<p><strong>ಮುಂಬೈ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅಭಿನಂದಿಸಿದ ಬಗ್ಗೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. </p><p>ಮಹಾರಾಷ್ಟ್ರದ ವಿರೋಧ ಪಕ್ಷಗಳ ಬಣವಾಗಿರುವ ಮಹಾ ವಿಕಾಸ್ ಅಘಾಡಿಯು (ಎಂವಿಎ) ಕೇಂದ್ರದ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿದೆ. ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್, ಶಿವಸೇನಾ (ಯುಬಿಟಿ), ಎನ್ಸಿಪಿ (ಎಸ್ಪಿ) ಗುರುತಿಸಿಕೊಂಡಿವೆ.</p><p>ನವದೆಹಲಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಶರದ್ ಪವಾರ್ ಅವರು 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುಣೆ ಮೂಲದ ಸರ್ಹಾದ್ ಅವರು ಸ್ಥಾಪಿಸಿದ ‘ಮಹದ್ಜಿ ಶಿಂದೆ ರಾಷ್ಟ್ರೀಯ ಗೌರವ ಪ್ರಶಸ್ತಿ’ಯನ್ನು ಡಿಸಿಎಂ ಏಕನಾಥ ಶಿಂದೆ ಅವರಿಗೆ ಪ್ರದಾನ ಮಾಡಿದ್ದಾರೆ. </p><p>ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ, ಮುರಳೀಧರ್ ಮೊಹೋಲ್ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.</p><p>‘ಶರದ್ ಪವಾರ್ ಸಾಹೇಬ್ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೋಗಬಾರದಿತ್ತು. ಮಹಾರಾಷ್ಟ್ರ ಇದನ್ನು ಇಷ್ಟಪಡುವುದಿಲ್ಲ’ ಎಂದು ಶಿವಸೇನಾ (ಯುಬಿಟಿ) ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಹೇಳಿದ್ದಾರೆ. </p><p>ಇದು ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನವಾಗಿರಲಿಲ್ಲ. ಬದಲಾಗಿ ರಾಜಕೀಯ ಸಮಾರಂಭವಾಗಿತ್ತು ಎಂದೂ ರಾವುತ್ ಕಿಡಿಕಾರಿದ್ದಾರೆ. </p><p>ಏತನ್ಮಧ್ಯೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಕಟವರ್ತಿ ಎಂದು ಪರಿಗಣಿಸಲಾದ ಎನ್ಸಿಪಿ ಎಂಎಲ್ಸಿ ಅಮೋಲ್ ಮಿಟ್ಕರಿ ಅವರು ಪ್ರಶಸ್ತಿ ಸ್ವೀಕರಿಸದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅಭಿನಂದಿಸಿದ ಬಗ್ಗೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. </p><p>ಮಹಾರಾಷ್ಟ್ರದ ವಿರೋಧ ಪಕ್ಷಗಳ ಬಣವಾಗಿರುವ ಮಹಾ ವಿಕಾಸ್ ಅಘಾಡಿಯು (ಎಂವಿಎ) ಕೇಂದ್ರದ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿದೆ. ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್, ಶಿವಸೇನಾ (ಯುಬಿಟಿ), ಎನ್ಸಿಪಿ (ಎಸ್ಪಿ) ಗುರುತಿಸಿಕೊಂಡಿವೆ.</p><p>ನವದೆಹಲಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಶರದ್ ಪವಾರ್ ಅವರು 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುಣೆ ಮೂಲದ ಸರ್ಹಾದ್ ಅವರು ಸ್ಥಾಪಿಸಿದ ‘ಮಹದ್ಜಿ ಶಿಂದೆ ರಾಷ್ಟ್ರೀಯ ಗೌರವ ಪ್ರಶಸ್ತಿ’ಯನ್ನು ಡಿಸಿಎಂ ಏಕನಾಥ ಶಿಂದೆ ಅವರಿಗೆ ಪ್ರದಾನ ಮಾಡಿದ್ದಾರೆ. </p><p>ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ, ಮುರಳೀಧರ್ ಮೊಹೋಲ್ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.</p><p>‘ಶರದ್ ಪವಾರ್ ಸಾಹೇಬ್ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೋಗಬಾರದಿತ್ತು. ಮಹಾರಾಷ್ಟ್ರ ಇದನ್ನು ಇಷ್ಟಪಡುವುದಿಲ್ಲ’ ಎಂದು ಶಿವಸೇನಾ (ಯುಬಿಟಿ) ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಹೇಳಿದ್ದಾರೆ. </p><p>ಇದು ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನವಾಗಿರಲಿಲ್ಲ. ಬದಲಾಗಿ ರಾಜಕೀಯ ಸಮಾರಂಭವಾಗಿತ್ತು ಎಂದೂ ರಾವುತ್ ಕಿಡಿಕಾರಿದ್ದಾರೆ. </p><p>ಏತನ್ಮಧ್ಯೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಕಟವರ್ತಿ ಎಂದು ಪರಿಗಣಿಸಲಾದ ಎನ್ಸಿಪಿ ಎಂಎಲ್ಸಿ ಅಮೋಲ್ ಮಿಟ್ಕರಿ ಅವರು ಪ್ರಶಸ್ತಿ ಸ್ವೀಕರಿಸದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>