<p><strong>ಚೆನ್ನೈ: </strong>ಸಂಸ್ಕೃತವು ಮೃತ ಭಾಷೆ ಎಂದು ತಮಿಳುನಾಡಿನ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಶುಕ್ರವಾರ ಹೇಳಿದರು.</p>.<p>ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ‘ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರಸರ್ಕಾರ ₹150 ಕೋಟಿ ಮಾತ್ರ ಮೀಸಲಿರಿಸಿದೆ. ಆದರೆ ಸತ್ತು ಹೋಗಿರುವ ಭಾಷೆ ಸಂಸ್ಕೃತಕ್ಕೆ ₹2,400 ಕೋಟಿ ಮೀಸಲಿರಿಸಲಾಗಿದೆ’ ಎಂದು ಟೀಕಿಸಿದರು.</p>.<p>ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ನಾಯಕಿ ತಮಿಳ್ ಇಸೈ ಸೌಂದರರಾಜನ್, ‘ಯಾವುದೇ ಭಾಷೆ ಸತ್ತಿದೆ ಎಂದು ಹೇಳಲು ಯಾರಿಗೂ ಅಧಿಕಾರವಿಲ್ಲ. ಅದರಲ್ಲೂ ದೇಶದಲ್ಲಿ ಈಗಲೂ ಪ್ರಾರ್ಥನೆ ಮತ್ತು ಆಚರಣೆಯಲ್ಲಿ ಬಳಕೆಯಾಗುತ್ತಿರುವ ಭಾಷೆಯನ್ನು ಹಾಗೆ ಕರೆಯಬಾರದು’ ಎಂದು ಹೇಳಿದರು. </p>.<p>‘ಒಂದು ಭಾಷೆಯನ್ನು ಎತ್ತಿ ಹಿಡಿಯಲು ಇನ್ನೊಂದು ಭಾಷೆಯನ್ನು ತಿರಸ್ಕರಿಸುವುದು ಸರಿಯಲ್ಲ. ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಮಾತನಾಡುವಾಗ ನಾಯಕರು ಜವಾಬ್ದಾರಿಯುತರಾಗಿರಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಸಂಸ್ಕೃತವು ಮೃತ ಭಾಷೆ ಎಂದು ತಮಿಳುನಾಡಿನ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಶುಕ್ರವಾರ ಹೇಳಿದರು.</p>.<p>ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ‘ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರಸರ್ಕಾರ ₹150 ಕೋಟಿ ಮಾತ್ರ ಮೀಸಲಿರಿಸಿದೆ. ಆದರೆ ಸತ್ತು ಹೋಗಿರುವ ಭಾಷೆ ಸಂಸ್ಕೃತಕ್ಕೆ ₹2,400 ಕೋಟಿ ಮೀಸಲಿರಿಸಲಾಗಿದೆ’ ಎಂದು ಟೀಕಿಸಿದರು.</p>.<p>ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ನಾಯಕಿ ತಮಿಳ್ ಇಸೈ ಸೌಂದರರಾಜನ್, ‘ಯಾವುದೇ ಭಾಷೆ ಸತ್ತಿದೆ ಎಂದು ಹೇಳಲು ಯಾರಿಗೂ ಅಧಿಕಾರವಿಲ್ಲ. ಅದರಲ್ಲೂ ದೇಶದಲ್ಲಿ ಈಗಲೂ ಪ್ರಾರ್ಥನೆ ಮತ್ತು ಆಚರಣೆಯಲ್ಲಿ ಬಳಕೆಯಾಗುತ್ತಿರುವ ಭಾಷೆಯನ್ನು ಹಾಗೆ ಕರೆಯಬಾರದು’ ಎಂದು ಹೇಳಿದರು. </p>.<p>‘ಒಂದು ಭಾಷೆಯನ್ನು ಎತ್ತಿ ಹಿಡಿಯಲು ಇನ್ನೊಂದು ಭಾಷೆಯನ್ನು ತಿರಸ್ಕರಿಸುವುದು ಸರಿಯಲ್ಲ. ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಮಾತನಾಡುವಾಗ ನಾಯಕರು ಜವಾಬ್ದಾರಿಯುತರಾಗಿರಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>