<p><strong>ನವದೆಹಲಿ</strong>: 'ಉದಯಪುರ ಫೈಲ್ಸ್ - ಕನ್ಹಯ್ಯ ಲಾಲ್ ಟೈಲರ್ ಮರ್ಡರ್' ಚಿತ್ರದ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿರುವ ಸುಪ್ರೀಂ ಕೋರ್ಟ್, ಚಿತ್ರದ ವಿರುದ್ಧ ಆಕ್ಷೇಪಣೆಗಳನ್ನು ಆಲಿಸಲು ಕೇಂದ್ರವು ನೇಮಿಸಿರುವ ಸಮಿತಿಯ ನಿರ್ಧಾರಕ್ಕಾಗಿ ಕಾಯುವಂತೆ ಚಲನಚಿತ್ರ ನಿರ್ಮಾಪಕರಿಗೆ ಸೂಚಿಸಿದೆ.</p><p>ಸಮಿತಿಯು ಇಂದು ಮಧ್ಯಾಹ್ನ 2:30ಕ್ಕೆ ಸಭೆ ಸೇರಲಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಚಿತ್ರ ಬಿಡುಗಡೆ ಬಳಿಕ ಕನ್ಹಯ್ಯ ಲಾಲ್ ಟೈಲರ್ ಕೊಲೆ ಪ್ರಕರಣದ ಆರೋಪಿಗಳು ತಮ್ಮ ಮಾನಹಾನಿಗೆ ಪರಿಹಾರ ಕೋರಲು ಬರುವುದಿಲ್ಲ. ಆದರೆ, ಚಿತ್ರ ನಿರ್ಮಾಪಕರು ಪರಿಹಾರ ಕೋರಬಹುದು ಎಂದು ಹೇಳಿದೆ.</p><p>ಚಿತ್ರ ಬಿಡುಗಡೆಗೆ ತಡೆ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.</p><p>ಚಿತ್ರದ ಕುರಿತಂತೆ ವಾದಗಳನ್ನು ಆಲಿಸಿದ ನಂತರ ಸಮಯ ತೆಗೆದುಕೊಳ್ಳದೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳುವಂತೆ ಪೀಠವು ಕೇಂದ್ರದ ಸಮಿತಿಗೆ ಸೂಚಿಸಿದೆ.</p><p>ಜುಲೈ 11ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಜುಲೈ 10 ರಂದು ದೆಹಲಿ ಹೈಕೋರ್ಟ್ ತಡೆ ನೀಡಿತ್ತು.</p> .‘ಉದಯಪುರ ಫೈಲ್ಸ್’ಗೆ ತಡೆ: ದೆಹಲಿ HC ಆದೇಶ ಪ್ರಶ್ನಿಸಿ SC ಮೆಟ್ಟಿಲೇರಿದ ಚಿತ್ರತಂಡ.‘ಉದಯಪುರ ಫೈಲ್ಸ್’ ಬಿಡುಗಡೆಯಾಗಿ ಸತ್ಯ ಜಗತ್ತಿಗೆ ತಿಳಿಯಲಿ: ಕನ್ಹಯ್ಯ ಲಾಲ್ ಪತ್ನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ಉದಯಪುರ ಫೈಲ್ಸ್ - ಕನ್ಹಯ್ಯ ಲಾಲ್ ಟೈಲರ್ ಮರ್ಡರ್' ಚಿತ್ರದ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿರುವ ಸುಪ್ರೀಂ ಕೋರ್ಟ್, ಚಿತ್ರದ ವಿರುದ್ಧ ಆಕ್ಷೇಪಣೆಗಳನ್ನು ಆಲಿಸಲು ಕೇಂದ್ರವು ನೇಮಿಸಿರುವ ಸಮಿತಿಯ ನಿರ್ಧಾರಕ್ಕಾಗಿ ಕಾಯುವಂತೆ ಚಲನಚಿತ್ರ ನಿರ್ಮಾಪಕರಿಗೆ ಸೂಚಿಸಿದೆ.</p><p>ಸಮಿತಿಯು ಇಂದು ಮಧ್ಯಾಹ್ನ 2:30ಕ್ಕೆ ಸಭೆ ಸೇರಲಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಚಿತ್ರ ಬಿಡುಗಡೆ ಬಳಿಕ ಕನ್ಹಯ್ಯ ಲಾಲ್ ಟೈಲರ್ ಕೊಲೆ ಪ್ರಕರಣದ ಆರೋಪಿಗಳು ತಮ್ಮ ಮಾನಹಾನಿಗೆ ಪರಿಹಾರ ಕೋರಲು ಬರುವುದಿಲ್ಲ. ಆದರೆ, ಚಿತ್ರ ನಿರ್ಮಾಪಕರು ಪರಿಹಾರ ಕೋರಬಹುದು ಎಂದು ಹೇಳಿದೆ.</p><p>ಚಿತ್ರ ಬಿಡುಗಡೆಗೆ ತಡೆ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.</p><p>ಚಿತ್ರದ ಕುರಿತಂತೆ ವಾದಗಳನ್ನು ಆಲಿಸಿದ ನಂತರ ಸಮಯ ತೆಗೆದುಕೊಳ್ಳದೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳುವಂತೆ ಪೀಠವು ಕೇಂದ್ರದ ಸಮಿತಿಗೆ ಸೂಚಿಸಿದೆ.</p><p>ಜುಲೈ 11ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಜುಲೈ 10 ರಂದು ದೆಹಲಿ ಹೈಕೋರ್ಟ್ ತಡೆ ನೀಡಿತ್ತು.</p> .‘ಉದಯಪುರ ಫೈಲ್ಸ್’ಗೆ ತಡೆ: ದೆಹಲಿ HC ಆದೇಶ ಪ್ರಶ್ನಿಸಿ SC ಮೆಟ್ಟಿಲೇರಿದ ಚಿತ್ರತಂಡ.‘ಉದಯಪುರ ಫೈಲ್ಸ್’ ಬಿಡುಗಡೆಯಾಗಿ ಸತ್ಯ ಜಗತ್ತಿಗೆ ತಿಳಿಯಲಿ: ಕನ್ಹಯ್ಯ ಲಾಲ್ ಪತ್ನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>