<p><strong>ಚಂಡೀಗಢ:</strong> ಸ್ವಾತಂತ್ರ್ಯ ಹೋರಾಟಗಾರ ಉದಮ್ ಸಿಂಗ್ ಅವರ ಹುತಾತ್ಮ ದಿನವಾದ ಜುಲೈ 31ರಂದು ಸರ್ಕಾರಿ ರಜೆ ಘೋಷಿಸಿ ಪಂಜಾಬ್ ಸರ್ಕಾರ ಆದೇಶ ಹೊರಡಿಸಿದೆ. </p><p>ಪಂಜಾಬ್ನ ಸರ್ಕಾರಿ ಅಧಿಕಾರಿಗಳು, ಮಂಡಳಿಗಳು ಮತ್ತು ನಿಗಮಗಳಿಗೆ ರಜೆ ಘೋಷಿಸಲಾಗಿದೆ ಎಂದು ಪಂಜಾಬ್ನ ಸಚಿವ ಹಾಗೂ ಎಎಪಿ ರಾಜ್ಯಾಧ್ಯಕ್ಷ ಅಮನ್ ಅರೋರಾ ತಿಳಿಸಿದ್ದಾರೆ. </p><p>ಪಟಿಯಾಲ-ಭವಾನಿಗಢ ರಾಷ್ಟ್ರೀಯ ಹೆದ್ದಾರಿಗೆ ಉದಮ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ಹೇಳಿದ್ದಾರೆ. </p><p>ಉದಮ್ ಸಿಂಗ್ ಅವರ ಜನ್ಮಸ್ಥಳವಾದ ಸುನಮ್ನಲ್ಲಿ ಜುಲೈ 31ರಂದು ರಾಜ್ಯ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ಎಎಪಿ ರಾಷ್ಟ್ರೀಯ ವಕ್ತಾರ ಅರವಿಂದ್ ಕ್ರೇಜಿವಾಲ್ ಅವರು ಭಾಗವಹಿಸಲಿದ್ದಾರೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಸ್ವಾತಂತ್ರ್ಯ ಹೋರಾಟಗಾರ ಉದಮ್ ಸಿಂಗ್ ಅವರ ಹುತಾತ್ಮ ದಿನವಾದ ಜುಲೈ 31ರಂದು ಸರ್ಕಾರಿ ರಜೆ ಘೋಷಿಸಿ ಪಂಜಾಬ್ ಸರ್ಕಾರ ಆದೇಶ ಹೊರಡಿಸಿದೆ. </p><p>ಪಂಜಾಬ್ನ ಸರ್ಕಾರಿ ಅಧಿಕಾರಿಗಳು, ಮಂಡಳಿಗಳು ಮತ್ತು ನಿಗಮಗಳಿಗೆ ರಜೆ ಘೋಷಿಸಲಾಗಿದೆ ಎಂದು ಪಂಜಾಬ್ನ ಸಚಿವ ಹಾಗೂ ಎಎಪಿ ರಾಜ್ಯಾಧ್ಯಕ್ಷ ಅಮನ್ ಅರೋರಾ ತಿಳಿಸಿದ್ದಾರೆ. </p><p>ಪಟಿಯಾಲ-ಭವಾನಿಗಢ ರಾಷ್ಟ್ರೀಯ ಹೆದ್ದಾರಿಗೆ ಉದಮ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ಹೇಳಿದ್ದಾರೆ. </p><p>ಉದಮ್ ಸಿಂಗ್ ಅವರ ಜನ್ಮಸ್ಥಳವಾದ ಸುನಮ್ನಲ್ಲಿ ಜುಲೈ 31ರಂದು ರಾಜ್ಯ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ಎಎಪಿ ರಾಷ್ಟ್ರೀಯ ವಕ್ತಾರ ಅರವಿಂದ್ ಕ್ರೇಜಿವಾಲ್ ಅವರು ಭಾಗವಹಿಸಲಿದ್ದಾರೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>