<p><strong>ಕಣ್ಣೂರು:</strong> ಕೇರಳದ ಉತ್ತರ ಭಾಗದ ಮೂಲ್ಯತೋಡು ಬಳಿಯ ಖಾಸಗಿ ಜಮೀನಿನಲ್ಲಿ ಮಂಗಳವಾರ ಎರಡು ಉಕ್ಕಿನ ಬಾಂಬ್ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ಕಳೆದ ವರ್ಷ, ಇದೇ ಜಾಗದಲ್ಲಿ ದೇಶಿ ಸ್ಫೋಟಕಗಳನ್ನು ತಯಾರಿಸುವ ವೇಳೆ ನಡೆದ ಅವಘಡದಲ್ಲಿ ಒಬ್ಬರು ಮೃತ ಪಟ್ಟಿದ್ದು, ಇನ್ನೊಬ್ಬರಿಗೆ ಗಂಭೀರ ಗಾಯವಾಗಿತ್ತು. </p><p>ಮಂಗಳವಾರ ಬೆಳಿಗ್ಗೆ, ಶಂಕಿತ ಸ್ಪೋಟಕಗಳು ಪತ್ತೆಯಾಗಿರುವ ಬಗ್ಗೆ, ಜಮೀನಿನ ಮಾಲೀಕ ನೀಡಿದ ಮಾಹಿತಿ ಮೇರೆಗೆ ತಕ್ಷಣವೇ ಪೊಲೀಸ್ ಹಾಗೂ ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಜಮೀನಿನ ಮಾಲೀಕನ ತಮ್ಮನು, ಕೃಷಿ ಕೆಲಸ ಮಾಡಲು ತೆರಳಿದಾಗ ಶಂಕಿತ ಸ್ಪೋಟಕಗಳು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. </p><p>ಸ್ಥಳದಲ್ಲಿ ಎರಡು ಉಕ್ಕಿನ ಬಾಂಬ್ಗಳು ಪತ್ತೆಯಾಗಿದ್ದು, ಅವುಗಳನ್ನು ಹೆಚ್ಚಿನ ಪರಿಶೀಲನೆಗೆ ತೆಗೆದುಕೊಂಡು ಹೋಗಲಾಗಿದೆ. ಪೊಲೀಸ್ ಹಾಗೂ ಬಾಂಬ್ ನಿಷ್ಕ್ರಿಯ ದಳವು, ಸ್ಥಳವನ್ನು ಪರಿಶೀಲನೆ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು:</strong> ಕೇರಳದ ಉತ್ತರ ಭಾಗದ ಮೂಲ್ಯತೋಡು ಬಳಿಯ ಖಾಸಗಿ ಜಮೀನಿನಲ್ಲಿ ಮಂಗಳವಾರ ಎರಡು ಉಕ್ಕಿನ ಬಾಂಬ್ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ಕಳೆದ ವರ್ಷ, ಇದೇ ಜಾಗದಲ್ಲಿ ದೇಶಿ ಸ್ಫೋಟಕಗಳನ್ನು ತಯಾರಿಸುವ ವೇಳೆ ನಡೆದ ಅವಘಡದಲ್ಲಿ ಒಬ್ಬರು ಮೃತ ಪಟ್ಟಿದ್ದು, ಇನ್ನೊಬ್ಬರಿಗೆ ಗಂಭೀರ ಗಾಯವಾಗಿತ್ತು. </p><p>ಮಂಗಳವಾರ ಬೆಳಿಗ್ಗೆ, ಶಂಕಿತ ಸ್ಪೋಟಕಗಳು ಪತ್ತೆಯಾಗಿರುವ ಬಗ್ಗೆ, ಜಮೀನಿನ ಮಾಲೀಕ ನೀಡಿದ ಮಾಹಿತಿ ಮೇರೆಗೆ ತಕ್ಷಣವೇ ಪೊಲೀಸ್ ಹಾಗೂ ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಜಮೀನಿನ ಮಾಲೀಕನ ತಮ್ಮನು, ಕೃಷಿ ಕೆಲಸ ಮಾಡಲು ತೆರಳಿದಾಗ ಶಂಕಿತ ಸ್ಪೋಟಕಗಳು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. </p><p>ಸ್ಥಳದಲ್ಲಿ ಎರಡು ಉಕ್ಕಿನ ಬಾಂಬ್ಗಳು ಪತ್ತೆಯಾಗಿದ್ದು, ಅವುಗಳನ್ನು ಹೆಚ್ಚಿನ ಪರಿಶೀಲನೆಗೆ ತೆಗೆದುಕೊಂಡು ಹೋಗಲಾಗಿದೆ. ಪೊಲೀಸ್ ಹಾಗೂ ಬಾಂಬ್ ನಿಷ್ಕ್ರಿಯ ದಳವು, ಸ್ಥಳವನ್ನು ಪರಿಶೀಲನೆ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>