<p><strong>ಮುಂಬೈ</strong>: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳ ಪೈಕಿ ಎಲ್ಲಿ ಆಡಳಿತ ಪಕ್ಷದ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೋ ಅಲ್ಲಿ ಆಯ್ಕೆಯನ್ನು ರದ್ದು ಮಾಡಿ ಮರುಚುನಾವಣೆ ನಡೆಸುವಂತೆ ಮಹಾರಾಷ್ಟ್ರ ರಾಜ್ಯದ ಚುನಾವಣಾ ಆಯೋಗಕ್ಕೆ ಶಿವಸೇನಾ(ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಒತ್ತಾಯಿಸಿದ್ದಾರೆ. ಆ ವಾರ್ಡ್ಗಳಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮರು ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಅಧ್ಯಕ್ಷ ರಾಜ್ ಠಾಕ್ರೆ ಅವರೊಂದಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉದ್ಧವ್, ಡೆಮಾಕ್ರಸಿ ಬದಲಿಗೆ ಮೋಬೊಕ್ರಸಿ ವಾತಾವರಣ ದೇಶದಲ್ಲಿದೆ ಎಂದು ಟೀಕಿಸಿದ್ದಾರೆ.</p><p>ಮುಂಬೈ ಸ್ಥಳೀಯ ಸಂಸ್ಥೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಠಾಕ್ರೆ ಸಹೋದರರು, ಮರಾಠಿ ಭಾಷೆಯನ್ನು ಗೌರವಿಸಬೇಕು. ಮುಂಬೈ ಮತ್ತು ಮಹಾರಾಷ್ಟ್ರದ ಇತರ ನಗರಗಳ ಮೇಯರ್ ಮರಾಠಿಗರೇ ಆಗಬೇಕು ಎಂದು ಹೇಳಿದರು.</p><p>ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಸಂಪತ್ತನ್ನು ಗುತ್ತಿಗೆದಾರರಿಗೆ ಪೋಲು ಮಾಡಲಾಗುತ್ತಿದೆ. ಬಿಎಂಸಿಯ ಬಜೆಟ್ ₹15,000 ಕೋಟಿಗಳಷ್ಟಿದ್ದರೆ, ವಿವಿಧ ಕಾಮಗಾರಿಗಳಿಗೆ ಗುತ್ತಿಗೆದಾರರಿಗೆ ನೀಡಲು ಬೇಕಾಗುವ ಮೊತ್ತ ₹3 ಲಕ್ಷ ಕೋಟಿಗಳಷ್ಟಿದೆ ಎಂದು ಅವರು ಹೇಳಿದ್ದಾರೆ.</p><p>ಇದು ₹3 ಲಕ್ಷ ಕೋಟಿಯ ಹಗರಣವಾಗಿದ್ದು, ಕಿಕ್ಬ್ಯಾಕ್ ಹಣವನ್ನು ಚುನಾವಣೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದರು.</p><p>ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ 68 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜನವರಿ 15ರಂದು ಮತದಾನ ನಡೆಯಲಿದೆ.</p><p>ಮತಗಳ್ಳತನದ ಬಳಿಕ ಬಿಜೆಪಿ ಈಗ ಅಭ್ಯರ್ಥಿಗಳನ್ನೇ ಕದಿಯುತ್ತಿದೆ. ಚುನಾವಣಾ ಆಯೋಗಕ್ಕೆ ಧೈರ್ಯವಿದ್ದರೆ, ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವ ಕಡೆ ಮತ್ತೆ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಉದ್ಧವ್ ಒತ್ತಾಯಿಸಿದ್ದಾರೆ.</p><p>ಅಭ್ಯರ್ಥಿಗಳ ಅವಿರೋಧ ಆಯ್ಕೆಯು ಮತದಾರರಿಗೆ ಹಕ್ಕು ನಿರಾಕರಿಸಿದಂತೆ. ಅದರಲ್ಲೂ ಝೆನ್–ಜಿ ಮತದಾರರ ಹಕ್ಕು ಕಸಿದಂತೆ ಎಂದಿದ್ದಾರೆ.</p><p>ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ಹಣದ ಆಮಿಷ ಮತ್ತು ಬೆದರಿಕೆವೊಡ್ಡುವ ಮೂಲಕ ನಾಮಪತ್ರ ಹಿಂಪಡೆಯುವಂತೆ ಮಾಡಲಾಗಿದೆ. ಈ ಹಿನ್ನೆಲೆ ವಿರೋಧ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುತ್ತಿದ್ದಾರೆ ಎಂದು ಸಂಜಯ್ ರಾವುತ್ ಸೇರಿದಂತೆ ಶಿವಸೇನಾದ(ಯುಬಿಟಿ) ಹಲವು ನಾಯಕರು ಆರೋಪಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳ ಪೈಕಿ ಎಲ್ಲಿ ಆಡಳಿತ ಪಕ್ಷದ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೋ ಅಲ್ಲಿ ಆಯ್ಕೆಯನ್ನು ರದ್ದು ಮಾಡಿ ಮರುಚುನಾವಣೆ ನಡೆಸುವಂತೆ ಮಹಾರಾಷ್ಟ್ರ ರಾಜ್ಯದ ಚುನಾವಣಾ ಆಯೋಗಕ್ಕೆ ಶಿವಸೇನಾ(ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಒತ್ತಾಯಿಸಿದ್ದಾರೆ. ಆ ವಾರ್ಡ್ಗಳಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮರು ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಅಧ್ಯಕ್ಷ ರಾಜ್ ಠಾಕ್ರೆ ಅವರೊಂದಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉದ್ಧವ್, ಡೆಮಾಕ್ರಸಿ ಬದಲಿಗೆ ಮೋಬೊಕ್ರಸಿ ವಾತಾವರಣ ದೇಶದಲ್ಲಿದೆ ಎಂದು ಟೀಕಿಸಿದ್ದಾರೆ.</p><p>ಮುಂಬೈ ಸ್ಥಳೀಯ ಸಂಸ್ಥೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಠಾಕ್ರೆ ಸಹೋದರರು, ಮರಾಠಿ ಭಾಷೆಯನ್ನು ಗೌರವಿಸಬೇಕು. ಮುಂಬೈ ಮತ್ತು ಮಹಾರಾಷ್ಟ್ರದ ಇತರ ನಗರಗಳ ಮೇಯರ್ ಮರಾಠಿಗರೇ ಆಗಬೇಕು ಎಂದು ಹೇಳಿದರು.</p><p>ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಸಂಪತ್ತನ್ನು ಗುತ್ತಿಗೆದಾರರಿಗೆ ಪೋಲು ಮಾಡಲಾಗುತ್ತಿದೆ. ಬಿಎಂಸಿಯ ಬಜೆಟ್ ₹15,000 ಕೋಟಿಗಳಷ್ಟಿದ್ದರೆ, ವಿವಿಧ ಕಾಮಗಾರಿಗಳಿಗೆ ಗುತ್ತಿಗೆದಾರರಿಗೆ ನೀಡಲು ಬೇಕಾಗುವ ಮೊತ್ತ ₹3 ಲಕ್ಷ ಕೋಟಿಗಳಷ್ಟಿದೆ ಎಂದು ಅವರು ಹೇಳಿದ್ದಾರೆ.</p><p>ಇದು ₹3 ಲಕ್ಷ ಕೋಟಿಯ ಹಗರಣವಾಗಿದ್ದು, ಕಿಕ್ಬ್ಯಾಕ್ ಹಣವನ್ನು ಚುನಾವಣೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದರು.</p><p>ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ 68 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜನವರಿ 15ರಂದು ಮತದಾನ ನಡೆಯಲಿದೆ.</p><p>ಮತಗಳ್ಳತನದ ಬಳಿಕ ಬಿಜೆಪಿ ಈಗ ಅಭ್ಯರ್ಥಿಗಳನ್ನೇ ಕದಿಯುತ್ತಿದೆ. ಚುನಾವಣಾ ಆಯೋಗಕ್ಕೆ ಧೈರ್ಯವಿದ್ದರೆ, ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವ ಕಡೆ ಮತ್ತೆ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಉದ್ಧವ್ ಒತ್ತಾಯಿಸಿದ್ದಾರೆ.</p><p>ಅಭ್ಯರ್ಥಿಗಳ ಅವಿರೋಧ ಆಯ್ಕೆಯು ಮತದಾರರಿಗೆ ಹಕ್ಕು ನಿರಾಕರಿಸಿದಂತೆ. ಅದರಲ್ಲೂ ಝೆನ್–ಜಿ ಮತದಾರರ ಹಕ್ಕು ಕಸಿದಂತೆ ಎಂದಿದ್ದಾರೆ.</p><p>ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ಹಣದ ಆಮಿಷ ಮತ್ತು ಬೆದರಿಕೆವೊಡ್ಡುವ ಮೂಲಕ ನಾಮಪತ್ರ ಹಿಂಪಡೆಯುವಂತೆ ಮಾಡಲಾಗಿದೆ. ಈ ಹಿನ್ನೆಲೆ ವಿರೋಧ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುತ್ತಿದ್ದಾರೆ ಎಂದು ಸಂಜಯ್ ರಾವುತ್ ಸೇರಿದಂತೆ ಶಿವಸೇನಾದ(ಯುಬಿಟಿ) ಹಲವು ನಾಯಕರು ಆರೋಪಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>