<p><strong>ಕೊಚ್ಚಿ(ಕೇರಳ):</strong> ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಡ್ಡಿ ರಹಿತ ಸಾಲ ಸೇರಿದಂತೆ ಹಲವು ಭರವಸೆಗಳನ್ನು ಇಂದು(ಗುರುವಾರ) ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ನೀಡಿದೆ.</p><p>ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್, ಕೇರಳದ ಪ್ರತಿ ಕುಟುಂಬಕ್ಕೆ ₹25 ಲಕ್ಷ ವಿಮಾ ಯೋಜನೆಯನ್ನು ಒದಗಿಸಲಾಗುವುದು ಮತ್ತು ಸಣ್ಣ ಉದ್ಯಮಗಳಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.</p><p>‘ಕೇರಳ ರಾಜ್ಯ ಸಾರಿಗೆಯ ಎಲ್ಲಾ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಕಲ್ಯಾಣ ಪಿಂಚಣಿ ಮಾಸಿಕ ₹3 ಸಾವಿರ ಏರಿಕೆ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ ₹1 ಸಾವಿರ ಸಹಾಯಧನ ನೀಡಲಾಗುವುದು’ ಎಂದು ಹೇಳಿದ್ದಾರೆ.</p><p>ರಾಜ್ಯದಲ್ಲಿ ವಿಮಾನಯಾನ ಕ್ಷೇತ್ರದ ಅಭಿವೃದ್ಧಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ, ₹100 ಕೋಟಿ ವಹಿವಾಟು ಹೊಂದಿರುವ ಸಣ್ಣ ಉದ್ಯಮಗಳಿಗೆ ಹಣಕಾಸಿನ ನೆರವು ಮತ್ತು ವಯನಾಡಿನಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.</p><p>ಕೇರಳ ವಿಧಾನಸಭೆಗೆ ಏ.9ರಂದು ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ(ಕೇರಳ):</strong> ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಡ್ಡಿ ರಹಿತ ಸಾಲ ಸೇರಿದಂತೆ ಹಲವು ಭರವಸೆಗಳನ್ನು ಇಂದು(ಗುರುವಾರ) ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ನೀಡಿದೆ.</p><p>ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್, ಕೇರಳದ ಪ್ರತಿ ಕುಟುಂಬಕ್ಕೆ ₹25 ಲಕ್ಷ ವಿಮಾ ಯೋಜನೆಯನ್ನು ಒದಗಿಸಲಾಗುವುದು ಮತ್ತು ಸಣ್ಣ ಉದ್ಯಮಗಳಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.</p><p>‘ಕೇರಳ ರಾಜ್ಯ ಸಾರಿಗೆಯ ಎಲ್ಲಾ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಕಲ್ಯಾಣ ಪಿಂಚಣಿ ಮಾಸಿಕ ₹3 ಸಾವಿರ ಏರಿಕೆ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ ₹1 ಸಾವಿರ ಸಹಾಯಧನ ನೀಡಲಾಗುವುದು’ ಎಂದು ಹೇಳಿದ್ದಾರೆ.</p><p>ರಾಜ್ಯದಲ್ಲಿ ವಿಮಾನಯಾನ ಕ್ಷೇತ್ರದ ಅಭಿವೃದ್ಧಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ, ₹100 ಕೋಟಿ ವಹಿವಾಟು ಹೊಂದಿರುವ ಸಣ್ಣ ಉದ್ಯಮಗಳಿಗೆ ಹಣಕಾಸಿನ ನೆರವು ಮತ್ತು ವಯನಾಡಿನಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.</p><p>ಕೇರಳ ವಿಧಾನಸಭೆಗೆ ಏ.9ರಂದು ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>