ಮತ್ತು ಕುಲದೀಪ್ ಚತುರ್ವೇದಿ ಅವರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳಾದ ಸಂತೋಷ್ ಮತ್ತು ರೂಪ್ ಸಿಂಗ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಗಳು ಆಮೆಗಳನ್ನು ಉತ್ತರಾಖಂಡದ ಉಧಮ್ ಸಿಂಗ್ ನಗರಕ್ಕೆ ಸಾಗಿಸುತ್ತಿದ್ದರು, ಅಲ್ಲಿಂದ ಅವುಗಳನ್ನು ಚೀನಾಕ್ಕೆ ಕಳುಹಿಸಲು ಯೋಜಿಸಲಾಗಿತ್ತು. ಈ ಹಿಂದೆ ಆಮೆಗಳನ್ನು ಹಿಡಿದು ತಲಾ ₹8,000–10,000ಕ್ಕೆ ಮಾರಾಟ ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಲು ಎಸ್ಟಿಎಫ್ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಮೈನ್ಪುರಿ ಅರಣ್ಯ ವಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Maha Kumbh | ಶಿಂದೆಗೆ ಬಿಜೆಪಿ ತರಬೇತಿ ನೀಡಬೇಕು: ಸಂಜಯ್ ರಾವುತ್ ತಿರುಗೇಟು.Delhi Politics|ಮಾಸಿಕ ₹2,500 ನೀಡದ BJP: ಮಹಿಳೆಯರಿಗೆ ಮಾಡಿದ ದ್ರೋಹ ಎಂದ ಎಎಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈನ್ಪುರಿ</strong>: ಉತ್ತರ ಪ್ರದೇಶ ಪೊಲೀಸರು ಮತ್ತು ಅರಣ್ಯ ಇಲಾಖೆಯ ಜಂಟಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 405 ಅಪರೂಪದ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಖಚಿತ ಮಾಹಿತಿ ಮೇರೆಗೆ ಕಾನ್ಪುರ ಪೊಲೀಸ್ ವಿಶೇಷ ಕಾರ್ಯಪಡೆ, ಮೈನ್ಪುರಿ ಅರಣ್ಯ ಶ್ರೇಣಿ ಮತ್ತು ಗೋರಖ್ಪುರದ ವನ್ಯಜೀವಿ ನಿಯಂತ್ರಣ ವಿಭಾಗದ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಉಸ್ರಾಹಾರ್ – ಕಿಶ್ನಿ ರಸ್ತೆಯಲ್ಲಿ ಅನುಮಾನಸ್ಪದ ಕಾರೊಂದನ್ನು ತಡೆದು ತಪಾಸಣೆ ನಡೆಸಲಾಯಿತು. ಈ ವೇಳೆ ಕಳ್ಳಸಾಗಣೆ ಮಾಡುತ್ತಿದ್ದ ಅಪರೂಪದ ಆಮೆಗಳನ್ನು ಪತ್ತೆ ಹಚ್ಚಲಾಯಿತು’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಪ್ರಕರಣ ಸಂಬಂಧ ಬರೇಲಿ ಮೂಲದ ಅಮಿತ್ ಯಾದವ್ ಮತ್ತು ಕುಲದೀಪ್ ಚತುರ್ವೇದಿ ಅವರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳಾದ ಸಂತೋಷ್ ಮತ್ತು ರೂಪ್ ಸಿಂಗ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಗಳು ಆಮೆಗಳನ್ನು ಉತ್ತರಾಖಂಡದ ಉಧಮ್ ಸಿಂಗ್ ನಗರಕ್ಕೆ ಸಾಗಿಸುತ್ತಿದ್ದರು, ಅಲ್ಲಿಂದ ಅವುಗಳನ್ನು ಚೀನಾಕ್ಕೆ ಕಳುಹಿಸಲು ಯೋಜಿಸಲಾಗಿತ್ತು. ಈ ಹಿಂದೆ ಆಮೆಗಳನ್ನು ಹಿಡಿದು ತಲಾ ₹8,000–10,000ಕ್ಕೆ ಮಾರಾಟ ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಲು ಎಸ್ಟಿಎಫ್ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಮೈನ್ಪುರಿ ಅರಣ್ಯ ವಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Maha Kumbh | ಶಿಂದೆಗೆ ಬಿಜೆಪಿ ತರಬೇತಿ ನೀಡಬೇಕು: ಸಂಜಯ್ ರಾವುತ್ ತಿರುಗೇಟು.Delhi Politics|ಮಾಸಿಕ ₹2,500 ನೀಡದ BJP: ಮಹಿಳೆಯರಿಗೆ ಮಾಡಿದ ದ್ರೋಹ ಎಂದ ಎಎಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>