<p><strong>ಮುಂಬೈ</strong>: ಸಾರ್ವಜನಿಕ ಸ್ಥಳದಲ್ಲಿ ಐಷಾರಾಮಿ ಹೋಟೆಲ್ ನಿರ್ಮಿಸಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣದ (ಯುಬಿಟಿ) ಶಾಸಕ ರವೀಂದ್ರ ವೇಕರ್ ಅವರು ಭಾನುವಾರ, ಮುಖ್ಯಮಂತ್ರಿ ಏಕನಾಥ ಶಿಂದೆ ಬಣ ಸೇರಿದ್ದಾರೆ.</p><p>ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತರಾಗಿದ್ದ ರವೀಂದ್ರ, ಮುಂಬೈನ ಜೋಗೇಶ್ವರಿ ಪೂರ್ವ ಕ್ಷೇತ್ರದ ಶಾಸಕ. ಅವರು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ವಿಚಾರವಾಗಿ ಒಂದು ದಿನದ ಹಿಂದಷ್ಟೇ ನಡೆದ ಸಭೆಯಲ್ಲಿ ಠಾಕ್ರೆ ಅವರೊಂದಿಗೆ ಪಾಲ್ಗೊಂಡಿದ್ದರು.</p><p>ರವೀಂದ್ರ ಅವರು, ಮಲಬಾರ್ ಹಿಲ್ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ವರ್ಷಾ'ದಲ್ಲಿ ಶಿವಸೇನಾಗೆ ಸೇರ್ಪಡೆಯಾದರು. ಬಳಿಕ ಮಾತನಾಡಿದ ಅವರು, ಶಿವಸೇನಾದೊಂದಿಗೆ ಕಳೆದ 50 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಿಂದೆ ಬಣ ಸೇರಿದ್ದೇನೆ ಎಂದು ಹೇಳಿದ್ದಾರೆ.</p><p>ಜೋಗೇಶ್ವರಿ ಹಾಗೂ ವಿಖ್ರೋಲಿ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕ್ರೀಡೆ ಹಾಗೂ ಮನರಂಜನಾ ಉದ್ದೇಶಕ್ಕಾಗಿ ಮೀಸಲಿರಿಸಿದ್ದ ಜಾಗದಲ್ಲಿ ಐಷಾರಾಮಿ ಹೋಟೆಲ್ ನಿರ್ಮಿಸಿದ ಆರೋಪ ರವೀಂದ್ರ ಅವರ ಮೇಲಿದೆ. ಈ ಸಂಬಂಧ ಇ.ಡಿ ವಿಚಾರಣೆ ನಡೆಸುತ್ತಿದೆ.</p><p>ಸಾರ್ವಜನಿಕ ಬಳಕೆಯ ಉದ್ದೇಶಕ್ಕಾಗಿ ಜಾಗವನ್ನು ರವೀಂದ್ರ ಹಾಗೂ ಇತರರಿಗೆ ನಿಯೋಜಿಸಲಾಗಿತ್ತು. ಆದರೆ, ಹಣ ಮಾಡುವ ಉದ್ದೇಶದಿಂದ ಇಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು, ಮುಂಬೈ ಮಹಾನಗರ ಪಾಲಿಕೆಗೆ ಸುಳ್ಳು ಮಾಹಿತಿ ನೀಡಿ 2021ರಲ್ಲಿ ಅನುಮತಿ ಪಡೆದಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಸಾರ್ವಜನಿಕ ಸ್ಥಳದಲ್ಲಿ ಐಷಾರಾಮಿ ಹೋಟೆಲ್ ನಿರ್ಮಿಸಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣದ (ಯುಬಿಟಿ) ಶಾಸಕ ರವೀಂದ್ರ ವೇಕರ್ ಅವರು ಭಾನುವಾರ, ಮುಖ್ಯಮಂತ್ರಿ ಏಕನಾಥ ಶಿಂದೆ ಬಣ ಸೇರಿದ್ದಾರೆ.</p><p>ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತರಾಗಿದ್ದ ರವೀಂದ್ರ, ಮುಂಬೈನ ಜೋಗೇಶ್ವರಿ ಪೂರ್ವ ಕ್ಷೇತ್ರದ ಶಾಸಕ. ಅವರು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ವಿಚಾರವಾಗಿ ಒಂದು ದಿನದ ಹಿಂದಷ್ಟೇ ನಡೆದ ಸಭೆಯಲ್ಲಿ ಠಾಕ್ರೆ ಅವರೊಂದಿಗೆ ಪಾಲ್ಗೊಂಡಿದ್ದರು.</p><p>ರವೀಂದ್ರ ಅವರು, ಮಲಬಾರ್ ಹಿಲ್ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ವರ್ಷಾ'ದಲ್ಲಿ ಶಿವಸೇನಾಗೆ ಸೇರ್ಪಡೆಯಾದರು. ಬಳಿಕ ಮಾತನಾಡಿದ ಅವರು, ಶಿವಸೇನಾದೊಂದಿಗೆ ಕಳೆದ 50 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಿಂದೆ ಬಣ ಸೇರಿದ್ದೇನೆ ಎಂದು ಹೇಳಿದ್ದಾರೆ.</p><p>ಜೋಗೇಶ್ವರಿ ಹಾಗೂ ವಿಖ್ರೋಲಿ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕ್ರೀಡೆ ಹಾಗೂ ಮನರಂಜನಾ ಉದ್ದೇಶಕ್ಕಾಗಿ ಮೀಸಲಿರಿಸಿದ್ದ ಜಾಗದಲ್ಲಿ ಐಷಾರಾಮಿ ಹೋಟೆಲ್ ನಿರ್ಮಿಸಿದ ಆರೋಪ ರವೀಂದ್ರ ಅವರ ಮೇಲಿದೆ. ಈ ಸಂಬಂಧ ಇ.ಡಿ ವಿಚಾರಣೆ ನಡೆಸುತ್ತಿದೆ.</p><p>ಸಾರ್ವಜನಿಕ ಬಳಕೆಯ ಉದ್ದೇಶಕ್ಕಾಗಿ ಜಾಗವನ್ನು ರವೀಂದ್ರ ಹಾಗೂ ಇತರರಿಗೆ ನಿಯೋಜಿಸಲಾಗಿತ್ತು. ಆದರೆ, ಹಣ ಮಾಡುವ ಉದ್ದೇಶದಿಂದ ಇಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು, ಮುಂಬೈ ಮಹಾನಗರ ಪಾಲಿಕೆಗೆ ಸುಳ್ಳು ಮಾಹಿತಿ ನೀಡಿ 2021ರಲ್ಲಿ ಅನುಮತಿ ಪಡೆದಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>