ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಉಧಂಪುರ್‌ನಲ್ಲಿ ಕಣಿವೆಗೆ ಉರುಳಿ ಬಿದ್ದ ಬಸ್: 6 ಸಾವು, 35 ಮಂದಿಗೆ ಗಾಯ

Last Updated 2 ಮಾರ್ಚ್ 2019, 5:07 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನಲ್ಲಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದು 6 ಮಂದಿ ಸಾವಿಗೀಡಾಗಿದ್ದಾರೆ.

ಓರ್ವ ಮಹಿಳೆ ಸೇರಿದಂತೆ 6 ಮಂದಿ ಸಾವಿಗೀಡಾಗಿದ್ದು, 35 ಮಂದಿಗೆ ಗಾಯಗಳಾಗಿವೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಬಸ್ ಶ್ರೀನಗರಕ್ಕೆ ಹೋಗುತ್ತಿದ್ದಾಗ ಶುಕ್ರವಾರ ಮಧ್ಯರಾತ್ರಿ 12.30ಕ್ಕೆ ಇಲ್ಲಿನ ಮಜಲ್ತಾ ಎಂಬಲ್ಲಿರುವ ಚನೇರ್ ಪ್ರದೇಶದ ಬಳಿಅಪಘಾತ ಸಂಭವಿಸಿತ್ತು.

5 ಮಂದಿ ಸ್ಥಳದಲ್ಲಿಯೇ ಮೃತರಾಗಿದ್ದು, ಗಂಭೀರ ಗಾಯಗೊಂಡ ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.35 ಮಂದಿಗೆ ಗಾಯಗಳಾಗಿವೆ ಎಂದು ಉಧಂಪುರ್ಎಸ್‍ಎಸ್‍ಪಿ ರಾಜೀವ್ ಪಾಂಡೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT