<p><strong>ಅಮರಾವತಿ, ಪುಣೆ:</strong> ದೇಹದ ಪ್ರತಿರೋಧ ವ್ಯವಸ್ಥೆಯು ನರಮಂಡಲದ ಮೇಲೆ ದಾಳಿ ಮಾಡುವ ವಿಚಿತ್ರ ಕಾಯಿಲೆ ಗೀಲನ್ ಬಾ ಸಿಂಡ್ರೋಮ್ಗೆ (GBS) ಆಂಧ್ರದಲ್ಲಿ ಮಹಿಳೆ ಹಾಗೂ ಒಬ್ಬ ಬಾಲಕ ಮೃತಪಟ್ಟಿದ್ದಾರೆ.</p><p>‘ಗುಂಟೂರಿನಲ್ಲಿ ಕಮಲಮ್ಮ ಎಂಬುವವರು ಹಾಗೂ ಶ್ರೀಕಾಕುಲಮ್ನಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಸದ್ಯ 17 ಸಕ್ರೀಯ ಪ್ರಕರಣಗಳಿವೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ. ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಇಬ್ಬರಲ್ಲಿ ಈ ಸೋಂಕು ಕಂಡುಬಂದಿದೆ. ಇದೊಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದ್ದು. ಏಕಾಏಕಿ ಎದುರಾಗಿಲ್ಲ’ ಎಂದು ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್ ತಿಳಿಸಿದ್ದಾರೆ.</p><p>‘2024ರಲ್ಲಿ ಒಟ್ಟು 267 ಜಿಬಿಎಸ್ ಪ್ರಕರಣಗಳು ಕಂಡುಬಂದಿದ್ದವು. ಇದರಲ್ಲಿ ವರ್ಷದ ಮೊದಲಾರ್ಧದಲ್ಲಿ 141 ಹಾಗೂ ದ್ವಿತೀಯಾರ್ಧದಲ್ಲಿ 126 ಪ್ರಕರಣಗಳು ದಾಖಲಾಗಿದ್ದವು. ಅಂದರೆ ತಿಂಗಳ ಸರಾಸರಿ 25 ಮೀರಿಲ್ಲ. ಈ ಸೋಂಕಿಗೆ ಒಳಗಾದವರು ಸಾಮಾನ್ಯ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಕೆಲವೇ ಕೆಲವು ಗಂಭೀರ ಪ್ರಕರಣಗಳಿಗೆ ಇಮ್ಯುನೊಗ್ಲಾಬ್ಯುಲಿನ್ ಚುಚ್ಚುಮದ್ದು ಪಡೆಯಬೇಕು. ಈ ಸೋಂಕಿನಿಂದ ದೇಹದ ರೋಗನಿರೋಧಕ ವ್ಯವಸ್ಥೆಯು ತಪ್ಪಾಗಿ ನರವ್ಯೂಹದ ಮೇಲೆ ದಾಳಿ ನಡೆಸುತ್ತದೆ. ಇದರಿಂದ ಮಾಂಸಖಂಡದಲ್ಲಿ ದುರ್ಬಲತೆ, ಮರಗಟ್ಟುವಿಕೆ ಹಾಗೂ ಜುಮ್ಮೆನಿಸುವಿಕೆಯ ಅನುಭವವಾಗಲಿದೆ. ತೀವ್ರ ಸಮಸ್ಯೆಗೆ ಒಳಗಾದವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುವುದು ಅನಿವಾರ್ಯ’ ಎಂದಿದ್ದಾರೆ.</p>.ಆಳ–ಅಗಲ | ಗೀಲನ್ ಬಾ ಸಿಂಡ್ರೋಮ್: ಇರಲಿ ಎಚ್ಚರ.<h4>ಅರೆಬರೆ ಬೆಂದ ಚಿಕನ್ ತಿನ್ನಬೇಡಿ: ಮಹಾರಾಷ್ಟ್ರ ಡಿಸಿಎಂ ಅಜಿತ್</h4><p>ಮಹಾರಾಷ್ಟ್ರದಲ್ಲಿ GBS ಉಲ್ಬಣಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅರೆಬರೆ ಬೆಂದ ಕೋಳಿಯ ಖಾದ್ಯವನ್ನು ಜನರು ಸೇವಿಸಬಾರದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮನವಿ ಮಾಡಿಕೊಂಡಿದ್ದಾರೆ.</p><p>‘ಪುಣೆಯ ಖಡಕ್ವಾಸ್ಲಾ ಡ್ಯಾಂ ಬಳಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಇದು ಕಲುಷಿತ ನೀರಿನಿಂದ ಹರಡಿದೆ ಎಂದು ಕೆಲವರು ಹೇಳಿದ್ದರು. ಇನ್ನೂ ಕೆಲವರು ಕೋಳಿ ಖಾದ್ಯ ಸೇವನೆಯಿಂದ ಹರಡುತ್ತಿದೆ ಎಂದೆನ್ನುತ್ತಿದ್ದಾರೆ. ಈ ಕುರಿತು ಕೂಲಂಕಷವಾಗಿ ತಪಾಸಣೆ ನಡೆಸಲಾಗಿದ್ದು, ಕೋಳಿಗಳನ್ನು ಕೊಲ್ಲುವ ಅವಕಶ್ಯತೆ ಇಲ್ಲ. ಆದರೆ ಕೋಳಿ ಮಾಂಸ ತಿನ್ನುವ ಅಭ್ಯಾಸ ಇರುವವರು, ಸಮರ್ಪಕವಾಗಿ ಬೇಯಿಸಿ ತಿನ್ನುವುದನ್ನು ರೂಢಿಸಿಕೊಳ್ಳಬೇಕು’ ಎಂದಿದ್ದಾರೆ.</p><p>ನೀರು ಮತ್ತು ಆಹಾರದಲ್ಲಿ ಬೆಳೆಯುವ ಕ್ಯಾಂಪಿಲೋಬ್ಯಾಕ್ಟರ್ ಜಿಜುನಿ ಎಂಬ ಬ್ಯಾಕ್ಟೀರಿಯಾ ಈ ಸೋಂಕು ಹರಡಲು ಕಾರಣ. ಹೀಗಾಗಿ ಆಹಾರವನ್ನು ಚೆನ್ನಾಗಿ ಬೇಯಿಸಿದ ನಂತರವೇ ತಿನ್ನಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಶನಿವಾರ ಮತ್ತೊಂದು ಹೊಸ ಪ್ರಕರಣ ಪತ್ತೆಯಾಗಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 208ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ, ಪುಣೆ:</strong> ದೇಹದ ಪ್ರತಿರೋಧ ವ್ಯವಸ್ಥೆಯು ನರಮಂಡಲದ ಮೇಲೆ ದಾಳಿ ಮಾಡುವ ವಿಚಿತ್ರ ಕಾಯಿಲೆ ಗೀಲನ್ ಬಾ ಸಿಂಡ್ರೋಮ್ಗೆ (GBS) ಆಂಧ್ರದಲ್ಲಿ ಮಹಿಳೆ ಹಾಗೂ ಒಬ್ಬ ಬಾಲಕ ಮೃತಪಟ್ಟಿದ್ದಾರೆ.</p><p>‘ಗುಂಟೂರಿನಲ್ಲಿ ಕಮಲಮ್ಮ ಎಂಬುವವರು ಹಾಗೂ ಶ್ರೀಕಾಕುಲಮ್ನಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಸದ್ಯ 17 ಸಕ್ರೀಯ ಪ್ರಕರಣಗಳಿವೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ. ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಇಬ್ಬರಲ್ಲಿ ಈ ಸೋಂಕು ಕಂಡುಬಂದಿದೆ. ಇದೊಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದ್ದು. ಏಕಾಏಕಿ ಎದುರಾಗಿಲ್ಲ’ ಎಂದು ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್ ತಿಳಿಸಿದ್ದಾರೆ.</p><p>‘2024ರಲ್ಲಿ ಒಟ್ಟು 267 ಜಿಬಿಎಸ್ ಪ್ರಕರಣಗಳು ಕಂಡುಬಂದಿದ್ದವು. ಇದರಲ್ಲಿ ವರ್ಷದ ಮೊದಲಾರ್ಧದಲ್ಲಿ 141 ಹಾಗೂ ದ್ವಿತೀಯಾರ್ಧದಲ್ಲಿ 126 ಪ್ರಕರಣಗಳು ದಾಖಲಾಗಿದ್ದವು. ಅಂದರೆ ತಿಂಗಳ ಸರಾಸರಿ 25 ಮೀರಿಲ್ಲ. ಈ ಸೋಂಕಿಗೆ ಒಳಗಾದವರು ಸಾಮಾನ್ಯ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಕೆಲವೇ ಕೆಲವು ಗಂಭೀರ ಪ್ರಕರಣಗಳಿಗೆ ಇಮ್ಯುನೊಗ್ಲಾಬ್ಯುಲಿನ್ ಚುಚ್ಚುಮದ್ದು ಪಡೆಯಬೇಕು. ಈ ಸೋಂಕಿನಿಂದ ದೇಹದ ರೋಗನಿರೋಧಕ ವ್ಯವಸ್ಥೆಯು ತಪ್ಪಾಗಿ ನರವ್ಯೂಹದ ಮೇಲೆ ದಾಳಿ ನಡೆಸುತ್ತದೆ. ಇದರಿಂದ ಮಾಂಸಖಂಡದಲ್ಲಿ ದುರ್ಬಲತೆ, ಮರಗಟ್ಟುವಿಕೆ ಹಾಗೂ ಜುಮ್ಮೆನಿಸುವಿಕೆಯ ಅನುಭವವಾಗಲಿದೆ. ತೀವ್ರ ಸಮಸ್ಯೆಗೆ ಒಳಗಾದವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುವುದು ಅನಿವಾರ್ಯ’ ಎಂದಿದ್ದಾರೆ.</p>.ಆಳ–ಅಗಲ | ಗೀಲನ್ ಬಾ ಸಿಂಡ್ರೋಮ್: ಇರಲಿ ಎಚ್ಚರ.<h4>ಅರೆಬರೆ ಬೆಂದ ಚಿಕನ್ ತಿನ್ನಬೇಡಿ: ಮಹಾರಾಷ್ಟ್ರ ಡಿಸಿಎಂ ಅಜಿತ್</h4><p>ಮಹಾರಾಷ್ಟ್ರದಲ್ಲಿ GBS ಉಲ್ಬಣಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅರೆಬರೆ ಬೆಂದ ಕೋಳಿಯ ಖಾದ್ಯವನ್ನು ಜನರು ಸೇವಿಸಬಾರದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮನವಿ ಮಾಡಿಕೊಂಡಿದ್ದಾರೆ.</p><p>‘ಪುಣೆಯ ಖಡಕ್ವಾಸ್ಲಾ ಡ್ಯಾಂ ಬಳಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಇದು ಕಲುಷಿತ ನೀರಿನಿಂದ ಹರಡಿದೆ ಎಂದು ಕೆಲವರು ಹೇಳಿದ್ದರು. ಇನ್ನೂ ಕೆಲವರು ಕೋಳಿ ಖಾದ್ಯ ಸೇವನೆಯಿಂದ ಹರಡುತ್ತಿದೆ ಎಂದೆನ್ನುತ್ತಿದ್ದಾರೆ. ಈ ಕುರಿತು ಕೂಲಂಕಷವಾಗಿ ತಪಾಸಣೆ ನಡೆಸಲಾಗಿದ್ದು, ಕೋಳಿಗಳನ್ನು ಕೊಲ್ಲುವ ಅವಕಶ್ಯತೆ ಇಲ್ಲ. ಆದರೆ ಕೋಳಿ ಮಾಂಸ ತಿನ್ನುವ ಅಭ್ಯಾಸ ಇರುವವರು, ಸಮರ್ಪಕವಾಗಿ ಬೇಯಿಸಿ ತಿನ್ನುವುದನ್ನು ರೂಢಿಸಿಕೊಳ್ಳಬೇಕು’ ಎಂದಿದ್ದಾರೆ.</p><p>ನೀರು ಮತ್ತು ಆಹಾರದಲ್ಲಿ ಬೆಳೆಯುವ ಕ್ಯಾಂಪಿಲೋಬ್ಯಾಕ್ಟರ್ ಜಿಜುನಿ ಎಂಬ ಬ್ಯಾಕ್ಟೀರಿಯಾ ಈ ಸೋಂಕು ಹರಡಲು ಕಾರಣ. ಹೀಗಾಗಿ ಆಹಾರವನ್ನು ಚೆನ್ನಾಗಿ ಬೇಯಿಸಿದ ನಂತರವೇ ತಿನ್ನಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಶನಿವಾರ ಮತ್ತೊಂದು ಹೊಸ ಪ್ರಕರಣ ಪತ್ತೆಯಾಗಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 208ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>