<p><strong>ಮುಂಬೈ:</strong> ಶಿವಸೇನಾದ ಬಂಡಾಯ ನಾಯಕ ಏಕನಾಥ ಶಿಂಧೆ ಅವರೊಂದಿಗೆ ಗುರುತಿಸಿಕೊಂಡಿರುವ ಸುಮಾರು 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಳಗ ಮಹಾರಾಷ್ಟ್ರದ ವಿಧಾನಸಭೆಯ ಉಪ ಸ್ಪೀಕರ್ಗೆ ಮನವಿ ಸಲ್ಲಿಸಲು ಚಿಂತಿಸಿದೆ.</p>.<p>ವಿಧಾನಸಭೆಯಲ್ಲಿ ಶಿವಸೇನಾ ಪಕ್ಷವನ್ನು ವಿಭಜಿಸುವುದಕ್ಕೆ ಅಗತ್ಯವಿರುವ 37 ಶಾಸಕರ ಸಂಖ್ಯೆಯನ್ನು ಗುವಾಹಟಿಯಲ್ಲಿರುವ ಬಂಡಾಯ ಗುಂಪು ಹೊಂದಿದೆ. ಈ ಮೂಲಕ ಅವರು ಪಕ್ಷಾಂತರ ನಿಷೇಧ ಕಾಯ್ದೆಯ ಅನರ್ಹತೆಯ ತೂಗುಕತ್ತಿಯಿಂದ ಪಾರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಇನ್ನು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ‘ಎಂವಿಎ ಸರ್ಕಾರದ ಭವಿಷ್ಯವನ್ನು ವಿಧಾನಸಭೆಯ ಮಹಡಿಯಲ್ಲಿ ನಿರ್ಧರಿಸಲಾಗುತ್ತದೆಯೇ ಹೊರತು ಗುವಾಹಟಿಯಲ್ಲಿ ಅಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ ಶಿವಸೇನಾದ ಬಂಡಾಯ ಶಾಸಕರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಅವರು ದೂರಿದ್ದಾರೆ.</p>.<p>‘ನಮ್ಮ ಬಂಡಾಯವನ್ನು ರಾಷ್ಟ್ರೀಯ ಪಕ್ಷವೊಂದು ಬೆಂಲಿಸಿದ್ದು, ಅಗತ್ಯ ನೆರವು ನೀಡುವ ಭರವಸೆ ನೀಡಿದೆ’ ಎಂದು ಶಿಂಧೆ ಅವರು ಗುವಾಹಟಿಯಲ್ಲಿ ಬಂಡಾಯ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ವಿಡಿಯೊ ಬಹಿರಂಗವಾದ ಬೆನ್ನಲ್ಲೇ ಶರದ್ ಪವಾರ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. </p>.<p>‘ಗುವಾಹಟಿಯಲ್ಲಿರುವ ಶಾಸಕರ ಪೈಕಿ 18ರಿಂದ 20 ಮಂದಿ ನಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಶಿವಸೇನಾದ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಶಿವಸೇನಾದ ಬಂಡಾಯ ನಾಯಕ ಏಕನಾಥ ಶಿಂಧೆ ಅವರೊಂದಿಗೆ ಗುರುತಿಸಿಕೊಂಡಿರುವ ಸುಮಾರು 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಳಗ ಮಹಾರಾಷ್ಟ್ರದ ವಿಧಾನಸಭೆಯ ಉಪ ಸ್ಪೀಕರ್ಗೆ ಮನವಿ ಸಲ್ಲಿಸಲು ಚಿಂತಿಸಿದೆ.</p>.<p>ವಿಧಾನಸಭೆಯಲ್ಲಿ ಶಿವಸೇನಾ ಪಕ್ಷವನ್ನು ವಿಭಜಿಸುವುದಕ್ಕೆ ಅಗತ್ಯವಿರುವ 37 ಶಾಸಕರ ಸಂಖ್ಯೆಯನ್ನು ಗುವಾಹಟಿಯಲ್ಲಿರುವ ಬಂಡಾಯ ಗುಂಪು ಹೊಂದಿದೆ. ಈ ಮೂಲಕ ಅವರು ಪಕ್ಷಾಂತರ ನಿಷೇಧ ಕಾಯ್ದೆಯ ಅನರ್ಹತೆಯ ತೂಗುಕತ್ತಿಯಿಂದ ಪಾರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಇನ್ನು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ‘ಎಂವಿಎ ಸರ್ಕಾರದ ಭವಿಷ್ಯವನ್ನು ವಿಧಾನಸಭೆಯ ಮಹಡಿಯಲ್ಲಿ ನಿರ್ಧರಿಸಲಾಗುತ್ತದೆಯೇ ಹೊರತು ಗುವಾಹಟಿಯಲ್ಲಿ ಅಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ ಶಿವಸೇನಾದ ಬಂಡಾಯ ಶಾಸಕರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಅವರು ದೂರಿದ್ದಾರೆ.</p>.<p>‘ನಮ್ಮ ಬಂಡಾಯವನ್ನು ರಾಷ್ಟ್ರೀಯ ಪಕ್ಷವೊಂದು ಬೆಂಲಿಸಿದ್ದು, ಅಗತ್ಯ ನೆರವು ನೀಡುವ ಭರವಸೆ ನೀಡಿದೆ’ ಎಂದು ಶಿಂಧೆ ಅವರು ಗುವಾಹಟಿಯಲ್ಲಿ ಬಂಡಾಯ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ವಿಡಿಯೊ ಬಹಿರಂಗವಾದ ಬೆನ್ನಲ್ಲೇ ಶರದ್ ಪವಾರ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. </p>.<p>‘ಗುವಾಹಟಿಯಲ್ಲಿರುವ ಶಾಸಕರ ಪೈಕಿ 18ರಿಂದ 20 ಮಂದಿ ನಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಶಿವಸೇನಾದ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>