ಅಭಿವೃದ್ದಿ ಬಗ್ಗೆ ಮಾತನಾಡುವಾಗ ಎಲ್ಲರನ್ನೂ ಪರಿಗಣಿಸಬೇಕಾಗುತ್ತದೆ. ಆರೆಯಲ್ಲಿ ಮರಗಳ ಹನನವನ್ನು ಪರಿಸರ ಪ್ರೇಮಿಗಳು ವಿರೋಧಿಸಿದ್ದರು. ಅವರ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಭಾನುವಾರ ಸಂಜೆ ವಿಧಾನ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉದ್ಧವ್ ಹೇಳಿದ್ದಾರೆ.