<p><strong>ಚೆನ್ನೈ</strong>: ಸನಾತನ ಧರ್ಮವು ಜನರನ್ನು ವಿಭಜಿಸುತ್ತದೆ ಎಂದು ಹೇಳಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಆ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು 2023ರ ಸೆಪ್ಟೆಂಬರ್ನಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ.</p><p>ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮಾಡಿದ ತಮ್ಮ ಚೊಚ್ಚಲ ಭಾಷಣದಲ್ಲಿ, ‘ಜನರನ್ನು ವಿಭಜಿಸುವ ಸನಾತನ ಧರ್ಮವನ್ನು ಖಂಡಿತವಾಗಿಯೂ ನಿರ್ಮೂಲನೆ ಮಾಡಬೇಕು’ಎಂದು ಹೇಳಿದ್ದಾರೆ.</p><p>ಇದೇವೇಳೆ, ನಾಡ ಗೀತೆ ತಮಿಳ್ ತಾಯ್ ವಾಲ್ತು ಅನ್ನು ಬದಿಗಿಡುವ ಯಾವುದೇ ಪ್ರಯತ್ನಕ್ಕೆ ವಿರೋಧ ಪಕ್ಷವು ಅನುವು ಮಾಡಿಕೊಡುವುದಿಲ್ಲ ಎಂದಿದ್ದಾರೆ.</p><p>2023ರಲ್ಲಿ ಅವರು ನೀಡಿದ್ದ ಇದೇ ರೀತಿಯ ಹೇಳಿಕೆಗಳು ದೊಡ್ಡ ವಿವಾದವನ್ನು ಸೃಷ್ಟಿಸಿದ್ದವು. ಬಳಿಕ, ಉದಯನಿಧಿ ಹಿಂದೂ ಪರ ಸಂಘಟನೆಗಳಿಂದ ಟೀಕೆ ಮತ್ತು ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಎದುರಿಸಬೇಕಾಯಿತು.</p><p>ನೂತನ ಸರ್ಕಾರದ ಇತ್ತೀಚಿನ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಂದೇ ಮಾತರಂ, ಜನ ಗಣ ಮನ ಬಳಿಕ ಮೂರನೇ ಸ್ಥಾನದಲ್ಲಿ ನಾಡ ಗೀತೆ ಹಾಡಿದ್ದ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು.</p><p>‘ನಿಮ್ಮ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ನಡೆದ ಇಂತಹ ತಪ್ಪು ನಡೆದಿದ್ದು, ಈ ವಿಧಾನಸಭೆಯಲ್ಲಿ ಮತ್ತೆ ಅದು ಮರುಕಳಿಸಲು ಅವಕಾಶ ನೀಡಬಾರದು. ನಾವು ಅದಕ್ಕೆ ಅನುವು ಮಾಡಿಕೊಡುವುದಿಲ್ಲ’ ಎಂದಿದ್ದಾರೆ.</p><p>ನಮ್ಮ ಸಂಪ್ರದಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸರ್ಕಾರ ಖಚಿತಪಡಿಸಬೇಕು. ನಮ್ಮ ಸಂಪ್ರದಾಯ ಮತ್ತು ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರ ಅತ್ಯಂತ ಜಾಗರೂಕವಾಗಿರಬೇಕು ಎಂದಿದ್ದಾರೆ.</p><p>2023ರಲ್ಲಿ ರಾಜ್ಯಪಾಲರು ಶಿಷ್ಟಾಚಾರದಲ್ಲಿ ಬದಲಾವಣೆ ಮಾಡಲು ಮುಂದಾದಾಗ ತಮ್ಮ ಸರ್ಕಾರ ಅವಕಾಶ ನೀಡಲಿಲ್ಲ ಎಂಬುದನ್ನು ಉದಯನಿಧಿ ನೆನಪಿಸಿದ್ದಾರೆ.</p> .ಇಂಧನ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ: ಮೋದಿ ಉಳಿತಾಯ ಮಂತ್ರದ ಸುತ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಸನಾತನ ಧರ್ಮವು ಜನರನ್ನು ವಿಭಜಿಸುತ್ತದೆ ಎಂದು ಹೇಳಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಆ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು 2023ರ ಸೆಪ್ಟೆಂಬರ್ನಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ.</p><p>ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮಾಡಿದ ತಮ್ಮ ಚೊಚ್ಚಲ ಭಾಷಣದಲ್ಲಿ, ‘ಜನರನ್ನು ವಿಭಜಿಸುವ ಸನಾತನ ಧರ್ಮವನ್ನು ಖಂಡಿತವಾಗಿಯೂ ನಿರ್ಮೂಲನೆ ಮಾಡಬೇಕು’ಎಂದು ಹೇಳಿದ್ದಾರೆ.</p><p>ಇದೇವೇಳೆ, ನಾಡ ಗೀತೆ ತಮಿಳ್ ತಾಯ್ ವಾಲ್ತು ಅನ್ನು ಬದಿಗಿಡುವ ಯಾವುದೇ ಪ್ರಯತ್ನಕ್ಕೆ ವಿರೋಧ ಪಕ್ಷವು ಅನುವು ಮಾಡಿಕೊಡುವುದಿಲ್ಲ ಎಂದಿದ್ದಾರೆ.</p><p>2023ರಲ್ಲಿ ಅವರು ನೀಡಿದ್ದ ಇದೇ ರೀತಿಯ ಹೇಳಿಕೆಗಳು ದೊಡ್ಡ ವಿವಾದವನ್ನು ಸೃಷ್ಟಿಸಿದ್ದವು. ಬಳಿಕ, ಉದಯನಿಧಿ ಹಿಂದೂ ಪರ ಸಂಘಟನೆಗಳಿಂದ ಟೀಕೆ ಮತ್ತು ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಎದುರಿಸಬೇಕಾಯಿತು.</p><p>ನೂತನ ಸರ್ಕಾರದ ಇತ್ತೀಚಿನ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಂದೇ ಮಾತರಂ, ಜನ ಗಣ ಮನ ಬಳಿಕ ಮೂರನೇ ಸ್ಥಾನದಲ್ಲಿ ನಾಡ ಗೀತೆ ಹಾಡಿದ್ದ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು.</p><p>‘ನಿಮ್ಮ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ನಡೆದ ಇಂತಹ ತಪ್ಪು ನಡೆದಿದ್ದು, ಈ ವಿಧಾನಸಭೆಯಲ್ಲಿ ಮತ್ತೆ ಅದು ಮರುಕಳಿಸಲು ಅವಕಾಶ ನೀಡಬಾರದು. ನಾವು ಅದಕ್ಕೆ ಅನುವು ಮಾಡಿಕೊಡುವುದಿಲ್ಲ’ ಎಂದಿದ್ದಾರೆ.</p><p>ನಮ್ಮ ಸಂಪ್ರದಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸರ್ಕಾರ ಖಚಿತಪಡಿಸಬೇಕು. ನಮ್ಮ ಸಂಪ್ರದಾಯ ಮತ್ತು ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರ ಅತ್ಯಂತ ಜಾಗರೂಕವಾಗಿರಬೇಕು ಎಂದಿದ್ದಾರೆ.</p><p>2023ರಲ್ಲಿ ರಾಜ್ಯಪಾಲರು ಶಿಷ್ಟಾಚಾರದಲ್ಲಿ ಬದಲಾವಣೆ ಮಾಡಲು ಮುಂದಾದಾಗ ತಮ್ಮ ಸರ್ಕಾರ ಅವಕಾಶ ನೀಡಲಿಲ್ಲ ಎಂಬುದನ್ನು ಉದಯನಿಧಿ ನೆನಪಿಸಿದ್ದಾರೆ.</p> .ಇಂಧನ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ: ಮೋದಿ ಉಳಿತಾಯ ಮಂತ್ರದ ಸುತ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>