<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಹಾಗೂ ಸೋದರ ಸಂಬಂಧಿ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಮೈತ್ರಿ ಮಾತುಗಳು ಕೇಳಿ ಬರುತ್ತಿರುವೆ.</p><p>ಇದಕ್ಕೆ ಪುಷ್ಟಿ ನೀಡುವಂತೆ ಉದ್ಧವ್ ಠಾಕ್ರೆ ‘ಮಹಾರಾಷ್ಟ್ರದ ಜನರು ಏನೇ ಬಯಸಿದರೂ ಅದು ಆಗುತ್ತದೆ’ ಎಂದು ಶುಕ್ರವಾರ ತಿಳಿಸಿದ್ದಾರೆ. ಹಾಗೂ ಮೈತ್ರಿಯ ಕುರಿತಂತೆ ಎರಡೂ ಪಕ್ಷಗಳ ಕಾರ್ಯಕರ್ತರ ಮನಸ್ಸಿನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.</p>.ಉದ್ಧವ್ ಠಾಕ್ರೆ–ರಾಜ್ ಠಾಕ್ರೆ ಒಂದಾಗುವುದನ್ನು ಸ್ವಾಗತಿಸುತ್ತೇವೆ: ಸುಪ್ರಿಯಾ ಸುಳೆ.ಉದ್ಧವ್–ರಾಜ್ ಠಾಕ್ರೆ ಕಲಹ: MNS, ಶಿವಸೇನಾ–ಯುಬಿಟಿ ಕಾರ್ಯಕರ್ತರ ಘರ್ಷಣೆ.<p>ಸೋದರ ಸಂಬಂಧಿಗಳಿಬ್ಬರು ಮೈತ್ರಿಗೆ ಸಂಬಂಧಿಸಿದಂತೆ ಈಚೆಗೆ ಹೇಳಿಕೆ ನೀಡಿದ್ದು, ಎರಡು ದಶಕಗಳ ಹಿಂದಿನ ಕಹಿಯನ್ನು ಮರೆತು ಒಂದಾಗಬಹುದು ಎಂದು ಹೇಳಲಾಗುತ್ತಿದೆ.</p><p>‘ಮರಾಠಿ ಭಾಷಿಕರ ಹಿತಾಸಕ್ತಿಗಾಗಿ ಒಗ್ಗೂಡುವುದು ಕಷ್ಟವೇನಲ್ಲ’ ಎಂದು ರಾಜ್ ಹೇಳಿದ್ದರೆ, ‘ಮಹಾರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸದಿದ್ದರೆ, ಕ್ಷುಲ್ಲಕ ವಿಚಾರಗಳನ್ನು ಬದಿಗಿಡಲು ಸಿದ್ಧ’ ಎಂದು ಉದ್ಧವ್ ಹೇಳಿದ್ದರು.</p><p>ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಪರಸ್ಪರ ಮಾತನಾಡಿದರೆ ಮಾತ್ರ ಮೈತ್ರಿ ಏರ್ಪಡಬಹುದು ಎಂದು ಎಂಎನ್ಎಸ್ ನಾಯಕ ಅಮಿತ್ ಠಾಕ್ರೆ ಮೈತ್ರಿಯ ಸಾಧ್ಯತೆಯ ಸುಳಿವು ನೀಡಿದ್ದಾರೆ.</p><p>ಮಹಾರಾಷ್ಟ್ರದ ಹಿತಾಸಕ್ತಿ ರಕ್ಷಿಸಲು ಯಾರಾದರೂ ನಮ್ಮೊಡನೆ ಒಗ್ಗೂಡಲು ಮುಂದಾದರೆ ಅವರನ್ನು ನಮ್ಮೊಟ್ಟಿಗೆ ಕರೆದೊಯ್ಯುತ್ತೇವೆ’ ಎಂದು ಉದ್ದವ್ ಪುತ್ರ ಆದಿತ್ಯ ಠಾಕ್ರೆ ಹೇಳಿದ್ದಾರೆ.</p>.ಆಪ್ತರೊಬ್ಬರು ತಂದ ಗಂಗಾಜಲವನ್ನು ಮುಟ್ಟಿ ನೋಡಲೂ ನಿರಾಕರಿಸಿದೆ: ರಾಜ್ ಠಾಕ್ರೆ.ಮಹಾರಾಷ್ಟ್ರ ಚುನಾವಣೆ: ಒಂದೂ ಸ್ಥಾನ ಗೆಲ್ಲದ ರಾಜ್ ಠಾಕ್ರೆ, ಪ್ರಕಾಶ್ ಅಂಬೇಡ್ಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಹಾಗೂ ಸೋದರ ಸಂಬಂಧಿ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಮೈತ್ರಿ ಮಾತುಗಳು ಕೇಳಿ ಬರುತ್ತಿರುವೆ.</p><p>ಇದಕ್ಕೆ ಪುಷ್ಟಿ ನೀಡುವಂತೆ ಉದ್ಧವ್ ಠಾಕ್ರೆ ‘ಮಹಾರಾಷ್ಟ್ರದ ಜನರು ಏನೇ ಬಯಸಿದರೂ ಅದು ಆಗುತ್ತದೆ’ ಎಂದು ಶುಕ್ರವಾರ ತಿಳಿಸಿದ್ದಾರೆ. ಹಾಗೂ ಮೈತ್ರಿಯ ಕುರಿತಂತೆ ಎರಡೂ ಪಕ್ಷಗಳ ಕಾರ್ಯಕರ್ತರ ಮನಸ್ಸಿನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.</p>.ಉದ್ಧವ್ ಠಾಕ್ರೆ–ರಾಜ್ ಠಾಕ್ರೆ ಒಂದಾಗುವುದನ್ನು ಸ್ವಾಗತಿಸುತ್ತೇವೆ: ಸುಪ್ರಿಯಾ ಸುಳೆ.ಉದ್ಧವ್–ರಾಜ್ ಠಾಕ್ರೆ ಕಲಹ: MNS, ಶಿವಸೇನಾ–ಯುಬಿಟಿ ಕಾರ್ಯಕರ್ತರ ಘರ್ಷಣೆ.<p>ಸೋದರ ಸಂಬಂಧಿಗಳಿಬ್ಬರು ಮೈತ್ರಿಗೆ ಸಂಬಂಧಿಸಿದಂತೆ ಈಚೆಗೆ ಹೇಳಿಕೆ ನೀಡಿದ್ದು, ಎರಡು ದಶಕಗಳ ಹಿಂದಿನ ಕಹಿಯನ್ನು ಮರೆತು ಒಂದಾಗಬಹುದು ಎಂದು ಹೇಳಲಾಗುತ್ತಿದೆ.</p><p>‘ಮರಾಠಿ ಭಾಷಿಕರ ಹಿತಾಸಕ್ತಿಗಾಗಿ ಒಗ್ಗೂಡುವುದು ಕಷ್ಟವೇನಲ್ಲ’ ಎಂದು ರಾಜ್ ಹೇಳಿದ್ದರೆ, ‘ಮಹಾರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸದಿದ್ದರೆ, ಕ್ಷುಲ್ಲಕ ವಿಚಾರಗಳನ್ನು ಬದಿಗಿಡಲು ಸಿದ್ಧ’ ಎಂದು ಉದ್ಧವ್ ಹೇಳಿದ್ದರು.</p><p>ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಪರಸ್ಪರ ಮಾತನಾಡಿದರೆ ಮಾತ್ರ ಮೈತ್ರಿ ಏರ್ಪಡಬಹುದು ಎಂದು ಎಂಎನ್ಎಸ್ ನಾಯಕ ಅಮಿತ್ ಠಾಕ್ರೆ ಮೈತ್ರಿಯ ಸಾಧ್ಯತೆಯ ಸುಳಿವು ನೀಡಿದ್ದಾರೆ.</p><p>ಮಹಾರಾಷ್ಟ್ರದ ಹಿತಾಸಕ್ತಿ ರಕ್ಷಿಸಲು ಯಾರಾದರೂ ನಮ್ಮೊಡನೆ ಒಗ್ಗೂಡಲು ಮುಂದಾದರೆ ಅವರನ್ನು ನಮ್ಮೊಟ್ಟಿಗೆ ಕರೆದೊಯ್ಯುತ್ತೇವೆ’ ಎಂದು ಉದ್ದವ್ ಪುತ್ರ ಆದಿತ್ಯ ಠಾಕ್ರೆ ಹೇಳಿದ್ದಾರೆ.</p>.ಆಪ್ತರೊಬ್ಬರು ತಂದ ಗಂಗಾಜಲವನ್ನು ಮುಟ್ಟಿ ನೋಡಲೂ ನಿರಾಕರಿಸಿದೆ: ರಾಜ್ ಠಾಕ್ರೆ.ಮಹಾರಾಷ್ಟ್ರ ಚುನಾವಣೆ: ಒಂದೂ ಸ್ಥಾನ ಗೆಲ್ಲದ ರಾಜ್ ಠಾಕ್ರೆ, ಪ್ರಕಾಶ್ ಅಂಬೇಡ್ಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>